ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಪರಿಚಯ
ಲಿಂಗಾಯತ ಸಮುದಾಯದ ಪ್ರಭಾವ ಹೊಂದಿರುವ ಹಾವೇರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಹಿರೇಕೆರೂರು. ತರಕಾರಿ ಬೆಳೆಗಳಿಗೆ ಪ್ರಸಿದ್ಧಿ ಪಡೆದಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ.
ಹೆಗ್ಗೇರಿಕೆರೆ ಹಿರೇಕೆರೂರು ಕ್ಷೇತ್ರದ ಪ್ರಮುಖ ಆಕರ್ಷಣೆಯಾಗಿದೆ. ಕೆರೆಯ ಸಮೀಪವಿರುವ ದುರ್ಗಾ ದೇವಿಯ ದೇವಾಲಯಕ್ಕೆ ಅಪಾರವಾದ ಭಕ್ತರಿದ್ದಾರೆ. ಇತಿಹಾಸ ಹೇಳುವಂತೆ ಮರಾಠರು ಆಳ್ವಿಕೆ ನಡೆಸುವಾಗ ದುರ್ಗಾ ದೇವಿಗೆ ಆಭರಣಗಳನ್ನು ನೀಡಿದ್ದಾರೆ.
2004ರಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಬಿ. ಸಿ. ಪಾಟೀಲ್ ಸರ್ಕಾರಿ ಉದ್ಯೋಗ ಬಿಟ್ಟು ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದರು. ಆಗ ವಿಧಾನಸಭಾ ಕ್ಷೇತ್ರ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಹಿರೇಕೆರೂರು ಕ್ಷೇತ್ರದ ಪ್ರಭಾವಿ ಲಿಂಗಾಯತ ನಾಯಕ ಬಿ. ಸಿ. ಪಾಟೀಲ್. 2004, 2008 ಮತ್ತು 2018ರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ಆಪ್ತರಾದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಎದುರಾಗಿದೆ.
2018ರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರ ಹಿರೇಕೆರೂರು. ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಪಕ್ಷಕ್ಕಿದೆ. ಜಿಲ್ಲೆಯಲ್ಲಿ ಯಡಿಯೂರಪ್ಪ ಪ್ರಭಾವ ಹೆಚ್ಚಿದ್ದು ಕ್ಷೇತ್ರ ಕಳೆದುಕೊಳ್ಳುವ ಭೀತಿ ಕಾಂಗ್ರೆಸ್ನಲ್ಲಿದೆ.
2004ರಲ್ಲಿ ಜೆಡಿಎಸ್ನಿಂದ ಕಣಕ್ಕಿಳಿದಿದ್ದ ಬಿ. ಸಿ. ಪಾಟೀಲ್ 2008ರಲ್ಲಿ ಕಾಂಗ್ರೆಸ್ನಿಂದ ಗೆದ್ದರು. 2013ರ ಚುನಾವಣೆಯಲ್ಲಿ ಕೆಪಿಜೆಪಿಯ ಯು. ಬಿ. ಬಣಕಾರ್ ವಿರುದ್ಧ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 94,238 ಪುರುಷರು ಹಾಗೂ 88554 ಜನ ಮಹಿಳೆಯರು ನಾಲ್ಕು ಜನ ಇತರರು ಸೇರಿದಂತೆ 1,82,796 ಮತದಾರರು ಇದ್ದಾರೆ.
2018ರ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ 72,461 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಉಮೇಶ್ ಬಣಕಾರ್ 71,906 ಮತಗಳನ್ನು ಪಡೆದು ಸೋಲು ಕಂಡಿದ್ದರು. 3597 ಮತಗಳನ್ನು ಜೆಡಿಎಸ್ ಪಕ್ಷ ಪಡೆದಿತ್ತು. ಕ್ಷೇತ್ರದಲ್ಲಿ ಜೆಡಿಎಸ್ಗೆ ನೆಲೆಯೇ ಇಲ್ಲ.
555 ಮತಗಳಿಂದ ಯು. ಬಿ. ಬಣಕಾರ್ ಕಳೆದ ಚುನಾವಣೆಯಲ್ಲಿ ಸೋತಿದ್ದರು. ಈಗ ಅನರ್ಹಗೊಂಡಿರುವ ಶಾಸಕ ಬಿ. ಸಿ. ಪಾಟೀಲ್ ಬಿಜೆಪಿಗೆ ಬರುವುದು ಬೇಡ, ಅವರಿಗೆ ಉಪ ಚುನಾವಣೆ ಟಿಕೆಟ್ ನೀಡಬಾರದು ಎಂದು ಬಣಕಾರ್ ಮತ್ತು ಇತರ ಸ್ಥಳಿಯ ನಾಯಕರು ಬಿಜೆಪಿ ನಾಯಕರನ್ನು ಒತ್ತಾಯಿಸುತ್ತಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications