ಗಿಗ್ ಕಾರ್ಮಿಕರಿಗೆ ವಿಮೆ ಸೌಲಭ್ಯ: ನೋಂದಣಿ, ಅರ್ಹತೆ ವಿವರ
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಗಿಗ್ ಕಾರ್ಮಿಕರಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿದೆ. ಈ ಯೋಜನೆಗೆ 'ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ' ಎಂದು ನಾಮಕರಣ ಮಾಡಲಾಗಿದೆ.
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ಈ ಯೋಜನೆ ಜಾರಿಗೊಳಿಸಿದೆ. ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ದೇಶದಲ್ಲಿಯೇ ಮೊದಲ ಬಾರಿಗೆ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಫ್ಲಿಪ್ಕಾರ್ಟ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ, ಬಿಗ್ ಬಾಸ್ಕೆಟ್, ಡೊಮಿನೋಸ್ ಹೀಗೆ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತಿಯಲ್ಲಿ ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ ರಾಜ್ಯ ಸರ್ಕಾರವು ವಿಮಾ ಯೋಜನೆ ಜಾರಿ ಮಾಡಿದೆ.
ಕರ್ನಾಟಕ ಸರ್ಕಾರ 2023-24ನೇ ಸಾಲಿನ ಬಜೆಟ್ನಲ್ಲಿ ಇ-ಕಾಮರ್ಸ್ ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮೆ ಸೌಲಭ್ಯವನ್ನು ಘೋಷಣೆ ಮಾಡಿತ್ತು. 7/9/2023ರ ಸರ್ಕಾರಿ ಆದೇಶದಲ್ಲಿ ಈ ವಿಮೆ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿಮೆ ಸೌಲಭ್ಯದ ಮಾಹಿತಿ; ಈ ವಿಮೆ ಸೌಲಭ್ಯವನ್ನು ಪಡೆಯಲು ಎಲ್ಲಾ ಅರ್ಹ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕಿದೆ. ಈ ಸೌಲಭ್ಯವು ಕರ್ನಾಟಕದಲ್ಲಿ ಡೆಲಿವರಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ.
ಈ ವಿಮೆ ಸೌಲಭ್ಯವು ಕರ್ತವ್ಯದಲ್ಲಿರುವಾಗ/ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೆ ಅನ್ವಯವಾಗುತ್ತದೆ. ಈ ಯೋಜನೆ ಸಂಪೂರ್ಣ ಉಚಿತವಾಗಿದೆ. ಯಾವುದೇ ರೀತಿಯ ಪ್ರೀಮಿಯಂ ಪಾವತಿ ಮಾಡುವ ಅವಶ್ಯಕತೆ ಇಲ್ಲ.
ಕರ್ತವ್ಯದಲ್ಲಿ ಇದ್ದಾಗ ಹಾಗೂ ಇಲ್ಲದಿರುವಾಗ ಸಂಭವಿಸುವ ಅಫಘಾತಗಳಿಗೆ ಅನ್ವಯವಾಗಲಿದೆ. ಅಫಘಾತದಿಂದ ಮರಣ ಹೊಂದಿದ್ದಲ್ಲಿ ರೂ. 2 ಲಕ್ಷ ಹಾಗೂ ಜೀವ ವಿಮಾ ರೂ. 2 ಲಕ್ಷ ಸೇರಿ ಒಟ್ಟು ರೂ. 4 ಲಕ್ಷಗಳ ಪರಿಹಾರ. ಅಫಘಾತದಿಂದ ಸಂಪೂರ್ಣವಾಗಿ ಶಾಶ್ವತ ದುರ್ಬಲತೆಗೆ ಹೊಂದಿದ್ದಲ್ಲಿ ರೂ. 2 ಲಕ್ಷ, ಅಪಘಾತದ ಸಂದರ್ಭದ ಆಸ್ಪತ್ರೆ ವೆಚ್ಚ ಮರುಪಾವತಿ ರೂ. 1 ಲಕ್ಷ ಹಾಗೂ ಜೀವ ವಿಮಾ ರೂ. 2 ಲಕ್ಷ ಪರಿಹಾರ ದೊರೆಯಲಿದೆ.
ಫಲಾನುಭವಿಗಳು ಆದಾಯ ತೆರಿಗೆ ಪಾವತಿದಾರರು ಹಾಗೂ ಇ.ಎಸ್.ಐ ಫಲಾನುಭವಿಗಳಾಗಿರಬಾರದು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಆಧಾರ್ಕಾರ್ಡ್, ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ/ ವೇತನ ಚೀಟಿ/ ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಪ್ರತಿ ಇವುಗಳಲ್ಲಿ ಯಾವುದಾದರೊಂದು ಹಾಗೂ ಇ-ಶ್ರಮ್ ಕಾರ್ಡ್ ದಾಖಲಾತಿಯೊಂದಿಗೆ ನೋಂದಣಿ ಮಾಡಿಸಬೇಕು.
ಸಿಎಸ್ಸಿ ಸೆಂಟರ್, ಕರ್ನಾಟಕ ಒನ್ ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳವರ ಕಛೇರಿ, ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ. ಈ ಸೌಲಭ್ಯವನ್ನು ಎಲ್ಲಾ ಗಿಗ್ ಕಾರ್ಮಿಕರು ಉಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ನೀತಿ ಆಯೋಗ 2022ರ ವರದಿಯನ್ವಯ ಸ್ವಿಗ್ಗಿ, ಜೊಮಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಇವೇ ಮೊದಲಾದವುಗಳಲ್ಲಿ ಪೂರ್ಣ/ ಅರೆಕಾಲಿಕ ಡೆಲಿವರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರ ಸಂಖ್ಯೆ ಸುಮಾರು 2.30 ಲಕ್ಷವಾಗಿದೆ.
ಈ ಕಾರ್ಮಿಕರು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದ್ದು, ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇಂತಹ ಅಸಂಘಟಿತ ಕಾರ್ಮಿಕರಿಗಾಗಿ 2008ರಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯು ರಚಿತವಾಗಿದ್ದು, ಈ ಕಾಯ್ದೆಗೆ 2009ರಲ್ಲಿ ಕರ್ನಾಟಕ ನಿಯಮಗಳು ರೂಪಿತವಾಗಿದ್ದು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಕಾರ್ಯರೂಪಗೊಂಡಿರುತ್ತದೆ.
ಗಿಗ್ ಕಾರ್ಮಿಕರು ಸರಕು/ ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸುತ್ತಿದ್ದು, ಅಂತಹ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಪಘಾತದಿಂದ ಮರಣ/ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ.
ಅಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರು/ ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು, ಸೂಕ್ತ ವಿಮಾ ಸೌಲಭ್ಯ ಒದಗಿಸುವ ಮೂಲಕ ಸಂಕಷ್ಟದಿಂದ ಮುಕ್ತಗೊಳಿಸಲು ಉದ್ದೇಶಿಸಲಾಗಿದೆ. ಆದ್ದರಿಂದ, ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಸೌಲಭ್ಯ ಒದಗಿಸಲಾಗಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?











Click it and Unblock the Notifications