ಮೋದಿ ಅಧಿಕಾರಕ್ಕೆ ಬರಲು 4 ರಾಜ್ಯ ಗೆಲ್ಲಬೇಕು: ಡಾ. ಸಂದೀಪ್
Recommended Video
ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆ ಸಮರದಲ್ಲಿ ಈ ಬಾರಿ ಬಂದಿರುವ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಬಹುತೇಕ ಎನ್ಡಿಎ ಮುಂದಿದೆ. ಆದರೆ, ಬಿಜೆಪಿ ಮ್ಯಾಜಿಕ್ ನಂಬರ್ 272 ದಾಟಲು ತಿಣುಕಾಡುತ್ತಿದೆ. ಬಿಜೆಪಿ ಸ್ವಯಂಬಲದಿಂದ ಬಹುಮತ ಗಳಿಸುವುದು ಯಾಕೋ ಕಷ್ಟವೆನಿಸುತ್ತಿದೆ ಎಂದು ರಾಜಕೀಯ ತಜ್ಞ ಡಾ. ಸಂದೀಪ್ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕೇಂದ್ರ ಬಜೆಟ್, ಪುಲ್ವಾಮಾ ದಾಳಿ ನಂತರ ಬಾಲಕೋಟ್, ಮುಜಾಫರಬಾದ್ ಹಾಗೂ ಚಕೋತಿ ಮೇಲೆ ದಾಳಿ ನಡೆಸಿ, ಉಗ್ರರನ್ನು ಸದೆಬಡಿದ್ದು, ಮೇಲ್ವರ್ಗದ ಬಡವರಿಗೆ ಶೇ 10ರಷ್ಟು ಮೀಸಲಾತಿ ಒದಗಿಸಿದ್ದು ಮೋದಿ ಸರ್ಕಾರದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ ಹುಟ್ಟು ಹಾಕಿದೆ ಎಂದರೆ ತಪ್ಪಾಗಲಾರದು. ಇನ್ನೊಂದೆಡೆ, ಕಾಂಗ್ರೆಸ್ ತನ್ನ ಸ್ಥಳೀಯ ಮಟ್ಟದ ಪ್ರಣಾಳಿಕೆಗಳ ಮೂಲಕ ನ್ಯಾಯ ಒದಗಿಸುವ ಮಾತನಾಡುತ್ತಿದೆ.
ಈ ನಿಟ್ಟಿನಲ್ಲಿ ಡಾ. ಸಂದೀಪ್ ಶಾಸ್ತ್ರಿ ಅವರು, ಬಿಜೆಪಿಗೆ ಬಹುಮತ ಪಡೆಯಬೇಕಾದರೆ ನಾಲ್ಕು ರಾಜ್ಯಗಳಲ್ಲಿ ಉತ್ತಮ ಫಲಿತಾಂಶ ಹೊರ ತರಬೇಕು ಎಂದಿದ್ದಾರೆ. ಈ ರಾಜ್ಯಗಳಲ್ಲಿ ಹೆಚ್ಚಿನ ಶ್ರಮ ವಹಿಸಿದರೆ, ಉತ್ತರಪ್ರದೇಶದಲ್ಲಿ ನೀಡಿದಂಥ ಫಲಿತಾಂಶ ನಿರೀಕ್ಷೆ ಸಾಧ್ಯವಿದೆ ಎಂದಿದ್ದಾರೆ.

ಉತ್ತರಪ್ರದೇಶದ 80 ಸ್ಥಾನಗಳು
ಭಾರತೀಯ ಜನತಾ ಪಕ್ಷ(ಬಿಜೆಪಿ) ಈ ಬಾರಿ ಅಧಿಕಾರದಲ್ಲಿದೆ. ಆದರೆ, ಉಪ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಂಡಿರುವ ಎಸ್ಪಿ, ಬಿಎಸ್ಪಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ, ಕಳೆದ ಬಾರಿ 73 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ 50 ಪ್ಲಸ್ ಸ್ಥಾನಕ್ಕೆ ಸೀಮಿತವಾಗಬೇಕಿದೆ. ಉತ್ತರ ಪ್ರದೇಶ ಗೆದ್ದರೆ ಭಾರತ ಗೆದ್ದಂತೆ ಎಂಬ ಅಘೋಷಿತ ವಾಕ್ಯಕ್ಕೆ ಬೆಲೆ ಸಿಗುವುದೇ ಕಾದು ನೋಡಬೇಕಿದೆ.

ಕರ್ನಾಟಕ 28 ಸ್ಥಾನ
ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳಿಲ್ಲದಿದ್ದರೂ, ದಕ್ಷಿಣದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿ, ಬೆಳಸಲು ಕರ್ನಾಟಕ ಹೆಬ್ಬಾಗಿಲಾಗಲಿದೆ.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇತ್ತೀಚಿಗೆ ಹೇಳಿರುವ 22 ಸಂಖ್ಯೆಯನ್ನು ಮುಟ್ಟಲು ಸಾಧ್ಯವಾಗದಿದ್ದರೂ ಬಿಜೆಪಿ 16 ಸ್ಥಾನ ಗೆಲ್ಲುವ ಸಾಧ್ಯತೆ ಕಂಡು ಬಂದಿದೆ. 2014ರಲ್ಲಿ ಬಿಜೆಪಿ 17, 2009ರಲ್ಲಿ 19 ಸ್ಥಾನ ಗಳಿಸಿತ್ತು.

ರಾಜಸ್ಥಾನ 25 ಸ್ಥಾನ
ಕರ್ನಾಟಕದಂತೆ ರಾಜಸ್ಥಾನ ಕೂಡಾ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಹೊಂದಿಲ್ಲದಿದ್ದರೂ, ಬಿಜೆಪಿಯ ಪ್ರತಿಷ್ಠೆಯ ಕಣವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಸೇಡು ತೀರಿಸಿಕೊಳ್ಳಬೇಕಿದೆ. ಹಾಗೂ ಮೋದಿ ಅಲೆ ಇದೆ ಎಂಬುದನ್ನು ಸಾಬೀತು ಪಡಿಸಲು ಬಿಜೆಪಿ ಮುಂದಾಗಿದೆ. 2014ರಲ್ಲಿ ಇಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು.

ಬಿಹಾರ 40 ಸ್ಥಾನ
ಮಹಾಘಟಬಂದನ್ ಗೆ ಭಾರಿ ಪೆಟ್ಟು ನೀಡಲು ಜೆಡಿಯು ಜತೆ ಕಣಕ್ಕಿಳಿದಿರುವ ಬಿಜೆಪಿಗೆ ಬಿಹಾರದಲ್ಲಿ ಗೆಲುವು ಅಷ್ಟು ಸುಲಭವಲ್ಲ. ಮಿತ್ರಪಕ್ಷ ಅಧಿಕಾರದಲ್ಲಿದ್ದರೂ, 2014ರ ಫಲಿತಾಂಶ ಹೊರ ತರಲು ಸಾಧ್ಯವೆ ಎಂಬ ಪ್ರಶ್ನೆ ಎದ್ದಿದೆ. ಆದರೆ, ಪ್ರಶಾಂತ್ ಕಿಶೋರ್ ರಂಥ ರಾಜಕೀಯ ನಿಪುಣರ ನೆರವಿನಿಂದ ಬಿಹಾರದಲ್ಲಿ ಈ ಬಾರಿ ಎನ್ಡಿಎ ಮೈತ್ರಿ ಕೂಟ 30 ಪ್ಲಸ್ ಸ್ಥಾನದ ನಿರೀಕ್ಷೆಯಲ್ಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications