ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಒದಗಿಸುವ 'ಸಖಿ ಯೋಜನೆ' ಗಣೇಶ ಹಬ್ಬಕ್ಕೆ ಜಾರಿ
ಬೆಂಗಳೂರು ಆಗಸ್ಟ್ 29: ಪುರುಷರಂತೆ ಎಲ್ಲ ರಂಗದಲ್ಲೂ ಸಮಾನವಾಗಿ ಮುಂದಿರಲು ಬಯಸುವ ಮಹಿಳೆಯರಿಗೆ ಕರ್ನಾಟಕ ರಾಜ್ಯ ಸರ್ಕಾರ ಗೌರಿ ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸರ್ಕಾರ 'ಸಖಿ ಭಾಗ್ಯ' ಯೋಜನೆ ಜಾರಿಗೆ ಮುಂದಾಗಿದೆ.
ವಿವಿಧ ಉದ್ಯೋಗ ಅವಕಾಶಗಳನ್ನು ಗ್ರಾಮೀಣ ಮಹಿಳೆಯರಿಗೂ ಒದಗಿಸುವ ಮಹತ್ತರ ಉದ್ದೇಶದಿಂದ ರಾಜ್ಯ ಸರ್ಕಾರ ಈ 'ಸಖಿ ಭಾಗ್ಯ' ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಪಂಚಾಯಿ ವ್ಯಾಪ್ತಿಯಲ್ಲಿ ಒಟ್ಟು 30 ಸಾವಿರ ಮಹಿಳೆಯರಿಗೆ ಉದ್ಯೋಗ ಲಭ್ಯವಾಗಲಿವೆ. ಹಳ್ಳಿ ಪ್ರದೇಶಗಳಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ, ಐಟಿ ಬಿಟಿ ಮತ್ತು ಜೀವನೋಪಾಯ ಅಭಿಯಾನ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು, 'ಸಖಿ' ಯೋಜನೆಯ ಪರಿಕಲ್ಪನೆ ಮೂಲಕ ವಿವಿಧ ಉದ್ಯೋಗಗಳನ್ನು ಒದಗಿಸಿ ಗ್ರಾಮೀಣ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲಾಗುವುದು. ಸದ್ಯ ಯೋಜನೆ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರ ಆಗಸ್ಟ್ 31ರಂದು 'ಗೌರಿ ಗಣೇಶ ಹಬ್ಬದಂದು' ಸಖಿ ಯೋಜನೆ ರಾಜ್ಯದಲ್ಲಿ ಜಾರಿ ಮಾಡುವ ಮೂಲಕ ಅಧಿಕೃತಗೊಳಿಸಲಿದೆ ಎಂದು ತಿಳಿಸಿದರು.

'ಸಖಿ ಯೋಜನೆ'ಯಡಿ ತರಬೇತಿ
ಈ ನೂತನ 'ಸಖಿ ಯೋಜನೆ'ಯ ಅಂಗವಾಗಿ ಕೃಷಿ ಸಖಿ, ಹೈನುಗಾರಿಕೆ ಸಖಿ, ವನ ಸಖಿ, ಬ್ಯಾಂಕ್ ವಹಿವಾಟು ಸಖಿ, ಡಿಜಿಟಲ್ ಪಾವತಿ ಸಖಿ ರೂಪದಲ್ಲಿ ಮಹಿಳೆಯರಿಗೆ ಉದ್ಯೋಗಗಳ ಕುರಿತು ಸೂಕ್ತ ತರಬೇತಿ ನೀಡಲಾಗುವುದು. ತರಬೇತಿ ಮೂಲಕ ಕೌಶಲ್ಯ ಪಡೆಯುವ ಮಹಿಳೆಯರು ಉದ್ಯೋಗ ಪಡೆದು ಅಭಿವೃದ್ಧಿ ಕಾಣುತ್ತಿರುವ ಹಳ್ಳಿ ಪ್ರದೇಶಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ. ಮಹಿಳೆಯರು ನೆಮ್ಮದಿಯ ಸ್ವಾವಲಂಬಿ ಜೀವನ ನಡೆಸಲು ಯೋಜನೆ ಅನುಕೂಲವಾಗಲಿದೆ ಎಂದರು.

ಜನರ ಜೀವನೋಪಾಯ ವೃದ್ಧಿಗೆ ಆದ್ಯತೆ
ಗ್ರಾಮೀಣ ಜನರ ಜೀವನೋಪಾಯ ಅಭಿವೃದ್ಧಿ ಹಾಗೂ ಮಹಿಳೆಯರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಯೋಜನೆ ಜಾರಿಗೆ ನಿರ್ಧರಿಸಿದೆ. ಶಿಕ್ಷಣ ಕಲಿತು ಉದ್ಯೋಗ ವಂಚಿತರಾಗಿರುವ ಗ್ರಾಮೀಣ ಮಹಿಳೆಯರಲ್ಲಿ ಈ ನಿರ್ಧಾರ ಸಂತಸ ಮೂಡಿಸಿದೆ. ಸ್ಥಳೀಯ ಮಟ್ಟದಲ್ಲಿ ಮಹಿಳೆಯರು ಉದ್ಯೋಗ ಹೊಂದಲು ಯೋಜನೆ ನೆರವಾಗಲಿದೆ.

ಗ್ರಾ.ಪಂ.ಗೆ ಐವರು ಸಖಿಯರು ನೇಮಕ
ಸರ್ಕಾರ ಕೇವಲ ಯೋಜನೆ ಜಾರಿಗೊಳಿಸಿ ಅಧಿಕಾರಿಗಳ ಜವಾಬ್ದಾರಿ ವಹಿಸಿ ಸುಮ್ಮನಾಗದೇ ಕೆಲಸಕ್ಕೆ ಅಗತ್ಯವಾದ ಕೌಶಲ್ಯ, ತರಬೇತಿಗಳನ್ನು ನೀಡಲಾಗುತ್ತಿದೆ. ಅದಕ್ಕೆಂದೆ ಗ್ರಾಮ ಪಂಚಾಯಿತಿಗೆ ಐವರು ಮಂದಿ ಸಖಿಯರನ್ನು ನೇಮಕ ಮಾಡಲಾಗುತ್ತಿದೆ. ಈ ಕೃಷಿ ಸಖಿಯರು ಸೆಪ್ಟೆಂಬರ್ 5ರಂದು ಮಹಿಳೆಯರಿಗೆ ತರಬೇತಿ ಆರಂಭಿಸಲಿದ್ದಾರೆ ಎಂದು ಅವರು ವಿವರಿಸಿದರು.
ಗ್ರಾಮೀಣ ಮಹಿಳೆಯರ ಉದ್ಯೋಗದ ಕನಸನ್ನು ನನಸು ಮಾಡಲು ಸರ್ಕಾರ ಮಹತ್ವ ಹೆಜ್ಜೆ ಇಟ್ಟಿದೆ. ಸಖಿ ಯೋಜನೆ ಮೂಲಕ ಸರ್ಕಾರವು ಗೌರಿ ಗಣೇಶ ಹಬ್ಬಕ್ಕೆ ಮಹಿಳೆಯರಿಗೆ ಬಾಗಿನದ ರೂಪದಲ್ಲಿ 'ಸಖಿ ಭಾಗ್ಯವನ್ನು' ಅನುಷ್ಠಾನಗೊಳಿಸಲು ಸಿದ್ಧವಾಗಿದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು

ಉತ್ಪನ್ನಗಳ ಮೌಲ್ಯವರ್ಧನೆ, ಮಾರುಕಟ್ಟೆ ಬಗ್ಗೆ ಮಾಹಿತಿ
ಮಹಿಳಾ ಸ್ವಸಹಾಯ ಗುಂಪುಗಳಲ್ಲಿ ತಯಾರಿಸುವ ಉತ್ಪನ್ನಗಳ ಮೌಲ್ಯವರ್ಧನೆ, ಮಾರುಕಟ್ಟೆ ಲಭ್ಯಗೆ, ವ್ಯಾಪಾರ ವಹೀವಾಟುಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಕೆಲಸವನ್ನು ಗ್ರಾಮ ಪಂಚಾಯಿತಿ ನೇಮಕಗೊಳ್ಳುವಂತಹ ಇಬ್ಬರು ಸಖಿಯರು ಮಾಡಲಿದ್ದಾರೆ. ಈ ಯೋಜನೆಯಿಂದ ಭವಿಷ್ಯದಲ್ಲಿ ಗುಡಿ ಕೈಗಾರಿಕೆಯನ್ನು ಹಂತ ಹಂತವಾಗಿ ಉತ್ತೇಜಿಸಲಿದೆ.
ಈ ಕಾರಣದಿಂದಾಗಿಯೇ ತರಬೇತಿ ನೀಡಿದ ಬಳಿಕ ಇಬ್ಬರು ಸಖಿಯರನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ನೇಮಕ ಮಾಡಲು ನಿರ್ಧರಿಸಲಾಗಿದೆ. ಅವರು ಸಹ ಯೋಜನೆಯಡಿ ಉದ್ಯೋಗ ಪಡೆಯಲಿರುವ ಮಹಿಳೆಯರನ್ನು ತರಬೇತುಗೊಳಿಸಲಿದ್ದಾರೆ ಎಂದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications