ಕೆಂಪು ಕಾಶ್ಮೀರಿ ಆ್ಯಪಲ್ ಮೇಲೆ ಸೂರ್ಯನ ಕೆಂಗಣ್ಣು!
ಶ್ರೀನಗರ್, ಜೂನ್ 9: ಚೆಂದದ ಹುಡುಗಿಯನ್ನು ಅಂದದ ಆ್ಯಪಲ್ಗೆ ಹೋಲಿಸುವುದನ್ನು ಸಾಮಾನ್ಯವಾಗಿ ನೀವೆಲ್ಲ ಕೇಳಿಯೇ ಇರುತ್ತೀರ. ಆ್ಯಪಲ್ ಅಂದ್ರೆ ಕಾಶ್ಮೀರ, ಕಾಶ್ಮೀರ ಅಂದ್ರೆ ಆ್ಯಪಲ್ ಎನ್ನುವು ರೂಢಿಯೂ ಇದೆ. ಅಂಥ ಕಾಶ್ಮೀರಿ ಆ್ಯಪಲ್ ಹಣ್ಣಿಗೆ ಈ ವರ್ಷ ಬರ ಬರುವ ಲಕ್ಷಣಗಳು ಗೋಚರಿಸುತ್ತಿವೆ.
ನೋಡೋದಕ್ಕೆ ಕೆಂಪು ಕೆಂಪಾದ, ಬಾಯಿಗೆ ಸಿಹಿಯಾದ, ಮನಸಿಗೆ ಮುದವಾದ ಅಂದದ ಕಾಶ್ಮೀರದ ಸೇಬುವನ್ನು ಸವಿಸುವುದು ಈ ವರ್ಷ ಕೊಂಚ ಕಾಸ್ಟ್ಲಿ ಆಗುವ ಹಾಗೆ ಕಾಣುತ್ತಿದೆ. ಕಣಿವೆ ರಾಜ್ಯದ ವಾತಾವರಣವು ಸೇಬು ಹಣ್ಣಿನ ಉತ್ಪನ್ನಕ್ಕೆ ಪೆಟ್ಟು ಕೊಟ್ಟಂತೆ ತೋರುತ್ತಿದೆ.
ಕಾಶ್ಮೀರದಲ್ಲಿ ಸೇಬಿಗೆ ಬರಗಾಲ ಬರುವುದು ಒಂದು ಕಡೆಯಾದರೆ, ಮಹಾರಾಷ್ಟ್ರದಲ್ಲಿ ಕಿತ್ತಳೆ ಹಣ್ಣಿನ ಉತ್ಪಾದನೆ ತಗ್ಗಿರುವುದು ಗೊತ್ತಾಗಿದೆ.
ಭಾರತದಲ್ಲಿ ಬೊಂಬಾಟ್ ಎನಿಸಿದ ಸೇಬು ಮತ್ತು ಕಿತ್ತಳೆಯ ಉತ್ಪಾದನೆ ಇಳಿಮುಖವಾಗಿರುವುದು ಫಲಪ್ರಿಯರಿಗೆ ಕೊಂಚ ಬೇಸರ ಹುಟ್ಟಿಸುತ್ತದೆ. ಆದರೆ ಸೇಬು ಹಣ್ಣು ಮತ್ತು ಕಿತ್ತಳೆ ಹಣ್ಣಿನ ಉತ್ಪಾದನೆ ಇಳಿಮುಖವಾಗಲು ಕಾರಣವೇನು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸೇಬು ಉತ್ಪಾದನೆಗೆ ಬಿಸಿಗಾಳಿ ಬಿಡುತ್ತಿಲ್ಲ, ಮಳೆಯೂ ಬರುತ್ತಿಲ್ಲ
ಇಡೀ ದೇಶದಲ್ಲಿ ಸೇಬು ಉತ್ಪಾದನೆ ಎಂದಾಕ್ಷಣ ನೆನಪಿಗೆ ಬರುವುದೇ ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ. ಈ ಎರಡು ರಾಜ್ಯಗಳಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಸೇಬು ಹಣ್ಣನ್ನು ಗರಿಷ್ಠ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಆದರೆ ಈ ಸಾಲಿನಲ್ಲಿ ಸೇಬು ಉತ್ಪಾದನೆಗೆ ವಾತಾವರಣ ಸಪೋರ್ಟ್ ಮಾಡುತ್ತಿಲ್ಲ. ಸೇಬು ಬೆಳೆಯುವುದಕ್ಕೆ ಬಿಸಿಗಾಳಿ ಬಿಡುತ್ತಿಲ್ಲ, ಮಾನ್ಸೂನ್ ಪೂರ್ವದಲ್ಲಿ ಸುರಿಯುವ ತಂಪು ಮಳೆಯೂ ಸಕಾಲಕ್ಕೆ ಬರುತ್ತಿಲ್ಲ. ಅಲ್ಲಿಗೆ ಸೇಬು ಹಣ್ಣಿಗೆ ಈ ಬಾರಿ ಬಿಸಿಲು ಮತ್ತು ಮಳೆಯು ಕೈಕೊಟ್ಟಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕಣಿವೆ ರಾಜ್ಯದ ಪ್ರಮುಖ ತೋಟಗಾರಿಕೆ ಬೆಳೆ ಸೇಬು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸೇಬು ಪ್ರಮುಖ ತೋಟಗಾರಿಕಾ ಬೆಳೆಯಾಗಿದೆ. ಕಾಶ್ಮೀರದಲ್ಲಿ ಶೇ.86ರಷ್ಟು ಪ್ರಮಾಣದಲ್ಲಿ ಸೇಬು ಹಣ್ಣನ್ನು ಬೆಳೆಯಲಾಗುತ್ತದೆ. ಆ ಮೂಲಕ ರಾಜ್ಯದ 30 ಲಕ್ಷ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗವನ್ನು ನೀಡುತ್ತದೆ. ಆದರೆ ಈ ಬಾರಿ ಜಮ್ಮು ಮತ್ತು ಕಾಶ್ಮೀರದ ಜೊತೆ ಹಿಮಾಚಲ ಪ್ರದೇಶದಲ್ಲಿಯೂ ಬಿಸಿಗಾಳಿ ವೇಗ ಹೆಚ್ಚಿದೆ. ಇದರಿಂದ ಎರಡೂ ರಾಜ್ಯಗಳಲ್ಲಿ ಸೇಬು ಹಣ್ಣಿನ ಉತ್ಪಾದನೆಯು ಶೇ.25ರಷ್ಟು ಇಳಿಮುಖವಾಗಿದೆ.
"ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಯು ಹಣ್ಣಿನ ಬೆಳವಣಿಗೆಯ ಹಂತದಲ್ಲಿ ಸೇಬು ಬೆಳೆಯ ಮೇಲೆ ಪರಿಣಾಮ ಬೀರಿದೆ. ಹಣ್ಣಿನ ಬೆಳವಣಿಗೆಗೆ ಈ ತಿಂಗಳು ಬಹಳ ನಿರ್ಣಾಯಕವಾಗಿದೆ. ಆದರೆ ಇನ್ನೂ ತಾಪಮಾನವು ತುಂಬಾ ಹೆಚ್ಚಾಗಿದೆ," ಎಂದು , ಆಪಲ್ ಗ್ರೋವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವೀಂದರ್ ಚೌಹಾಣ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ "ಕಿತ್ತಳೆ"ಯ ಕೈ ಹಿಡಿಯಲಿಲ್ಲ ಮುಂಗಾರು ಮಳೆ
ಉತ್ತರ ಭಾರತದಲ್ಲಿ ಬಿಸಿಗಾಳಿಯ ವೇಗವು ಸೇಬು ಹಣ್ಣಿನ ಉತ್ಪಾದನೆಗೆ ಪೆಟ್ಟು ಕೊಟ್ಟಿದ್ದು ಆಗಿದೆ. ಅದೇ ರೀತಿ ದಕ್ಷಿಣ ಭಾರತದಲ್ಲಿ ಮುಂಗಾರು ಮಳೆಯು ಕೈ ಕೊಟ್ಟಿದ್ದರಂತೆ ಕಿತ್ತಳೆ ಹಣ್ಣಿನ ಉತ್ಪಾದನೆಯೂ ತಗ್ಗಿದೆ. ರೈತರ ಪ್ರಕಾರ, ಮಹಾರಾಷ್ಟ್ರದ ನಾಗ್ಪುರ್, ಅಮರಾವತಿ, ವಿದರ್ಭಾ ಪ್ರದೇಶಗಳಲ್ಲಿ ಕಿತ್ತಳೆ ಹಣ್ಣಿನ ಉತ್ಪಾದನೆಯು ಶೇ.25 ರಿಂದ ಶೇ.30ರಷ್ಟು ಕಡಿಮೆಯಾಗಲಿದೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ದುಬಾರಿ ಆಗಲಿರುವ ಸೇಬು, ಕಿತ್ತಳೆ
ಆಹಾರ ಹಣದುಬ್ಬರವನ್ನು ಹೆಚ್ಚಿಸುವುದರೊಂದಿಗೆ ಅವುಗಳ ಲಭ್ಯತೆ ಕಡಿಮೆ ಇದೆ. ಆದರೆ ಎರಡೂ ಹಣ್ಣುಗಳಿಗೆ ಬೆಲೆಗಳು ಹೆಚ್ಚಾಗುತ್ತದೆ. ಇದರ ಮಧ್ಯೆ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರದ ಮೇಲೆ ಆರ್ಬಿಐ ತನ್ನ ವಿತ್ತೀಯ ನೀತಿಯನ್ನು ರೂಪಿಸುತ್ತದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಹಣದುಬ್ಬರದ ಪ್ರಮಾಣವು ಶೇ.7.79ರಷ್ಟಾಗಿದ್ದು, 8 ವರ್ಷಗಳಲ್ಲೇ ಗರಿಷ್ಠ ಪ್ರಮಾಣಕ್ಕೆ ತಲುಪಿದೆ. ಚಿಲ್ಲರೆ ಹಣದುಬ್ಬರವು ಈ ವರ್ಷದ ಆರಂಭದಿಂದಲೂ ಆರ್ಬಿಐನ ಶೇಕಡಾ 2-6 ಗುರಿ ಬ್ಯಾಂಡ್ಗಿಂತ ಹೆಚ್ಚಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರೀಯ ಬ್ಯಾಂಕ್ ಹಣದುಬ್ಬರವನ್ನು ಏಪ್ರಿಲ್ನಲ್ಲಿ ಶೇ. 5.7 ರಿಂದ ಶೇ.6.7 ಏರಿಕೆಯಾಗಿದೆ.
Recommended Video
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications