ನೀತಿಗೆಟ್ಟ ಪ್ರಯತ್ನಗಳ ಮೂಲಕ ಗುಜರಾತ್ ನಲ್ಲಿ ಬಿಜೆಪಿಗೆ ಗೆಲುವು
ಗುಜರಾತ್ ಚುನಾವಣಾ ಫಲಿತಾಂಶವು ಹೊರಬಿದ್ದಿದ್ದು ಬಿಜೆಪಿ ಪಕ್ಷವು ಬಹುಮತವನ್ನು ಪಡೆದುಕೊಂಡಿದೆ. ಕಳೆದ ಬಾರಿ ಅಂದರೆ 2017ನೇ ಇಸವಿಯ ಸಂದರ್ಭದಲ್ಲಿ 82 ಸೀಟುಗಳನ್ನು ಕಾಂಗ್ರೆಸ್ ಪಡೆದಿತ್ತು. ಬಿಜೆಪಿ 100ರ ಒಳಗೆ ಕುಸಿದಿತ್ತು.
ಈ ಬಾರಿ ಕಾಂಗ್ರೆಸ್ ಪಕ್ಷವು ಬಹುಮತ ಪಡೆಯಲಿದೆ ಎಂಬ ಸುಳಿವು ಸಿಕ್ಕ ಕೂಡಲೇ ಬಿಜೆಪಿಗರು ಇನ್ನಿಲ್ಲದ ಕೀಳು ರಾಜಕೀಯವನ್ನು ಮಾಡಲು ಆರಂಭಿಸಿತು. ಮೊದಲಿಗೆ, ಗುಜರಾತ್ ಕಾಂಗ್ರೆಸ್ ನ ಪ್ರಮುಖ ನಾಯಕರಾಗಿದ್ದ ಅಲ್ಪೇಶ್ ಠಾಕೂರ್ ಅವರನ್ನು ತಮ್ಮ ಎಲ್ಲಾ ನೀತಿಗೆಟ್ಟ ಪ್ರಯತ್ನಗಳ ಮೂಲಕ ತಮ್ಮ ಪಕ್ಷಕ್ಕೆ ಸೇರಿಸಿಕೊಂಡ ಬಿಜೆಪಿಯು, ನಂತರ ಪಾಟೀದಾರ್ ಹೋರಾಟದ ರುವಾರಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ ಪಟೇಲ್ ಅವರನ್ನೂ ಇಡಿ ಐಟಿ ದಾಳಿಗಳ ಮೂಲಕ ಬಿಜೆಪಿ ಸೇರ್ಪಡೆ ಮಾಡಿಕೊಂಡಿತು.
ಇದಿಷ್ಟು ಸಾಲದು ಎಂಬಂತೆ ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ ಗೆ ಸಿದ್ಧತೆಯ ಸಮಯ ಸಿಗಬಾರದ ರೀತಿಯಲ್ಲಿ ಈ ಬಾರಿ ಗುಜರಾತ್ ನಲ್ಲಿ ಗೆಲುವು ಕಾಣುತ್ತಿದ್ದ ಸುಮಾರು 60 ಕ್ಕೂ ಹೆಚ್ಚಿನ ಜನ ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಅಕ್ಷರಶಃ ನೀತಿಗೆಟ್ಟ ರಾಜಕೀಯವನ್ನು ಮಾಡಿತು.

ನಿಜಕ್ಕೂ ಹೇಳಬೇಕೆಂದರೆ ಈ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಬಹುಮತವನ್ನು ಪಡೆದೇ ತೀರುತ್ತಿತ್ತು. ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳುವಂತೆ ಚುನಾವಣೆಗಳನ್ನು ನೇರವಾಗಿ ಎದುರಿಸುವ ಧಮ್ಮು, ತಾಕತ್ತು ಇಲ್ಲದ ಬಿಜೆಪಿಗರು ಕಾಂಗ್ರೆಸಿಗರನ್ನೇ ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ನಾವು ಕಾಂಗ್ರೆಸ್ ಸೋಲಿಸಿದೆವು ಎಂದರೆ ಎಲ್ಲಿಂದ ನಗಬೇಕು ಹೇಳಿ?
ಅದಕ್ಕಿಂತಲೂ ಮುಖ್ಯವಾಗಿ ರಾಜಕೀಯ ಪಕ್ಷವೊಂದನ್ನು ತೊರೆದು ಸಿದ್ಧಾಂತ ಇಲ್ಲದೇ ಅವಕಾಶವಾದಿ ತನದಿಂದ ವರ್ತಿಸಿದರೆ ಪಕ್ಷಗಳು ದುರ್ಬಲಗೊಳುತ್ತದೆ. ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಉಂಟಾದ ಸೋಲು ಇಂತಹ ಸಿದ್ದಾಂತ ರಹಿತ ವ್ಯಕ್ತಿಗಳ ದ್ರೋಹದ ಫಲವೇ ಆಗಿದೆ.
ಹೀಗೆ ಹೇಳಿದರೆ ನೀವು ಮತ್ತು ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲಿಲ್ಲವೇ ಎಂದು ಬಹಳಷ್ಟು ಬಾಯಿ ಚಟಕ್ಕೆ ಮಾತನಾಡುತ್ತಾರೆ. ಆದರೆ ಜೆಡಿಎಸ್ ನಿಂದ ನಾವು ಹೊರಗೆ ಬರಲಿಲ್ಲ, ಎಲ್ಲಿ ಹಿಂದುಳಿದವರಿಗೆ ದೊಡ್ಡ ಹುದ್ದೆ ಕೊಡಬೇಕಾಗುತ್ತದೋ ಎಂದು ಅವರೇ ನಮ್ಮನ್ನು ಪಕ್ಷದಿಂದ ಹೊರ ಹಾಕಿದರು ಎಂಬುದನ್ನು ವಿಷಯ ತಿಳಿಯದೇ ಮಾತನಾಡುವವರು ಅರ್ಥ ಮಾಡಿಕೊಂಡರೆ ಒಳ್ಳೆಯದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications