ಬೆಂಗಳೂರಿನಲ್ಲಿ ಕೊರೊನಾ ಆಂಟಿಬಾಡಿ ಕಾಕ್ಟೈಲ್ ಥೆರಪಿ ಯಶಸ್ವಿ
ಬೆಂಗಳೂರು, ಅಕ್ಟೋಬರ್ 17: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಕೋವಿಡ್ -19 ವೈರಸ್ ಹರಡುವಿಕೆಯನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ. ಕೊರೊನಾ ಲಸಿಕೆ ಹಾಕುವ ನಿಟ್ಟಿನಲ್ಲಿ ಸಾಮೂಹಿಕವಾಗಿ ಪ್ರಯತ್ನಗಳನ್ನು ಮಾಡುತ್ತಿರುವ ನಡುವೆಯು ಜನರು ಕೋವಿಡ್ 19 ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೆಚ್ಚಿನ ಅಪಾಯ ಇರುವವರಿಗೆ, ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಳ್ಳದವರಿಗೆ ಅಥವಾ ಕಡಿಮೆ ರೋಗನಿರೋಧಕ ಶಕ್ತಿ ಇರುವ ರೋಗಿಗಳಿಗೆ ಆಂಟಿಬಾಡಿ ಕಾಕ್ಟೈಲ್ ಥೆರಪಿ ಶಿಫಾರಸ್ಸು ಮಾಡಲಾದ ಚಿಕಿತ್ಸಾ ವಿಧಾನವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಇದನ್ನು ಕ್ರಾಂತಿಕಾರಕ ಬದಲಾವಣೆ ಎಂದು ಪರಿಗಣಿಸಲಾಗುತ್ತದೆ ಮತ್ತು ಆರೋಗ್ಯ ರಕ್ಷಣೆ ಸಮುದಾಯವು ಹುಡುಕುತ್ತಿರುವ ಪರಿಹಾರವಾಗಿದೆ.
ಭಾರತದಲ್ಲಿ 35000 ಕ್ಕೂ ಹೆಚ್ಚು ರೋಗಿಗಳು ಆಂಟಿಬಾಡಿ ಕಾಕ್ಟೈಲ್ ಥೆರಪಿಯನ್ನು ಪಡೆದಿದ್ದು, ಆಂಟಿಬಾಡಿ ಕಾಕ್ಟೈಲ್ ಥೆರಪಿಯ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಿದಾಗ, ಕೋವಿಡ್ -19 ವಿರುದ್ಧ ಭರವಸೆಯ ಹೋರಾಟವನ್ನು ಇದು ಪ್ರದರ್ಶಿಸಿದೆ. ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಸುಮಾರು 904 ಸೋಂಕಿತರು ಸೇರಿದಂತೆ ರಾಜ್ಯದ 1068 ರೋಗಿಗಳಿಗೆ ಆಂಟಿಬಾಡಿ ಕಾಕ್ಟೈಲ್ ಥೆರಪಿ ಚಿಕಿತ್ಸೆ ನೀಡಲಾಗಿದೆ.

ಸಾವನ್ನು 70% ರಷ್ಟು ಕಡಿಮೆ ಮಾಡಿದೆ
ಆಂಟಿಬಾಡಿ ಕಾಕ್ಟೈಲ್ ಚಿಕಿತ್ಸೆಯ ರೋಗಿಗಳ ಸಾವನ್ನು 70% ರಷ್ಟು ಕಡಿಮೆ ಮಾಡಿ ಸಾವಿನ ಅಪಾಯದಿಂದ ಪಾರು ಮಾಡುತ್ತದೆ. 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಬೊಜ್ಜು ಅಥವಾ ಮಧುಮೇಹ ಅಥವಾ ತೀವ್ರ ಹೃದಯರಕ್ತನಾಳ, ಶ್ವಾಸಕೋಶ, ಮೂತ್ರಪಿಂಡ ಅಥವಾ ಪಿತ್ತಜನಕಾಂಗದ ಅಸ್ವಸ್ಥತೆಗಳು ರೋಗನಿರೋಧಕ ಶಕ್ತಿ ಇಲ್ಲದವರು ಕ್ಯಾನ್ಸರ್ ಚಿಕಿತ್ಸೆ, ಮೂಳೆ ಮಜ್ಜೆಯ ಅಥವಾ ಅಂಗಾಂಗ ಕಸಿ, ಇಮ್ಯುನೊಲಾಜಿಕಲ್ ನ್ಯೂನತೆಗಳು, ಎಚ್ಐವಿ ಸಿಕಲ್ಸೆಲ್ ರಕ್ತಹೀನತೆ, ಥಲಸ್ಸೆಮಿಯಾ ಈ ಔಷಧಿಯನ್ನು ವಯಸ್ಕರು ಮತ್ತು 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಸೌಮ್ಯದಿಂದ ಮಧ್ಯಮ ಪ್ರಮಾಣದ ಕೋವಿಡ್ 19 ರೋಗಲಕ್ಷಣ ಇರುವವರಿಗೆ ನೀಡಬಹುದು.

ಶ್ವಾಸಕೋಶ ತಜ್ಞ ಡಾ.ರವೀಂದ್ರ ಮೆಹ್ತಾ
ಅಪೋಲೋ ಆಸ್ಪತ್ರೆಗಳ ಶ್ವಾಸಕೋಶ ತಜ್ಞ ಡಾ.ರವೀಂದ್ರ ಮೆಹ್ತಾ, "ತಮ್ಮ ತಂಡವು 40 ಕ್ಕೂ ಹೆಚ್ಚು ರೋಗಿಗಳಿಗೆ ಈ ಚಿಕಿತ್ಸೆಯನ್ನು ಬಳಸಿದೆ ಮತ್ತು ಈ ರೋಗಿಗಳು ಪ್ರಯೋಗದ ವರದಿಗಳಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು. ಮೂರನೇ ಅಲೆಯ ಸಂದರ್ಭದಲ್ಲಿ ಈ ಚಿಕಿತ್ಸೆಯು ಅಮೂಲ್ಯ ಜೀವಗಳನ್ನು ಮತ್ತು ಆಸ್ಪತ್ರೆ/ಐಸಿಯು ಹಾಸಿಗೆಗಳನ್ನು ಉಳಿಸಬಲ್ಲದು ಇದನ್ನು ಡೇ ಕೇರ್ ಅಥವಾ ಶಾರ್ಟ್ ಸ್ಟೇ ಸೆಟಪ್ಗಳಲ್ಲಿ ಇಂಟ್ರಾವೆನಸ್ ಇನ್ಫ್ಯೂಷನ್ ಅಥವಾ ಇನ್ಸುಲಿನ್ ಇಂಜೆಕ್ಷನ್ನಂತೆ ನೀಡಬಹುದು

ಡಾ.ಟಿ.ಆರ್.ಹೇಮಕುಮಾರ್
ಸಕ್ರ ವರ್ಲ್ಡ್ ಹಾಸ್ಪಿಟಲ್ ಮತ್ತು ಬೆಂಗಳೂರಿನ ಜೀವಿಕಾ ಆಸ್ಪತ್ರೆಯಲ್ಲಿ ಕೋವಿಡ್ -19 ಆರೈಕೆಯಲ್ಲಿ ತೊಡಗಿರುವ ಕನ್ಸಲ್ಟೆಂಟ್ ಫಿಸಿಶಿಯನ್ ಡಾ.ಟಿ.ಆರ್.ಹೇಮಕುಮಾರ್ ಅವರು, ''18 ರೋಗಿಗಳು ತಮ್ಮ ಆರೈಕೆಯಲ್ಲಿ ಪಡೆದಿದ್ದಾರೆ ಮೂರನೇ ಅಲೆಯ ಸಾಧ್ಯತೆ ಹಿನ್ನೆಲೆಯಲ್ಲಿ ಸರಿಯಾದ ಚಿಕಿತ್ಸೆಯ ಬಗ್ಗೆ ಅರಿವು ಅತ್ಯಗತ್ಯ. ಕೋವಿಡ್ ಪಾಸಿಟಿವ್ ರೋಗಿ ಅಥವಾ ಕೋವಿಡ್ ಪಾಸಿಟಿವ್ ರೋಗಿಗೆ ತೆರೆದುಕೊಳ್ಳುವಂಥ ವ್ಯಕ್ತಿಯು ಸರಿಯಾದ ಸಮಯದಲ್ಲಿ ಪ್ರತಿಕಾಯ ಕಾಕ್ಟೈಲ್ ಚಿಕಿತ್ಸೆಯನ್ನು ಪಡೆದರೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ರೋಗಿಗಳಲ್ಲಿ ರೋಗ ತೀವ್ರತೆಯಿಂದ ಆಸ್ಪತ್ರೆಗೆ ಸೇರಿಸುವುದನ್ನು ತಡೆಯಲು ಸಾಧ್ಯವಿದೆ,'' ಎಂದು ಒತ್ತಿ ಹೇಳಿದರು.

ಥೆರಪಿ ನಂತರ ಕೊವಿಡ್-19 ಲಸಿಕೆ
ಭಾರತದಲ್ಲಿ ಕ್ಯಾಸಿರಿವಿಮಾಬ್ ಮತ್ತು ಇಂಡೆವಿಮಾಬ್ ಔಷಧಿಗಳ ಮಿಶ್ರಿತ ಮೊನೊಕ್ಲಾನಲ್ ಪ್ರತಿಕಾಯ ಚಿಕಿತ್ಸೆಗೆ 70,000 ರೂಪಾಯಿ ಅಥವಾ 1,000 ಯುಎಸ್ ಡಾಲರ್ ಖರ್ಚು ಆಗುತ್ತದೆ. ಅಮೆರಿಕಾದಲ್ಲಿ ಒಬ್ಬರಿಗೆ ಇದೇ ಚಿಕಿತ್ಸೆ ನೀಡುವುದಕ್ಕೆ 20,000 ಯುಎಸ್ ಡಾಲರ್ ಆಗುತ್ತದೆ. ಮೊನೊಕ್ಲಾನಲ್ ಪ್ರತಿಕಾಯ ಚಿಕಿತ್ಸೆಗೆ ಆದ್ಯತೆ ಹೆಚ್ಚಾಗುತ್ತಿದ್ದಂತೆ ಈ ಚಿಕಿತ್ಸಾ ವೆಚ್ಚವೂ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮೊನೊಕ್ಲಾನಲ್ ಪ್ರತಿಕಾಯ ಚಿಕಿತ್ಸೆ ಪಡೆದುಕೊಂಡ 3 ತಿಂಗಳ ನಂತರದಲ್ಲಿ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅನುಮತಿ ನೀಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications