ಮೋದಿ ವಿರುದ್ಧ ಕಣಕ್ಕಿಳಿದಿರುವ ಅಜಯ್ ರಾಯ್ ವ್ಯಕ್ತಿಚಿತ್ರ
Recommended Video
ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಾಂಗ್ರೆಸ್ಸಿನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಗುರುವಾರದಂದು ತೆರೆ ಬಿದ್ದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲಿಗೆ ಐದು ಬಾರಿ ಶಾಸಕ ಅಜಯ್ ರಾಯ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ಸೋಲು ಕಂಡಿದ್ದ ಅಜಯ್ ರಾಯ್ ಅವರಿಗೆ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶವನ್ನು ನೀಡಲಾಗಿದೆ.
ವ್ಯಕ್ತಿ ಚಿತ್ರ : ವಾರಣಾಸಿ ಸಂಸದ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ
ವಾರಣಾಸಿಯ ಪಾರ್ವತಿ ದೇವಿ ಹಾಗೂ ಸುರೇಂದ್ರ ರಾಯ್ ದಂಪತಿಯ ಪುತ್ರನಾಗಿ ಜನಿಸಿದ ಅಜಯ್ ರಾಯ್ ಅವರನ್ನು ಸ್ಥಳೀಯರು 'ಬಾಹುಬಲಿ' ಎಂದು ಪ್ರೀತಿಯಿಂದ ಕರೆಯುತ್ತಾರೆ. ಭಾರತೀಯ ಜನತಾ ಪಾರ್ಟಿಯ ವಿದ್ಯಾರ್ಥಿ ಸಂಘಟನೆಯ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು.
1966 ರಿಂದ 2007ರ ಅವಧಿಯಲ್ಲಿ ಕೊಲಸ್ಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದರು. ಮುಂದೆ ಓದಿ..
ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಅಜಯ್ ರೈ ಕಣಕ್ಕೆ
ಸಮಾಜವಾದಿ ಪಕ್ಷ ಸೇರಿದ್ದ ಅಜಯ್
ಮುಂದೆ ಲೋಕಸಭಾ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದರು. 2009ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಸೋಲು ಕಂಡಿದ್ದರು. ಆದರೆ, ನಂತರ 2009 ವಿಧಾನಸಭೆ ಉಪ ಚುನಾವಣೆಯಲ್ಲಿ ಕೊಲಸ್ಲಾ ಕ್ಷೇತ್ರದಿಂದಲೇ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು.
ಪಕ್ಷೇತರರಾಗಿ ನಿಂತು ಕೂಡಾ ಶಾಸಕರಾದರು
ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಬಳಿಕ ಕಾಂಗ್ರೆಸ್ ಸೇರಿದರು. ನಂತರ ಕ್ಷೇತ್ರ ವಿಂಗಡಣೆಯಾದ ಬಳಿಕ 2012 ಕೊಲಸ್ಲಾ ವಿಧಾನಸಭಾ ಕ್ಷೇತ್ರ ವಿಭಜನೆಯಾಗಿ ಹೊಸದಾಗಿ ನಿರ್ಮಾಣವಾದ ಪಿಂಡ್ರಾ ಕ್ಷೇತ್ರದಿಂದ 2012ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು.
2014ರಲ್ಲಿ ಕಾಂಗ್ರೆಸ್ಸಿನಿಂದ ಲೋಕಸಭೆ ಟಿಕೆಟ್
2015ರಲ್ಲಿ ವಾರಣಾಸಿಯಲ್ಲಿ ಗಂಗಾ ನದಿಯಲ್ಲಿ ಮೂರ್ತಿ ವಿಸರ್ಜನೆ ಸಂಬಂಧ ನಡೆದ ಗಲಭೆ, ಘರ್ಷಣೆಗೆ ಕಾರಣರಾದ ಆರೋಪದ ಮೇಲೆ ಬಂಧಿಸಲಾಗಿತ್ತು. ವಾರಣಾಸಿಯಲ್ಲಿ ಸ್ವತಂತ್ರ ಆಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ಸಿನಿಂದ 2014ರಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಮತ್ತೊಮ್ಮೆ ಮೋದಿ ವಿರುದ್ಧ ಸೆಣಸುತ್ತಿದ್ದಾರೆ.
2014ರಲ್ಲಿ ನೀರಸ ಪ್ರದರ್ಶನ ನೀಡಿದ್ದ ಅಜಯ್
2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5,81,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನು ಪಡೆದಿದ್ದರು. ಅಜಯ್ ರಾಯ್ ಕೇವಲ 75,614 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.