ಸ್ನೇಹಿತ, ಕುಚೇಲನ ಹಿಡಿ ಅವಲಕ್ಕಿಯಲ್ಲೇ ಸಂತೃಪ್ತಿ ಪಡುವ ಕೃಷ್ಣನಂಥವನು!
ಅವನೊಬ್ಬನಿರ್ತಾನೆ... ಎಂಥ ಸಮಯದಲ್ಲೂ 'ನಾನಿದ್ದೀನಿ ನಿಂಜೊತೆ' ಅನ್ನೋಕೆ, ಅತ್ತಾಗ ಸಂತೈಸೋಕೆ, ನಕ್ಕಾಗ ಜೊತೆಯಾಗೋಕೆ. ಈ 'ಸ್ನೇಹಿತ' ಅನ್ನೋ ಮೂರಕ್ಷರವನ್ನು ಒಂದು ವ್ಯಕ್ತಿಯಲ್ಲಿ ಕಟ್ಟಿಹಾಕೋದು ಕಷ್ಟವೇ. ಆಗಸ್ಟ್ ತಿಂಗಳ ಮೊದಲ ಭಾನುವಾರ(ಈ ಬಾರಿ ಆಗಸ್ಟ್ 05) ಬರುತ್ತಿದ್ದಂತೆಯೇ 'ಹ್ಯಾಪಿ ಫ್ರೆಂಡ್ಶಿಪ್ ಡೇ' ಎಂದು ಕೈಕುಲುಕಿದ ಮಾತ್ರಕ್ಕೆ ಅವನ ಋಣ ತೀರಿಹೋಗೋಲ್ಲ!
ಪ್ರತಿ ವ್ಯಕ್ತಿಯ ಬದುಕಿನಲ್ಲೂ ಈ ಸ್ನೇಹ ಪ್ರಪಂಚ ಎಷ್ಟು ವಿಶಾಲ! ಆಗಷ್ಟೇ ಭೂಮಿ ಎಂಬ ಸುಂದರ ಪ್ರಪಂಚಕ್ಕೆ ಬಂದು ಕಣ್ಬಿಟ್ಟ ಕ್ಷಣ... ಪುಟ್ಟ ಕೈಮೇಲೆ ಅಮ್ಮನ ಅಕ್ಕರೆಯ ಬೆರಳು ಆಡಿದರೆ ಈ ಅಮ್ಮಂಗಿಂತ ಬೇರೆ ಸ್ನೇಹಿತೆ ಇಲ್ಲ! ಪುಟ್ಟ ಪುಟ್ಟ ಹೆಜ್ಜೆ ಇಡುವಾಗಲೂ ಬೀಳದಂತೆ ಕಣ್ಣಲ್ಲಿ ಕಣ್ಣಿಟ್ಟು ನೋಡುವಾಗ ಈ ಅಪ್ಪನ ಅಕ್ಕರೆಗಿಂತ ಮಿಗಿಲಾದ ಸ್ನೇಹವಿಲ್ಲ! ಯಾರೋ ಕೊಟ್ಟ ಮಿಠಾಯಿಯಲ್ಲಿ, ಅರ್ಧ ಭಾಗವನ್ನು ಗುಬ್ಬಿ ಎಂಜಲು ಮಾಡಿ ತನ್ನ ಪುಟ್ಟ ಕೈಯಲ್ಲಿಟ್ಟುಕೊಂಡು ತಿನ್ನಿಸುವಾಗ ಈ ಅಕ್ಕಂಗಿಂತ ಬೇರೆ ಸ್ನೇಹಿತರಿಲ್ಲ! ತುಂಟಾಟವಾಡುವ ತಂಗಿ, ಸಲಹೆ ನೀಡುವ ಅಣ್ಣ, ಕತೆ ಹೇಳುವ ಅಜ್ಜ-ಅಜ್ಜಿ... ಎಲ್ಲರೂ ಒಂದಿಲ್ಲೊಂದು ರೀತಿಯಲ್ಲೇ ಈ ಸ್ನೇಹ ಪ್ರಪಂಚದ ಆಜೀವ ಸದಸ್ಯರೇ! ಕಾಯಾ ವಾಚಾ ಮನಸಾ ಜೊತೆಯಲ್ಲಿರುತ್ತೇನೆಂದು ಸಪ್ತಪದಿ ತುಳಿದ ಸಂಗಾತಿಯೂ ಆತ್ಮಸ್ನೇಹಿತನೇ!

ಹಾಗೆ ಹೇಳುವುದಕ್ಕೆ ಹೋದರೆ ಈ ಬದುಕಿಗೆ ಎಷ್ಟೆಲ್ಲ ಸ್ನೇಹಿತರು..!
"ಎನಿತು ಜೀವದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ
ಅರಿತು ನೋಡಿದರೆ ಬಾಳು ಎಂಬುದಿದು
ಋಣದ ರತ್ನಗಣಿಯೋ"
ಎಂಬ ರಾಷ್ಟ್ರ ಕವಿ ಜಿ ಎಸ್ ಶಿವರುದ್ರಪ್ಪ ಅವರ ಸಾಲಿನಂತೆ, ಈ ಪ್ರಪಂಚದಲ್ಲಿ ಪ್ರತಿ ಹೆಜ್ಜೆಯಲ್ಲೂ ಸಿಕ್ಕ ಅದೆಷ್ಟು ಜನರಿಗೆ ನಾವು ಋಣಿಯಾಗಬೇಕೋ. ಅವರೆಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ನಮ್ಮ ಸ್ನೇಹಿತರೇ!
ಪ್ರತಿ ವರ್ಷ ಆಗಸ್ಟ್ ಮೊದಲ ಭಾನುವಾರವನ್ನು 'ಸ್ನೇಹಿತರ ದಿನ'ವನ್ನಾಗಿ ಆಚರಿಸಲಾಗುತ್ತದೆ. ಬದುಕಿನಲ್ಲಿ 'ಸ್ನೇಹ'ದ ಮಹತ್ವವನ್ನು ಅರಿಯುವುದಕ್ಕೆ, ಬದುಕನ್ನು ಸಾರ್ಥಕಗೊಳಿಸಿದ ಎಷ್ಟೋ ಸ್ನೇಹಿತರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಈ ದಿನ. ಹುಟ್ಟಿದಾಗಿನಿಂದ ಇಲ್ಲಿಯವರೆಗೆ ನಮ್ಮ ಸ್ನೇಹಪ್ರಪಂಚವನ್ನು ದಿನೇ ದಿನೇ ಶ್ರೀಮಂತಗೊಳಿಸುತ್ತಿರುವ, ಬದುಕಿಗೊಂಡು ಅರ್ಥ ನೀಡುತ್ತಿರುವ, ಕೆಲವೊಮ್ಮೆ ಹಳಿ ತಪ್ಪಿದ ಬದುಕನ್ನು ಸರಿದಾರಿಗೆ ತರುತ್ತಿರುವ 'ಸ್ನೇಹಿತ'ನಿಗೆ ಸಾವಿರ ವಂದನೆ!
ಸ್ನೇಹವೊಂದಿದ್ದರೆ ಹಿಡಿ ಅವಲಕ್ಕಿಯೂ ಮೃಷ್ಟಾನ್ನ...
ಬಡ ಕುಚೇಲ ತಂದ ಹಿಡಿ ಅವಲಕ್ಕಿಯನ್ನೇ ಮೃಷ್ಟಾನ್ನ ಎಂಬಂತೆ ತಿಂದನಂತೆ ಕೃಷ್ಣ! ಜಗದೊಡೆಯ ಎಂದು ವಿಶ್ವವೇ ಪೂಜಿಸುವ ಕೃಷ್ಣ, ಅವತಾರ ಪುರುಷ ಮುರಾರಿ ಕರಗಿ ಹೋಗಿದ್ದು ಆ ಹಿಡಿ ಅವಲಕ್ಕಿಗೆ, ಅದರೊಳಗೆ ಹೂತಿದ್ದ ನಿಸ್ವಾರ್ಥ ಸ್ನೇಹಕ್ಕೆ!
ಕರ್ಣನ ಕೈ ತಾಕಿ ಭಾನುಮತಿಯ ಮುತ್ತಿನ ಹಾರ ಹರಿದುಬಿದ್ದಾಗ, 'ಪೋಣಿಸಿಕೊಡಲಾ, ಆರಿಸಿಕೊಡಲಾ?' ಎಂದು ಕೇಳಿದನಂತೆ ದುರ್ಯೋಧನ! ದುರ್ಯೋಧನ ಎಂಥ ದುಷ್ಟನೇ ಇದ್ದಿರಬಹುದು. ಕರ್ಣನ ಬಗೆಗೆ ಅವನಲ್ಲಿದ್ದ ಸ್ನೇಹತ್ವ ಮಾತ್ರ ಎಂದಿಗೂ ಮಾದರಿಯೇ.
ನಿಜ, ಈ ಸ್ನೇಹಿತ ಅಂದ್ರೆ ಹಾಗೇ. ನಮ್ಮ ಎದೆಯಲ್ಲಿ ಹುದುಗಿದ ಸುಪ್ತ ಗೀತೆಯನ್ನೂ ಹಾಡುವವನು... ಕಣ್ಣೆವೆಯಲ್ಲೇ ಬತ್ತಿಹೋದ ಕಣ್ಣೀರನ್ನೂ ಕಾಣುವವನು... ಬಡ ಕುಚೇಲನ ಹಿಡಿ ಅವಲಕ್ಕಿಯಲ್ಲೇ ಸಂತೃಪ್ತಿ ಪಡುವ ಕೃಷ್ಣನಂಥವನು! ಇಂಥ ಎಲ್ಲ ಸ್ನೇಹಿತರಿಗೂ, ಸ್ನೇಹಿತರ ದಿನದ ಶುಭಾಶಯಗಳು...
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications