ಲಕ್ಷ ಸಂಬಳದ ನೌಕರಿ ತೊರೆದು, ಗಾಣ ನಿರ್ಮಿಸಿ ಕೋಟಿ ಆದಾಯ ಕಂಡ ಎಂಜಿನಿಯರ್ ಸ್ನೇಹಿತರು
ರಾಮನಗರ, ನವೆಂಬರ್ 24: ಮೂವರು ಸ್ನೇಹಿತರು ಇಂಜಿನಿಯರಿಂಗ್ ಮಾಡಿ ಒಂದೇ ಐಟಿ, ಬಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಲಕ್ಷ ಲಕ್ಷ ಸಂಭಾವನೆಯನ್ನು ಪಡೆಯುತ್ತಿದ್ದರು. ಆದರೆ ಅಷ್ಟಕ್ಕೆ ಸೀಮಿತವಾಗಿದ್ದ ಅವರು, ಇದೀಗ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸೃಷ್ಟಿಸಲು ಪಣ ತೊಟ್ಟಿದ್ದಾರೆ. ದೇಸಿ ಹಸುಗಳನ್ನು ಬಳಸಿ ಆ ಸ್ನೇಹಿತರು ಇದೀಗ ಕೋಟಿ ಕೋಟಿ ಆದಾಯ ಪಡೆಯುತ್ತಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ರಾಜಪುರ ಗ್ರಾಮದಲ್ಲಿ ಮಹೇಶ್, ಯೋಗೇಶ್ ಮತ್ತು ಚರಣ ಎಂಬುವವರು ನಾಲ್ಕು ಎಕರೆ ಜಮೀನು ಖರೀದಿ ಮಾಡಿ, ದೇಸಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮೂರು ಜನ ಸ್ನೇಹಿತರು ಮುಂದಾಗಿದ್ದಾರೆ.
ಆಹಾರ ಕಲಬೆರಕೆ ಮತ್ತು ಅದರಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ಕಂಡು ಬೇಸತ್ತಿದ್ದ ಯುವಕರಿಗೆ, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎನ್ನಿಸಿತು. ಇನ್ನೊಂದೆಡೆ ದೇಸಿ ತಳಿಗಳು, ಸಾಂಪ್ರದಾಯಿಕ ಕೃಷಿ ವಿಧಾನಗಳು ಅಳಿವಿನಂಚಿಗೆ ಸರಿಯುತ್ತಿದ್ದದು ಮತ್ತಷ್ಟು ಕಾಡಿತು.

ಗಾಣದಿಂದ ಎಣ್ಣೆ ತೆಗೆಯುವ ಘಟಕ
ಎರಡು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಅವರು, ಪ್ರತಿಷ್ಠಿತ ಕಂಪನಿಗಳಲ್ಲಿ ಮಾಡುತ್ತಿದ್ದ ಉದ್ಯೋಗ ಬಿಟ್ಟು, ಆಹಾರ ಜಾಗೃತಿ ಮೂಡಿಸುತ್ತಾ, ದೇಸಿ ಆಹಾರ ಉತ್ಪಾದನೆಗೆ ಮುಂದಾದರು. ಅದರ ಮೊದಲ ಪ್ರಯತ್ನವಾಗಿ ಗಾಣದಿಂದ ಎಣ್ಣೆ ತೆಗೆಯುವ ಘಟಕ ಆರಂಭಿಸಿದರು. ಗಾಣದಿಂದ ತಯಾರು ಮಾಡುವ ಎಣ್ಣೆಯನ್ನು ದೇಶದ 22 ರಾಜ್ಯಗಳಿಗೆ ಸದ್ಯಕ್ಕೆ ಸರಬರಾಜು ಮಾಡಲಾಗುತ್ತಿದೆ. ಇನ್ನೆರೆಡು ತಿಂಗಳಲ್ಲಿ ದೇಶ-ವಿದೇಶಗಳಿಗೂ ತಲುಪಿಸುವುದಾಗಿ ಕನಸು ಕಂಡಿದ್ದಾರೆ.

10 ಗಾಣಗಳನ್ನು ಇಟ್ಟುಕೊಂಡರೆ 30 ಜನರಿಗೆ ಕೆಲಸ
ಅಂದಹಾಗೆ, ಒಂದು ಗಾಣದಲ್ಲಿ ಮೂರು ಮಂದಿ ಕೆಲಸ ಮಾಡುತ್ತಾರೆ. 10 ಗಾಣಗಳನ್ನು ಇಟ್ಟುಕೊಂಡರೆ 30 ಜನರಿಗೆ ಕೆಲಸ ಸಿಗುತ್ತದೆ ಎಂದು ಪ್ಲಾನ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಕೆಲಸ ಕೊಡಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಐದು ರೀತಿಯ ಎಣ್ಣೆ ತೆಗೆಯುವ ಗಾಣಕ್ಕೆ ಹಸುವನ್ನು ಬಳಿಸಿಕೊಂಡು ಗಾಣದಲ್ಲಿ ಎಣ್ಣೆ ತಯಾರು ಮಾಡುತ್ತಿದ್ದಾರೆ.

ಕೆ.ಆರ್ ಪೇಟೆಯಲ್ಲಿ ಮೊದಲ ಹಂತ
ಕಡಲೇ ಎಣ್ಣೆ, ಕೊಬ್ಬರಿ ಎಣ್ಣೆ, ಹರಳೆಣ್ಣೆ, ಕಸುಬೆ ಎಣ್ಣೆ, ಎಳ್ಳೆಣ್ಣೆ ತಯಾರು ಮಾಡಿ ಮಾರಾಟ ಮಾಡುತ್ತಿದ್ದಾರೆ. ಆರಂಭದ ದಿನಗಳಲ್ಲಿ ಸಾಕಷ್ಟು ಶ್ರಮಪಟ್ಟಿದ್ದ ಅವರು, ಮೈಸೂರು ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮೊದಲ ಹಂತವಾಗಿ ಘಟಕ ಶುರು ಮಾಡಿ ಯಶಸ್ವಿ ಕಂಡ ಬೆನ್ನಲ್ಲೇ ಇದೀಗ ರಾಮನಗರ ಜಿಲ್ಲೆಯಲ್ಲಿ ಎರಡನೇ ಘಟಕ ಶುರು ಮಾಡಿದ್ದಾರೆ.

ಕೃಷಿ ಚಟುವಟಿಕೆಗಳು ಕಣ್ಮರೆ
ಮೊದಮೊದಲು ಅನುಭವಿಸಿದ ಕಷ್ಟಗಳನ್ನು ನೋಡಿ ಈ ಕೆಲಸ ಬೇಡ ಎಂದಿದ್ದ ಕುಟುಂಬಸ್ಥರು, ಇದೀಗ ಸಂತಸ ವ್ಯಕ್ತಪಡಿಸುತ್ತಾರೆ. ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಕಣ್ಮರೆಯಾದ ಹಿನ್ನೆಲೆಯಲ್ಲಿ ಈ ಮೂರು ಸ್ನೇಹಿತರು ಸಾಂಸ್ಕೃತಿಕ ಚಟುವಟಿಕೆಗೆ ಮರು ಜೀವ ಕೊಡಲು ಮುಂದಾಗಿದ್ದಾರೆ. ಇದರಿಂದ ಉದ್ಯೋಗ ಸೃಷ್ಟಿಯ ಜತೆಗೆ, ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತವೆ ಎಂಬುದು ಎಲ್ಲರ ಆಶಯವಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications