ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಪರಿಚಯ
ಲಿಂಗಾಯತ ಸಮುದಾಯದ ಪ್ರಭಾವ ಹೊಂದಿರುವ ಹಾವೇರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಹಿರೇಕೆರೂರು. ತರಕಾರಿ ಬೆಳೆಗಳಿಗೆ ಪ್ರಸಿದ್ಧಿ ಪಡೆದಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ.
ಹೆಗ್ಗೇರಿಕೆರೆ ಹಿರೇಕೆರೂರು ಕ್ಷೇತ್ರದ ಪ್ರಮುಖ ಆಕರ್ಷಣೆಯಾಗಿದೆ. ಕೆರೆಯ ಸಮೀಪವಿರುವ ದುರ್ಗಾ ದೇವಿಯ ದೇವಾಲಯಕ್ಕೆ ಅಪಾರವಾದ ಭಕ್ತರಿದ್ದಾರೆ. ಇತಿಹಾಸ ಹೇಳುವಂತೆ ಮರಾಠರು ಆಳ್ವಿಕೆ ನಡೆಸುವಾಗ ದುರ್ಗಾ ದೇವಿಗೆ ಆಭರಣಗಳನ್ನು ನೀಡಿದ್ದಾರೆ.
2004ರಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಬಿ. ಸಿ. ಪಾಟೀಲ್ ಸರ್ಕಾರಿ ಉದ್ಯೋಗ ಬಿಟ್ಟು ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದರು. ಆಗ ವಿಧಾನಸಭಾ ಕ್ಷೇತ್ರ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಹಿರೇಕೆರೂರು ಕ್ಷೇತ್ರದ ಪ್ರಭಾವಿ ಲಿಂಗಾಯತ ನಾಯಕ ಬಿ. ಸಿ. ಪಾಟೀಲ್. 2004, 2008 ಮತ್ತು 2018ರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ಆಪ್ತರಾದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಎದುರಾಗಿದೆ.
2018ರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರ ಹಿರೇಕೆರೂರು. ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಪಕ್ಷಕ್ಕಿದೆ. ಜಿಲ್ಲೆಯಲ್ಲಿ ಯಡಿಯೂರಪ್ಪ ಪ್ರಭಾವ ಹೆಚ್ಚಿದ್ದು ಕ್ಷೇತ್ರ ಕಳೆದುಕೊಳ್ಳುವ ಭೀತಿ ಕಾಂಗ್ರೆಸ್ನಲ್ಲಿದೆ.
2004ರಲ್ಲಿ ಜೆಡಿಎಸ್ನಿಂದ ಕಣಕ್ಕಿಳಿದಿದ್ದ ಬಿ. ಸಿ. ಪಾಟೀಲ್ 2008ರಲ್ಲಿ ಕಾಂಗ್ರೆಸ್ನಿಂದ ಗೆದ್ದರು. 2013ರ ಚುನಾವಣೆಯಲ್ಲಿ ಕೆಪಿಜೆಪಿಯ ಯು. ಬಿ. ಬಣಕಾರ್ ವಿರುದ್ಧ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 94,238 ಪುರುಷರು ಹಾಗೂ 88554 ಜನ ಮಹಿಳೆಯರು ನಾಲ್ಕು ಜನ ಇತರರು ಸೇರಿದಂತೆ 1,82,796 ಮತದಾರರು ಇದ್ದಾರೆ.
2018ರ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ 72,461 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಉಮೇಶ್ ಬಣಕಾರ್ 71,906 ಮತಗಳನ್ನು ಪಡೆದು ಸೋಲು ಕಂಡಿದ್ದರು. 3597 ಮತಗಳನ್ನು ಜೆಡಿಎಸ್ ಪಕ್ಷ ಪಡೆದಿತ್ತು. ಕ್ಷೇತ್ರದಲ್ಲಿ ಜೆಡಿಎಸ್ಗೆ ನೆಲೆಯೇ ಇಲ್ಲ.
555 ಮತಗಳಿಂದ ಯು. ಬಿ. ಬಣಕಾರ್ ಕಳೆದ ಚುನಾವಣೆಯಲ್ಲಿ ಸೋತಿದ್ದರು. ಈಗ ಅನರ್ಹಗೊಂಡಿರುವ ಶಾಸಕ ಬಿ. ಸಿ. ಪಾಟೀಲ್ ಬಿಜೆಪಿಗೆ ಬರುವುದು ಬೇಡ, ಅವರಿಗೆ ಉಪ ಚುನಾವಣೆ ಟಿಕೆಟ್ ನೀಡಬಾರದು ಎಂದು ಬಣಕಾರ್ ಮತ್ತು ಇತರ ಸ್ಥಳಿಯ ನಾಯಕರು ಬಿಜೆಪಿ ನಾಯಕರನ್ನು ಒತ್ತಾಯಿಸುತ್ತಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications