ವಿಶೇಷ: ಬಸವನಗುಡಿಯಲ್ಲಿ ಕೆಂಪೇಗೌಡರ ಕಾಲದ ಬಯಲು ಗಣಪತಿ!
ಕರ್ನಾಟಕ ದೇವಾಲಯಗಳ ಬೀಡು, ರಾಜಧಾನಿ ಬೆಂಗಳೂರು ಎಷ್ಟೇ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದರೂ ಹಲವು ಪ್ರಾಚೀನ ದೇವಸ್ಥಾನಗಳ ಆಗರವಾಗಿದೆ. ಪ್ರಾಚೀನ ದೇವಮಂದಿರಗಳಲ್ಲಿ ಗಣಪತಿ ದೇವಾಲಯಗಳೇ ಹೆಚ್ಚೆನ್ನಬಹುದು .ಇಲ್ಲಿನ ಪ್ರತಿಯೊಂದು ಬಡಾವಣೆಯಲ್ಲೂ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿದ ಬೆನಕನ ಸನ್ನಿಧಾನಗಳನ್ನು ನಾವು ಕಾಣಬಹುದು.
ಜನರಲ್ಲಿ ದೈವ ಭಕ್ತಿ ,ಧಾರ್ಮಿಕ ಪ್ರಜ್ಞೆ ಮತ್ತು ಸಾಂಸ್ಕೃತಿಕ ಮನೋಭಾವ ಹೆಚ್ಚಿಸಲು ಇದು ಕಾರಣವಾಗುತ್ತದೆ. ಈ ಮಾತಿಗೆ ಜ್ವಲಂತ ಸಾಕ್ಷಿ ಸಿಗಬೇಕಾದರೇ ನೀವು ಒಮ್ಮೆ ಬಸವನಗುಡಿ ಸಮೀಪ ಹನುಮಂತನಗರದ ಗವಿಪುರ (ಪಶ್ಚಿಮ)ದ ಕವಿಕೇಶಿರಾಜ ರಸ್ತೆಯ ಈಶಾನ್ಯಮುಖಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಲೇಬೇಕು . ಕೆಂಪೇಗೌಡರ ಕಾಲದಲ್ಲಿ 'ಬಯಲು ಗಣಪತಿ' ಎಂದು ಕರೆಸಿಕೊಳ್ಳುತ್ತಿದ್ದ ಈ ಗಣಪ ಮೂರ್ತಿ ಬೃಹದಾಕಾರವಾದ ಕಲ್ಲಿನಲ್ಲಿ ಒಡಮೂಡಿದ್ದು ಅತ್ಯಾಕರ್ಷಕವಾಗಿದೆ.
ಉದ್ಯಾನ ನಗರಿ ಬೆಂಗಳೂರು ಬೆಳವಣಿಗೆಯನ್ನು ಪ್ರತೀಕ್ಷಿಸಿ ಮಾಗಡಿ ಕೆಂಪೇಗೌಡರ ಕಾಲದಲ್ಲಿ ಅಷ್ಟದಿಕ್ಕುಗಳಲ್ಲು ಸ್ಥಾಪಿಸಿದ್ದ ಗೋಪುರಗಳು, ಪಾಳೆಯಗಾರರ ಗುಪ್ತಚರರು ವಾಸಿಸುತ್ತಿದ್ದ ಗವಿಗಂಗಾಧರೇಶ್ವರ ಗುಡಿಗೆ ಸೇರಿದ ಗುಟ್ಟಹಳ್ಳಿ ಮತ್ತು ಕೆಂಪೇಗೌಡರ ಪ್ರಿಯ ಪತ್ನಿ ಕೆಂಪಾಂಬ ಪ್ರಜೆಗಳ ಹಿತಕ್ಕಾಗಿ ತನ್ನ ಪ್ರಾಣವನ್ನೆ ಅರ್ಪಿಸಿದ ಕೆಂಪಾಂಬುಧಿ ಕೆರೆಗೆ ಅನತಿ ದೂರದಲ್ಲಿರುವ ಚಿಕ್ಕ ಗುಡ್ಡದ ಮೇಲೆ ಈ ದೇವಾಲಯವಿದೆ. ಸೇನಾ ಜಮಾವಣೆಯಾಗುತ್ತಿದ್ದ ಈ ಎತ್ತರದ ಸ್ಥಳದಲ್ಲಿ ಸೈನಿಕರು - ಸ್ಥಳೀಯರ ಆರಾಧನೆಗಾಗಿ ಪ್ರಥಮ ಪೂರ್ಜಾಹನೆನಿಸಿದ ಗಣಪನನ್ನು ಪ್ರತಿಷ್ಠಾಪಿಸಿಲಾಯಿತು .

ಪುರಾತತ್ವ ಶಾಸ್ತ್ರಜ್ಞ ಡಾ. ಎಸ್ ನಾಗರಾಜು ಮತ್ತು ಇತಿಹಾಸ ತಜ್ಞ ಡಾ ಸೂರ್ಯನಾಥ್ ಕಾಮತ್ ಅವರು ಇದು ಸುಮಾರು 400 ವರ್ಷಗಳ ದೇವಾಲಯವೆಂದು ಅಂದಾಜಿಸಿದ್ದಾರೆ. ಜನಪದರಲ್ಲಿ ಗುಡ್ಡೆ ಗಣಪತಿಯೆಂತೆನಿಸಿದ್ದ ಅಜ್ಞಾತವಾಗಿ ಪೊದೆಗಳಿಂದ ಆವೃತವಾಗಿ ಈ ದೇವಾಲಯವಿರುವ ಜಾಗವು ಕೊಳಗೇರಿಯಾಗಿ ಮಾರ್ಪಾಡು ಆಗುವುದನ್ನು ತಪ್ಪಿಸಿ ಇಲ್ಲೊಂದು ಸುಂದರ ದೇವಮಂದಿರ ನಿರ್ಮಾಣವಾಗಲು ಕಾರಣ ಎಂ ಎನ್ ಕಂಬೇಗೌಡ ದೈವ ಶ್ರದ್ಧೆ.
ಮೂರು ದಶಕದ ಹಿಂದೆ ಡಾ. ಸೂರ್ಯನಾಥ್ ಕಾಮತ್ ರವರ ಒಡಗೂಡಿ ಶ್ರೀ ವಿನಾಯಕ ದೇವಾಲಯ ಸಮಿತಿ ಸ್ಥಾಪಿಸಿ , ಸಮಿತಿ ವತಿಯಿಂದ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಂಡು ಒತ್ತುವರಿ ಜಾಗವನ್ನು ತೆರವು ಗೊಳಿಸಿ , ಆವರಣದಲ್ಲಿ ಸ್ವಾಗತ ಕಮಾನು ರಚಿಸಿ, ಆದಿಚುಂಚನಗಿರಿಯ ಬಾಲಗಂಗಾಧರನಾಥ ಮಹಾಸ್ವಾಮಿಗಳಿಂದ ಬ್ರಹ್ಮಕಲಶಾಭಿಷೇಕ ನಡೆಸಿ ನಿತ್ಯ ಪೂಜೆಯೊಂದಿಗೆ ಅನೇಕ ಧಾರ್ಮಿಕ , ಸಾಮಾಜಿಕ ಕಾರ್ಯವೇರ್ಪಡಿಸುತ್ತಿದೆ. ಒಂದುವರೆ ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಚತುರ್ಭುಜ ಹೊಂದಿರುವ ಸುಮಾರು ಮೂರುವರೇ ಅಡಿ ಎತ್ತರದ ಪ್ರಸನ್ನ ಮುಖಭಾವದ ಈಶಾನ್ಯಮುಖಿ ವಿನಾಯಕನಾಗಿ ಪ್ರಶಾಂತಮಯ ವಾತಾವರಣದಲ್ಲಿ ಕಂಗೊಳಿಸುವ ಈ ದೇವಾಲಯಕ್ಕೆ ಈಗ 18ನೇ ವಾರ್ಷಿಕೋತ್ಸವದ ಸಂಭ್ರಮ. ತದಂಗವಾಗಿ ದಿನಾಂಕ ವಿವಿಧ ಸೇವಾ , ಅಲಂಕಾರ, ಅಷ್ಟದ್ರವ್ಯ ಸಹಿತ ಸಹಸ್ರಮೋದಕ ಮಹಾಗಣಪತಿ ಹೋಮ, ನವಗ್ರಹ ಪೂರ್ವಕ ಮಹಾಮೃತ್ಯಂಜಯ ಹವನ, ನವಚಂಡಿಕಾ ಯಾಗ, ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications