'ಅಂಬ್ಲಿ ರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್': ಚಿಕ್ಕಮೈಲಾರ ಕಾರ್ಣಿಕ
ಹೊಸಪೇಟೆ, ಫೆ 17: ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಚಿಕ್ಕ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ, ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಭರತ ಹುಣ್ಣಿಮೆಯ ದಿನವಾದ ಫೆಬ್ರವರಿ ಹದಿನಾರರಂದು ನಡೆದಿದೆ.
ಭರತ ಹುಣ್ಣಿಮೆಯಂದು ನಡೆಯುವ ಕಾರ್ಣಿಕೋತ್ಸವವನ್ನು ಈ ಭಾಗದ ರೈತರು ಹೆಚ್ಚಾಗಿ ನಂಬುತ್ತಾರೆ. ರಾಜ್ಯದಲ್ಲಿ ಮಳೆಬೆಳೆಯ ಬಗ್ಗೆ ನುಡಿಯಲಾಗುವ ಕಾರ್ಣಿಕವಿದು ಎನ್ನುವುದು ರೈತ ಸಮುದಾಯದ ನಂಬಿಕೆ.
ಧಾರ್ಮಿಕ ಸಂಪ್ರದಾಯದ ಪ್ರಕಾರ ಪೂಜಾ ವಿಧಿವಿಧಾನದ ನಂತರ ಗೊರವಪ್ಪ ಕೋಟೆಪ್ಪ ಕಾರ್ಣಿಕವನ್ನು ನುಡಿದಿದ್ದಾರೆ. ಕಾರ್ಣಿಕದ ನಂತರ ರೈತ ಸಮುದಾಯ ಉಘೇ..ಉಘೇ.. ಎಂದು ಕಾರ್ಣಿಕವನ್ನು ಸ್ವಾಗತಿಸಿದ್ದಾರೆ.

"ಅಂಬ್ಲಿ ರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್"ಎಂದು ಗೊರವಪ್ಪ ಕಾರ್ಣಿಕ ನುಡಿದಿದ್ದಾರೆ. ಇದನ್ನು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಮೃದ್ದ ಬೆಳೆ ಮತ್ತು ಮಳೆಯಾಗಲಿದೆ ಎಂದು ವ್ಯಾಖ್ಯಾನಿಸಲಾಗಿದೆ.
ಚಿಕ್ಕ ಮೈಲಾರನ ಕಾರ್ಣಿಕದ ಎರಡು ದಿನದ ನಂತರ ಹೂವಿನ ಹಡಗಲಿ ಮೈಲಾರ ಲಿಂಗೇಶ್ವರನ ಕಾರ್ಣಿಕೋತ್ಸವ ನಡೆಯಲಿದೆ. ಈ ಕಾರ್ಣಿಕೋತ್ಸವ ಫೆಬ್ರವರಿ ಹದಿನೆಂಟರಂದು ನಡೆಯಲಿದೆ. ಹಲವು ನಿರ್ಬಂಧಗಳ ನಡುವೆಯೂ ಭಕ್ತ ಸಮುದಾಯ ಈಗಾಗಲೇ ಡೆಂಕನಮರಡಿ ತಲುಪಿದ್ದಾರೆ.
ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಕಾರ್ಣಿಕೋತ್ಸವ ಹಾಗೂ ಜಾತ್ರಾ ಮಹೋತ್ಸವವು ಫೆ.8ರಿಂದ ಈಗಾಗಲೇ ಆರಂಭವಾಗಿದ್ದು ಫೆ.19ರವರೆಗೆ ನಡೆಯಲಿದೆ. "ದೇವಸ್ಥಾನದ ರೂಢಿ, ಸಂಪ್ರದಾಯದ ಪೂಜಾ ಕಾರ್ಯ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಯಾವುದೇ ರೀತಿಯ ಆಡಚಣೆ ಇಲ್ಲದಂತೆ ಸುಸೂತ್ರವಾಗಿ ಜರುಗಲಿವೆ, ಆದರೆ ಕೋವಿಡ್ ನಿಂದಾಗಿ ಭಕ್ತರಿಗೆ ನಿರ್ಬಂಧವಿರಲಿದೆ" ಎಂದು ಜಿಲ್ಲಾಧಿಕಾರಿ ಅನಿರುದ್ ಶ್ರವಣ್ ಹೇಳಿದ್ದಾರೆ.
ಕುರುವತ್ತಿ, ಹ್ಯಾರಡ, ಹೊಳಲು, ಹಾವೇರಿ, ಹೊಳಕಡೆ, ಡೆಂಕನಮರಡಿಯ ಎಲ್ಲ ದಾರಿಗಳಿಗೆ ಸೂಕ್ತ ಬ್ಯಾರಿಕೆಡ್ ವ್ಯವಸ್ಥೆ ಮಾಡಿಕೊಂಡು ಮೈಲಾರ ಗ್ರಾಮಕ್ಕೆ ಪ್ರವೇಶ ನಿರ್ಬಂಧಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಸಿ ಅನಿರುದ್ಧ ಶ್ರವಣ್ ಸೂಚಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications