ಮಹಿಳೆಯರು 'ಆ ದಿನ'ಗಳಲ್ಲಿ ಸುಖವಾಗಿರಲು ಏನು ಮಾಡಬೇಕು?
ಹೆಣ್ಣು ಹುಟ್ಟಿದಾಗಿನಿಂದ ದೈಹಿಕ ಬದಲಾವಣೆ ಮತ್ತು ಮಾನಸಿಕ ಕಿರಿಕಿರಿಯನ್ನು ಎದುರಿಸುತ್ತಲೇ ಬದುಕಬೇಕಾಗಿದೆ. ಬದುಕಿನಲ್ಲಿ ಪ್ರತಿಯೊಂದನ್ನು ಸವಾಲ್ ಆಗಿಯೇ ತೆಗೆದುಕೊಳ್ಳಬೇಕಾಗಿದೆ. ಬಾಲ್ಯದಿಂದ ಪ್ರೌಢಾವಸ್ಥೆ, ಆ ನಂತರ ಋತುಬಂಧ ಹೀಗೆ ಬದಲಾವಣೆಯ ಬದುಕನ್ನು ಸಾಗಿಸುವುದು ಅನಿವಾರ್ಯವಾಗಿದೆ.
ಹೀಗಾಗಿ ದೈಹಿಕ ಮತ್ತು ಮಾನಸಿಕವಾಗಿ ಜೀವನದಲ್ಲಿ ಬರಲಿರುವ ಎಲ್ಲ ಕಿರಿಕಿರಿಗಳನ್ನು ಹಿಮ್ಮೆಟ್ಟಿ ಮುನ್ನಡೆಯಲೇ ಬೇಕಾಗಿದೆ. ಇವತ್ತಿನ ಲೈಫ್ ಸ್ಟೈಲ್ ನಲ್ಲಿ ಋತುಬಂಧದ ಹಂತದಲ್ಲಿ ಮಹಿಳೆಯರು ಕೆಲವೊಂದು ಆರೋಗ್ಯದ ಸಮಸ್ಯೆಗಳನ್ನು ಎದುರಿಸಲೇ ಬೇಕಾಗಿದ್ದು ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲು ತಯಾರಾಗಬೇಕಾಗಿದೆ.

ಈಗಾಗಲೇ ಭಾರತದಲ್ಲಿ ಋತುಬಂಧಕ್ಕೆ ಒಳಗಾಗುವ ಮಹಿಳೆಯರನ್ನು ಆಧರಿಸಿ ಹಲವು ರೀತಿಯ ಅಧ್ಯಯನಗಳನ್ನು ಮಾಡಲಾಗಿದ್ದು ಇದರಿಂದ ಹಲವು ಸಂಗತಿಗಳು ಹೊರಬಂದಿವೆ. ಋತುಬಂಧದ ಹಂತಕ್ಕೆ ಬಂದಾಗ ಬಹಳಷ್ಟು ಮಹಿಳೆಯರಿಗೆ ತಮಗೆ ವಯಸ್ಸಾಗಿ ಬಿಡ್ತು ಎನ್ನುವ ಮಾನಸಿಕ ನೋವು ಕಾಡಿ ಬಿಡುತ್ತದೆ. ಆದರೆ ಇಂತಹ ಆಲೋಚನೆಗಳಿಂದ ಹೊರ ಬರಬೇಕಾಗುತ್ತದೆ. ಎಲ್ಲರೂ ಎಲ್ಲ ಹಂತಗಳನ್ನು ಅನುಭವಿಸಬೇಕು ಮತ್ತು ಅದನ್ನು ದಾಟಿ ಮುನ್ನಡೆಯಲೇ ಬೇಕು. ಅದುವೇ ನಿಜವಾದ ಬದುಕು.
ತಜ್ಞರು ಹೇಳುವ ಪ್ರಕಾರ ಋತು ಬಂಧ ಎನ್ನುವುದು ಪ್ರತಿ ಮಹಿಳೆಯರು ಅನುಭವಿಸುವ ಬದುಕಿನ ಒಂದು ಹಂತ. ಈ ವೇಳೆ ತಮ್ಮ ಆರೋಗ್ಯದಲ್ಲಿ ಕಂಡು ಬರುವ ಏರುಪೇರುಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅದಕ್ಕೆ ತಕ್ಕ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬದುಕುವುದಕ್ಕೆ ಆದ್ಯತೆ ನೀಡಬೇಕೇ ಹೊರತು. ಬೇರೆ ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬಾರದು. ಪ್ರಕೃತಿ ನಿಯಮವನ್ನು ಯಾರೂ ಮೀರಿ ಬದುಕಲಾಗುವುದಿಲ್ಲ. ಅದಕ್ಕೆ ನಾವು ಹೊಂದಿಕೊಂಡು ಮುನ್ನಡೆಯಬೇಕಷ್ಟೆ.

ಈಸ್ಟ್ರೊಜೆನ್ ಮಟ್ಟದಲ್ಲಿ ಕುಸಿತದಿಂದ ಸಮಸ್ಯೆ
ಎಲ್ಲಾ ಮಹಿಳೆಯರು ತಮ್ಮ ಜೀವನದ ಯಾವುದಾದರೊಂದು ಹಂತದಲ್ಲಿ ಋತುಬಂಧವನ್ನು ಅನುಭವಿಸಬೇಕಾಗುತ್ತದೆ. ಒಬ್ಬರಿಂದ ಮತ್ತೊಬ್ಬರಿಗೆ ವಯಸ್ಸಿನ ಅಂತರದಲ್ಲಿ ಸ್ವಲ್ಪ ವ್ಯತ್ಯಾಸಗಳಾಗಬಹುದಷ್ಟೆ. ಜತೆಗೆ ಯಾವುದೇ ದುಶ್ಚಟಗಳಿಲ್ಲದೆ, ವ್ಯಾಯಾಮ, ಶಿಸ್ತು ಬದ್ಧ ಜೀವನ ನಡೆಸುವವರಿಗೆ ಆರೋಗ್ಯದ ವಿಚಾರದಲ್ಲಿ ಸಮಸ್ಯೆಗಳು ಕಡಿಮೆಯಿರಬಹುದು. ಆದರೆ ಸಾಮಾನ್ಯವಾಗಿ ಈ ಸಮಯದಲ್ಲಿ ಹೆಚ್ಚಿನ ಮಹಿಳೆಯರು ಕೆಲವೊಂದು ಕಿರಿಕಿರಿಗಳನ್ನು ಎದುರಿಸುತ್ತಾರೆ. ಅದಕ್ಕೆ ಕಾರಣ ಮಹಿಳೆಯ ದೇಹದಲ್ಲಿನ ಬದಲಾವಣೆ ಮತ್ತು ಈಸ್ಟ್ರೊಜೆನ್ ಮಟ್ಟಗಳಲ್ಲಿ ಕುಸಿತವಾಗಿದೆ.
ಋತುಬಂಧದ ಹಂತದಲ್ಲಿ ಆಗುವ ದೈಹಿಕ ಸಮಸ್ಯೆಗಳು, ಆರೋಗ್ಯದಲ್ಲಿ ಏರುಪೇರು ಇದ್ಯಾವುದೂ ಹೆಚ್ಚಿನ ಮಹಿಳೆಯರಿಗೆ ಅರ್ಥವಾಗುವುದಿಲ್ಲ. ಕಾರಣ ಆ ಬಗ್ಗೆ ಅವರು ಗಮನಹರಿಸುವುದೇ ಇಲ್ಲ. ಅದಕ್ಕಿಂತ ಹೆಚ್ಚಾಗಿ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ. ಇದೆಲ್ಲವೂ ಅವರಲ್ಲಿ ಮುಂದಿನ ದಿನಗಳಲ್ಲಿ ಸುಖಮಯ ಜೀವನ ನಡೆಸಲು ಅಡ್ಡಿಯಾಗುತ್ತಿದೆ. ಅಧ್ಯಯನಗಳು ಹೇಳುವ ಪ್ರಕಾರ ಋತುಬಂಧವು ಪ್ರತಿ ಮಹಿಳೆಯಲ್ಲಿ ವೈವಿಧ್ಯಮಯ ಚಿಂತೆಗಳನ್ನು ಹುಟ್ಟುಹಾಕುತ್ತವೆಯಂತೆ.

ಅಧ್ಯಯನಗಳಿಂದ ತಿಳಿದು ಬಂದಿದ್ದೇನು?
ಕೆಲವರಿಗೆ ಪ್ರತಿ ತಿಂಗಳ ಕಿರಿಕಿರಿಯಿಂದ ಬಿಡುಗಡೆಯಾಗುವ ಸಮಾಧಾನದ ಭಾವನೆ ಮೂಡಿದರೆ ಮತ್ತೆ ಕೆಲವರಿಗೆ ವಯಸ್ಸಾಗಿ ಬಿಡ್ತಲ್ಲ ಎನ್ನುವ ಸಣ್ಣಗಿನ ನೋವು, ಇನ್ನು ಕೆಲವರಿಗೆ ಮುಂದೇನು ಎಂಬ ಕುತೂಹಲ. ಆದರೆ ಇದೆಲ್ಲದರ ನಡುವೆಯೂ ಮಹಿಳೆಯರು ಋತುಬಂಧದ ನಂತರ ಉಂಟಾಗಬಹುದಾದ ಸಾಮಾನ್ಯ ಆರೋಗ್ಯ ಪರಿಸ್ಥಿತಿಗಳ ಬಗ್ಗೆ ಅರಿತುಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಮುಖ್ಯವಾಗಿ ಈ ಹಂತದಲ್ಲಿ ದೇಹದಲ್ಲಿ ಈಸ್ಟ್ರೊಜೆನ್ ಮಟ್ಟದಲ್ಲಿನ ಇಳಿಕೆಯಿಂದಾಗಿ ಮೂಳೆ ಸವೆತವಾಗುವುದರಿಂದ ಮಂಡಿನೋವು ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
ಹಿರಿಯ ಸಲಹೆಗಾರ್ತಿ ಶೀಲಾ ಮಾನೆ ಅವರ ಪ್ರಕಾರ ಭಾರತದಲ್ಲಿ ಋತುಬಂಧಕ್ಕೆ ಒಳಗಾಗುವ ಮಹಿಳೆಯರನ್ನು ಆಧರಿಸಿ ಮಾಡಿದ ಅಧ್ಯಯನಗಳಲ್ಲಿ ಸಾಮಾನ್ಯವಾಗಿ ವರದಿಯಾಗಿರುವ ರೋಗಲಕ್ಷಣಗಳಲ್ಲಿ ಮೈ ಬಿಸಿಯಾಗುವುದು ಮತ್ತು ರಾತ್ರಿಯಲ್ಲಿ ಬೆವರುವಿಕೆ, ಜೊತೆಗೆ ಇತರ ರೋಗಲಕ್ಷಣಗಳಾದ ನಿದ್ರಾಹೀನತೆ, ಆತಂಕ, ಕಿರಿಕಿರಿ, ಕೀಲು ನೋವು ಮತ್ತು ಯೋನಿ ಶುಷ್ಕತೆ ಮುಂತಾದ ಲಕ್ಷಣಗಳು ಕಂಡು ಬಂದಿವೆಯಂತೆ. ಹೀಗಾಗಿ ಇಂತಹ ಸಮಸ್ಯೆಗಳು ಸಾಮಾನ್ಯವಾಗಿದ್ದು, ಮಹಿಳಾ ತಜ್ಞೆಯರ ಸಲಹೆ ಪಡೆದು ತಕ್ಕ ಚಿಕಿತ್ಸೆ ಪಡೆದರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಿದೆ ಎನ್ನುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ.
-
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications