'ಅಂಬ್ಲಿ ರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್': ಚಿಕ್ಕಮೈಲಾರ ಕಾರ್ಣಿಕ
ಹೊಸಪೇಟೆ, ಫೆ 17: ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಚಿಕ್ಕ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ, ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಭರತ ಹುಣ್ಣಿಮೆಯ ದಿನವಾದ ಫೆಬ್ರವರಿ ಹದಿನಾರರಂದು ನಡೆದಿದೆ.
ಭರತ ಹುಣ್ಣಿಮೆಯಂದು ನಡೆಯುವ ಕಾರ್ಣಿಕೋತ್ಸವವನ್ನು ಈ ಭಾಗದ ರೈತರು ಹೆಚ್ಚಾಗಿ ನಂಬುತ್ತಾರೆ. ರಾಜ್ಯದಲ್ಲಿ ಮಳೆಬೆಳೆಯ ಬಗ್ಗೆ ನುಡಿಯಲಾಗುವ ಕಾರ್ಣಿಕವಿದು ಎನ್ನುವುದು ರೈತ ಸಮುದಾಯದ ನಂಬಿಕೆ.
ಧಾರ್ಮಿಕ ಸಂಪ್ರದಾಯದ ಪ್ರಕಾರ ಪೂಜಾ ವಿಧಿವಿಧಾನದ ನಂತರ ಗೊರವಪ್ಪ ಕೋಟೆಪ್ಪ ಕಾರ್ಣಿಕವನ್ನು ನುಡಿದಿದ್ದಾರೆ. ಕಾರ್ಣಿಕದ ನಂತರ ರೈತ ಸಮುದಾಯ ಉಘೇ..ಉಘೇ.. ಎಂದು ಕಾರ್ಣಿಕವನ್ನು ಸ್ವಾಗತಿಸಿದ್ದಾರೆ.

"ಅಂಬ್ಲಿ ರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್"ಎಂದು ಗೊರವಪ್ಪ ಕಾರ್ಣಿಕ ನುಡಿದಿದ್ದಾರೆ. ಇದನ್ನು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಮೃದ್ದ ಬೆಳೆ ಮತ್ತು ಮಳೆಯಾಗಲಿದೆ ಎಂದು ವ್ಯಾಖ್ಯಾನಿಸಲಾಗಿದೆ.
ಚಿಕ್ಕ ಮೈಲಾರನ ಕಾರ್ಣಿಕದ ಎರಡು ದಿನದ ನಂತರ ಹೂವಿನ ಹಡಗಲಿ ಮೈಲಾರ ಲಿಂಗೇಶ್ವರನ ಕಾರ್ಣಿಕೋತ್ಸವ ನಡೆಯಲಿದೆ. ಈ ಕಾರ್ಣಿಕೋತ್ಸವ ಫೆಬ್ರವರಿ ಹದಿನೆಂಟರಂದು ನಡೆಯಲಿದೆ. ಹಲವು ನಿರ್ಬಂಧಗಳ ನಡುವೆಯೂ ಭಕ್ತ ಸಮುದಾಯ ಈಗಾಗಲೇ ಡೆಂಕನಮರಡಿ ತಲುಪಿದ್ದಾರೆ.
ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಕಾರ್ಣಿಕೋತ್ಸವ ಹಾಗೂ ಜಾತ್ರಾ ಮಹೋತ್ಸವವು ಫೆ.8ರಿಂದ ಈಗಾಗಲೇ ಆರಂಭವಾಗಿದ್ದು ಫೆ.19ರವರೆಗೆ ನಡೆಯಲಿದೆ. "ದೇವಸ್ಥಾನದ ರೂಢಿ, ಸಂಪ್ರದಾಯದ ಪೂಜಾ ಕಾರ್ಯ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಯಾವುದೇ ರೀತಿಯ ಆಡಚಣೆ ಇಲ್ಲದಂತೆ ಸುಸೂತ್ರವಾಗಿ ಜರುಗಲಿವೆ, ಆದರೆ ಕೋವಿಡ್ ನಿಂದಾಗಿ ಭಕ್ತರಿಗೆ ನಿರ್ಬಂಧವಿರಲಿದೆ" ಎಂದು ಜಿಲ್ಲಾಧಿಕಾರಿ ಅನಿರುದ್ ಶ್ರವಣ್ ಹೇಳಿದ್ದಾರೆ.
ಕುರುವತ್ತಿ, ಹ್ಯಾರಡ, ಹೊಳಲು, ಹಾವೇರಿ, ಹೊಳಕಡೆ, ಡೆಂಕನಮರಡಿಯ ಎಲ್ಲ ದಾರಿಗಳಿಗೆ ಸೂಕ್ತ ಬ್ಯಾರಿಕೆಡ್ ವ್ಯವಸ್ಥೆ ಮಾಡಿಕೊಂಡು ಮೈಲಾರ ಗ್ರಾಮಕ್ಕೆ ಪ್ರವೇಶ ನಿರ್ಬಂಧಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಸಿ ಅನಿರುದ್ಧ ಶ್ರವಣ್ ಸೂಚಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications