ಸಾಯಿ ಪಲ್ಲವಿಯವರ ಸಂವಿಧಾನಾತ್ಮಕ ಮಾತುಗಳು

ಚಿತ್ರ ನಟಿ ಸಾಯಿ ಪಲ್ಲವಿ ಅವರ ಮಾತು ಇದೀಗ ವಿವಾದಕ್ಕೆ ಕಾರಣವಾಗಿದೆ ಎಂಬ ಮಾತನ್ನು ಎಲ್ಲೆಡೆ ಹಬ್ಬಿಸಲಾಗುತ್ತಿದೆ. ಅಷ್ಟಕ್ಕೂ ಅವರು ಹೇಳಿದ ಮಾತುಗಳನ್ನು ಗಮನಿಸಿದರೆ ಕನಿಷ್ಠ ಭಾಷಾ ಪ್ರಜ್ಞೆ ಇರುವ ಯಾರಿಗಾದರೂ ಕೂಡಾ " ಹೌದಲ್ಲವೇ, ಇವರು ಸರಿಯಾಗೇ ಹೇಳಿದ್ದಾರೆ, ಇದರಲ್ಲಿ ವಿವಾದ ಎನ್ನುವ ಸಂಗತಿ ಏನಿಲ್ಲವಲ್ಲ? ಎಂಬ ಸಂಗತಿಯು ಬಹಳಷ್ಟು ಸುಲಭವಾಗಿ ಅರ್ಥವಾಗುತ್ತದೆ. ತೆಲುಗಿನಲ್ಲಿ ಸಾಯಿ ಪಲ್ಲವಿಯವರು ಆಡಿದ ಮಾತಿನ ಯಾಥಾವತ್ ಸಾರ ಹೀಗಿದೆ :

ಪತ್ರಕರ್ತ : ನೀವು ಹೊಸ ಸಿನಿಮಾದಲ್ಲಿ ನಕ್ಸಲ್ ಆಗಿ ನಟಿಸುತ್ತಿದ್ದೀರಿ. ಆ ಗನ್ ಮತ್ತು ಸಮವಸ್ತ್ರ ಧರಿಸಿ ನಿಮಗೆ ಹೇಗೆ ಅನ್ನಿಸಿತು, ನೀವು ನಿಮ್ಮ ಬದುಕಿನಲ್ಲಿ ಹೀಗೆ ಓಡಾಡುತ್ತೀನಿ ಅಂತ ಭಾವಿಸಿದ್ದಿರಾ? ಅಥವಾ ಅವರ ಮೇಲೆ ನಿಮಗೇನಾದರೂ ಕರುಣೆ ಬಂದಿದೆಯೇ?

ಸಾಯಿ ಪಲ್ಲವಿ : ನಕ್ಸಲ್ ಎನ್ನುವುದೂ ಕೂಡಾ ಒಂದು ಐಡಿಯಾಲಜಿ ಎಂದು ನಂಬಲಾಗಿದೆ. ಅಲ್ಲವೇ ಸರ್, ಉದಾಹರಣೆಗೆ ನಮಗೆಲ್ಲರಿಗೂ ಶಾಂತಿಯ ತತ್ವವು ಒಂದು ಐಡಿಯಾಲಜಿ ಆಗಿರುವಂತೆ ಅವರಿಗೆ ಹಿಂಸಾ ಮಾರ್ಗವು ಒಂದು ಐಡಿಯಾಲಜಿ ಆಗಿದೆ. ಇಲ್ಲಿ ನಾನು ಹಿಂಸೆಯ ಐಡಿಯಾಲಜಿ ಎಂಬುದನ್ನು Wrong Form of Communication" ಎಂದು ಭಾವಿಸುತ್ತೇನೆ. ಆದರೆ ಅದನ್ನು ನಂಬಿಕೊಂಡವರು " ಹಿಂಸಾ ಮಾರ್ಗದಿಂದಲೇ ನಾವು ಸಮಾಜದ ದುಷ್ಟ ಶಕ್ತಿಯನ್ನು ಎದುರಿಸುತ್ತೇವೆ.

ಅದರಿಂದ ಜನರಿಗೆ ಮತ್ತು ನಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತದೆ ಎಂದು ನಂಬುತ್ತಾರೆ ಇದು ಸರಿಯಾ ತಪ್ಪಾ ಎಂದು ವಿಮರ್ಶಿಸುವುದು ನಂತರದ ಸಂಗತಿಯಾದರೆ, ಆ ದಾರಿಯನ್ನು ಅವರು ಹಿಡಿದಿರುವುದಕ್ಕೆ ಅವರದ್ದೇ ಕಾರಣವನ್ನು ನೀಡುತ್ತಾರೆ, ಎಂಬುದನ್ನು ನಾವು ಗಮನಿಸಬಹುದು. ಇದು ಈ ಹಿಂದೆ ನಡೆಯುತ್ತಿದ್ದ ಸಂಗತಿಯಾಗಿದ್ದು ಈಗ ಇದರ ಪ್ರಭಾವ ಇಲ್ಲ. ಗಡಿಗಳ ವಿಭಜನೆಯ ಕಾರಣಕ್ಕೆ ಪಾಕಿಸ್ತಾನಿ ಸೈನಿಕರು ಭಾರತೀಯ ಸೈನಿಕರನ್ನು ಭಯೋತ್ಪಾದಕರು ಎಂದುಕೊಳ್ಳುತ್ತಾರೆ, ಕಾರಣ ಅವರು ನಮಗೆ ಹಾನಿ ಮಾಡುತ್ತಾರೆ, ಎಂಬ ಭಾವನೆ ಅವರಲ್ಲಿ ಇರುತ್ತದೆ.

ಹಾಗೆಯೇ ಭಾರತೀಯ ಸೈನಿಕರೂ ಕೂಡಾ ಪಾಕಿಸ್ತಾನಿ ಸೈನಿಕರನ್ನು ಭಯೋತ್ಪಾದಕರು ಎಂದುಕೊಳ್ಳುತ್ತಾರೆ, ಕಾರಣ ಅವರು ನಮ್ಮನ್ನು ಹಾನಿ ಮಾಡಬಹುದು ಎಂಬ ಕಾರಣಕ್ಕೆ. ಇಂತಹ ಆಲೋಚನಾ ಕ್ರಮವು ಜಾರಿಯಲ್ಲಿ ಇರುವಾಗ ಹಿಂಸೆ ಎಂಬುದನ್ನು ನಾನು ಹೇಗೆ ಅರ್ಥ ಮಾಡಿಕೊಳ್ಳಬೇಕು ಎಂದೇ ನನಗೆ ಅರ್ಥವಾಗುತ್ತಿಲ್ಲ, ಇದನ್ನು ಸರಿ ತಪ್ಪು ಎಂದು ಅರ್ಥ ಮಾಡಿಕೊಳ್ಳರಲು ನನಗೆ ಬಹಳ ಕಷ್ಟ ಎನಿಸುತ್ತದೆ.

 ನಿಮ್ಮ ಓದಿನ ಸಂದರ್ಭದಲ್ಲಿ ನಕ್ಸಲ್ ಚಳುವಳಿಯನ್ನು ನೀವು ಗಮನಿಸಿರುತ್ತೀರಿ ಅಲ್ಲವೇ?

ನಿಮ್ಮ ಓದಿನ ಸಂದರ್ಭದಲ್ಲಿ ನಕ್ಸಲ್ ಚಳುವಳಿಯನ್ನು ನೀವು ಗಮನಿಸಿರುತ್ತೀರಿ ಅಲ್ಲವೇ?

ಸಾಯಿ ಪಲ್ಲವಿ : ಅಲ್ಲ ಸರ್, ನಾವು ಬೆಳೆಯೋ ವಾತಾವರಣ ಎಷ್ಟು ತಟಸ್ಥವಾಗಿತ್ತು ಎನ್ನುವುದು ನನಗೆ ಮುಖ್ಯ. ನಾನು ಈ ಎರಡೂ ಸಿದ್ಧಾಂತಗಳನ್ನು ತಟಸ್ಥವಾಗಿ ನಿಂತು ನೋಡುತ್ತಿದ್ದೇನೆ, ನೀವು ಹೇಳಿದಂತೆ ನಾನೇನಾದರೂ ಎಡ ಅಥವಾ ನೀವು ಹೇಳುವ ಬಲ ಸಿದ್ಧಾಂತದ ಕುಟುಂಬದಲ್ಲಿ ಬೆಳೆದಿದ್ದರೆ, ನಾನು ಯಾರೋ ಒಬ್ಬರ ಪರ ವಹಿಸುವ ಇಲ್ಲವೇ ಅವರಿಗೆ ಅನುಕೂಲಕರವಾಗಿರುವ ಸಾಧ್ಯತೆ ಇತ್ತೇನೋ?

ಆದರೆ ನಾನು ಈ ಎರಡೂ ಸಿದ್ಧಾಂತದ ತಿಳುವಳಿಕೆ ಇರುವ ಕುಟುಂಬದಲ್ಲಿ ಬೆಳೆದಿಲ್ಲ. ನಮ್ಮ ಮನೆಯಲ್ಲಿ " ಮನುಷ್ಯತ್ವ ಇಟ್ಟುಕೊಳ್ಳಬೇಕು, ಯಾರಿಗೂ ಯಾವ ರೀತಿಯಲ್ಲೂ ಹಾನಿ ಮಾಡಬಾರದು, ಯಾರು ತುಳಿತಕ್ಕೆ ಒಳಗಾಗುತ್ತಾರೋ, ಅಂತವರನ್ನು ಅವರು ದೊಡ್ಡವರಾ ಸಣ್ಣವರಾ ಎಂದು ನೋಡದೇ ಅವರ ರಕ್ಷಣೆ, ಮಾಡಬೇಕೆಂದು ಹೇಳಿಕೊಟ್ಟಿದ್ದಾರೆ (The Opressed Should Be protected). ಅಂತವರ ಕುಟುಂಬದ ವಾತಾವರಣದಲ್ಲೇ ನಾನು ಬೆಳೆದಿದ್ದೇನೆ.

 ಧಾರ್ಮಿಕ ವಾತಾವರಣದಲ್ಲಿ ನಾವು ಉತ್ತಮರಾಗಿ ಇರಬೇಕು

ಧಾರ್ಮಿಕ ವಾತಾವರಣದಲ್ಲಿ ನಾವು ಉತ್ತಮರಾಗಿ ಇರಬೇಕು

ನಾನು ಈ ಎಡ ಮತ್ತು ಬಲ ಸಿದ್ಧಾಂತಗಳ ಬಗ್ಗೆ ಕೇಳಿದ್ದೇನೆ, ಆದರೆ ಅವರಲ್ಲಿ ಯಾರು ಸರಿ ಯಾರು ತಪ್ಪು ಎಂದು ಹೇಳುವುದಕ್ಕೆ ನನಗೆ ಸಾಧ್ಯವಿಲ್ಲ. ಏಕೆಂದರೆ ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್ ಎಂಬ ಸಿನಿಮಾದಲ್ಲಿ " ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಿದ್ದಾರೆ ಎಂಬುದರ ಬಗ್ಗೆ ತೋರಿಸಿದ್ದಾರೆ, ಅಂತೆಯೇ ಇತ್ತೀಚೆಗೂ ಕೂಡಾ ಯಾರೋ ಒಂದಿಷ್ಟು ವಾಹನ ಒಂದರಲ್ಲಿ ಹಸುವನ್ನು ಸಾಗಿಸುತ್ತಿದ್ದು, ಆ ವಾಹನ ಚಾಲಕ ಮುಸ್ಲಿಂ ಎಂಬ ಕಾರಣಕ್ಕೆ ಅವನ ಮೇಲೆ ಹಲ್ಲೆ ಮಾಡಿ ಜೈ ಶ್ರೀರಾಮ್ ಜೈ ಶ್ರೀ ರಾಮ್ ಎಂದು ಹೇಳಿದರು. ಧಾರ್ಮಿಕ ವೈಷಮ್ಯದ ಆಧಾರದಲ್ಲಿ ನೋಡುವುದಾದರೆ ಹಿಂಸೆಯ ವಿಷಯದಲ್ಲಿ ಆಗ ಜರುಗಿದ್ದಕ್ಕೂ ಈಗ ಜರುಗಿದ್ದಕ್ಕೂ ವ್ಯತ್ಯಾಸ ಏನಿದೆ?

ಒಂದು ಧಾರ್ಮಿಕ ವಾತಾವರಣದಲ್ಲಿ ನಾವು ಉತ್ತಮರಾಗಿ ಇರಬೇಕು, ಯಾರ ಮೇಲೂ ಕೆಟ್ಟದಾಗಿ ಒತ್ತಡ ಹೇರಬಾರದು ಎಂದು ಹೇಳುವಾಗಲೂ ಕೂಡಾ ಹಾಗಿದ್ದುಕೊಂಡು ನೀವು ಎಡವೇ ಅಥವಾ ಬಲವೇ ಎಂದು ಕೇಳಿದರೆ "ನೀವು ಮನುಷ್ಯತ್ವ ಇಟ್ಟುಕೊಳ್ಳದೇ ಇದ್ದರೆ ನೀವು ಎಲ್ಲಿದ್ದರೂ ಕೂಡಾ ಅಲ್ಲಿ ನ್ಯಾಯ ಪ್ರಜ್ಞೆ ಇರುವುದಿಲ್ಲ, ಎಂದು ನಾನು ಹೇಳುತ್ತೇನೆ. ನೀವು ಯಾರನ್ನೂ ಹಿಂಸಿಸದ ಮತ್ತು ಯಾರ ಮೇಲೂ ಒತ್ತಡ ಹೇರದ ಮನುಷ್ಯತ್ವ ರೂಪಿಸಿಕೊಂಡರೆ ಆ ವಾತಾವರಣವೂ ತಿಳಿಯಾಗುತ್ತದೆ ಮತ್ತು ನೀವೂ ಸಹ ನಿಮಗೆ ಅರಿವಿಲ್ಲದೇ ಯಾರ ಗೋಜಿಗೂ ಹೋಗದೇ ಉತ್ತಮ ಮನುಷ್ಯರಾಗುತ್ತೀರಿ. ಇದಿಷ್ಟು ಅವರು ಹೇಳಿರುವ ಯಥಾವತ್ ಮಾತುಗಳಾಗಿವೆ.

 ಬಾಬಾ ಸಾಹೇಬರ ಪರಮೋಚ್ಛ ಸಂವಿಧಾನದ ನೀಡಿದ ತಿಳುವಳಿಕೆಯ ಅನುಸಾರ

ಬಾಬಾ ಸಾಹೇಬರ ಪರಮೋಚ್ಛ ಸಂವಿಧಾನದ ನೀಡಿದ ತಿಳುವಳಿಕೆಯ ಅನುಸಾರ

ನನ್ನ ಪ್ರಕಾರ ಎಡ, ಬಲ ಪೂರ್ವ ಪಶ್ಚಿಮ ಉತ್ತರ, ದಕ್ಷಿಣ ಎನ್ನದೇ ಬಾಬಾ ಸಾಹೇಬರ ಪರಮೋಚ್ಛ ಸಂವಿಧಾನದ ನೀಡಿದ ತಿಳುವಳಿಕೆಯ ಅನುಸಾರ ಸಾಯಿ ಪಲ್ಲವಿ ಅವರು ಮಾತನಾಡಿದ್ದಾರೆ. ಸರಳ ಮಾತಿನಲ್ಲಿ ಸಂವಿಧಾನದ ತಿಳುವಳಿಕೆಯನ್ನು ದಾಟಿಸಿರುವ ಅವರನ್ನು ನಾನು ಅಭಿನಂದಿಸುತ್ತೇನೆ. ಏಕೆಂದರೆ ನಮ್ಮಲ್ಲಿ ಸಿದ್ಧಾಂತಗಳ ಜೊತೆಗೆ ಸಂವಿಧಾನದ ತಿಳುವಳಿಕೆಯ ಕೊರತೆ ಮತ್ತು ವಸ್ತು ನಿಷ್ಠವಾದ ಸಂವಿಧಾನಾತ್ಮಕ ಅಭಿವ್ಯಕ್ತಿಯ ಕೊರತೆ ಇರುವುದು ನನ್ನ ಈ ಅಭಿಪ್ರಾಯಕ್ಕೆ ಕಾರಣವಾಗಿದೆ.

 ಬಿಜೆಪಿಗರಿಗೆ ಮನುಷ್ಯತ್ವ ಯಾವ ಭಾಷೆಯೂ ಕೂಡಾ ಅರ್ಥವಾಗುವುದಿಲ್ಲ

ಬಿಜೆಪಿಗರಿಗೆ ಮನುಷ್ಯತ್ವ ಯಾವ ಭಾಷೆಯೂ ಕೂಡಾ ಅರ್ಥವಾಗುವುದಿಲ್ಲ

ಅದಕ್ಕೂ ಮಿಗಿಲಾಗಿ ಬಿಜೆಪಿಗರಿಗೆ ಮನುಷ್ಯತ್ವ, ಸಂವಿಧಾನ ಹಾಗೂ ಒಳ್ಳೆಯತನಕ್ಕೆ ಸಂಬಂಧಿಸಿದ ಯಾವ ಭಾಷೆಯೂ ಕೂಡಾ ಅರ್ಥವಾಗುವುದಿಲ್ಲ. ಅವರ ಭಾಷೆ ಮತ್ತು ವಿಷಯದ ಕುರಿತ ಅಜ್ಞಾನದ ಕಾರಣಕ್ಕಾಗಿಯೇ ಆಗಾಗ ಹಲವು ವಿವಾದಗಳು ಆಗುತ್ತಿದ್ದು ಅದಕ್ಕೆ ಈ ಸಾಯಿ ಪಲ್ಲವಿ ವಿವಾದವೂ ಕೂಡಾ ಹೊರತೇನಲ್ಲ. ಇವರು ಎಂತಹ ಅಜ್ಞಾನಿಗಳು, ಭಾಷೆ ಬರದವರು ಮತ್ತು ಮನುಷ್ಯತ್ವ ವಿರೋಧಿ ವಿಷ ಜಂತುಗಳು ಎನ್ನುವುದಕ್ಕೆ ಕರ್ನಾಟಕ ಸರ್ಕಾರದ ಅಭಯದಲ್ಲಿ ಇವರು ರಚಿಸಿದ ಶಾಲಾ ಪಠ್ಯ ಪುಸ್ತಕ ಹಾಗೂ ಒಬ್ಬ ತಲೆ ಮಾಸಿದ ವ್ಯಕ್ತಿಯನ್ನು ಸಮರ್ಥಿಸುವ ಭರದಲ್ಲಿ ಸಿಇಟಿ ಪ್ರೊಫೆಸರ್ ಎಂದು ಬಾಲಿಶ ತನದ ಸುಳ್ಳನ್ನು ಆಡಿದ ಅಜ್ಞಾನಿ ಸಚಿವ ಬಿ.ಸಿ ನಾಗೇಶ್ ಅವರೇ ಸಾಕ್ಷಿ!

 ಸಾಯಿ ಪಲ್ಲವಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳು

ಸಾಯಿ ಪಲ್ಲವಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳು

ಅಜ್ಞಾನ ಮತ್ತು ಸಂವಿಧಾನದ ತಿಳುವಳಿಕೆ ಇಲ್ಲದ ಬಿಜೆಪಿಗರು ಸಮಾಜವನ್ನು ದ್ವೇಷ ಮತ್ತು ಅಸಹನೆಯ ತಾಣವಾಗಿಸುತ್ತಿದ್ದಾರೆ. ಬಹುಶಃ ಇವರಷ್ಟೇ ಚೆನ್ನಾಗಿ ಬದುಕಬೇಕು, ಮಿಕ್ಕವರೆಲ್ಲಾ ಇವರ ಅಡಿಯಾಳಾಗಿರಬೇಕು ಎಂಬ ಭಾವನೆಯೇ ಈ ದಿನ ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡುತ್ತಿದೆ. ಅದರಲ್ಲೂ ಆಕೆಯ ಈ ಸರಳ ಮಾತುಗಳನ್ನು ಅರ್ಥ ಮಾಡಿಕೊಳ್ಳುವ ಜ್ಞಾನ ಇಲ್ಲದೇ, "ಈಡಿಯಟ್" ಎಂಬ ಪದ ಬಳಸುವ ಮಾಧ್ಯಮ ವಲಯದಲ್ಲಿದ್ದುಕೊಂಡು ಮನುವಾದವನ್ನು ಪೋಷಿಸುವ ನಿಜವಾದ ಈಡಿಯಟ್ ಗಳಿಗೆ ಏನೆಂದು ಹೇಳಬೇಕು? ಏನೇ ಆಗಲಿ The Opressed Should Be protected ಎನ್ನುವ ಸಂವಿಧಾನಾತ್ಮಕ ತಿಳುವಳಿಕೆಯನ್ನು ಸರಳವಾಗಿ ನೀಡಿದ ಸಾಯಿ ಪಲ್ಲವಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+