ಕನಸಿನ ಕನ್ಯೆ ಹೇಮಾ ಮಾಲಿನಿ 100 ಕೋಟಿ ಆಸ್ತಿಯ ಒಡತಿ!
ಮಥುರಾ, ಮಾರ್ಚ್ 26: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಹೇಮಾ ಮಾಲಿನಿ ಅವರು ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ನೀಡಿದ ಅಫಿಡವಿಟ್ ನಲ್ಲಿ ತಮ್ಮ ಆಸ್ತಿಯ ವಿವರ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕನಸಿನ ಕನ್ಯೆ ಹೇಮಾ ಮಾಲಿನಿ ರೂ.100 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ. 2014 ರ ಚುನಾವಣೆಯ ಸಮಯದಲ್ಲಿ ರೂ.66 ಕೋಟಿ ಮೌಲ್ಯದ ಆಸ್ತಿಯನ್ನು ಅವರು ಹೊಂದಿದ್ದರು.
ಉತ್ತರ ಪ್ರದೇಶದ ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹೇಮಾ ಮಾಲಿನಿ, ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಿದರು. ಲೋಕಸಭೆ ಚುನವಣೆ ಏಪ್ರಿಲ್ 11 ರಿಂದ ಆರಂಭವಾಗಲಿದ್ದು, ಮೇ.19 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ.

5 ವರ್ಷದಲ್ಲಿ ತಲಾ 10 ಕೋಟಿ ರೂ.ಆದಾಯ
ಕಳೆದ ಐದು ವರ್ಷಗಳಿಂದ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ ಸಿಂಗ್ ಡಿಯೋಲ್ ದಂಪತಿ ತಲಾ 10 ಕೋಟಿ ರೂ.ನಷ್ಟು ಆದಾಯ ಗಳಿಸಿದ್ದಾರೆ ಎಂಬುದು ಆದಾಯ ತೆರಿಗೆ ಇಲಾಖೆಯಿಂದ ತಿಳಿದುಬಂದಿದೆ.
2014-15 ರಲ್ಲಿ 3.12 ಕೋಟಿ ರೂ, 2015-16 ರಲ್ಲಿ 1.19 ಕೋಟಿ ರೂ., 2016-17 ರಲ್ಲಿ 4.30 ಕೋಟಿ ರೂ. ಸಂಪಾದಿಸಿದ್ದಾರೆ.

ಮರ್ಸಿಡಝ್ ಕಾರ್
ಇದರೊಟ್ಟಿಗೆ ಅವರ ಬಳಿ 33.62 ಲಕ್ಷ ರೂ ಬೆಲೆಯ ಮರ್ಸಿಡಝ್ ಕಾರು ಮತ್ತು 4.75ಲಕ್ಷ ರೂ.ಮೌಲ್ಯದ ಟೊಯೋಟಾ ಕಾರಿದೆ.
1965 ರಲ್ಲಿ ಧರ್ಮೇಂದ್ರ ಅವರು ಕೊಂಡುಕೊಂಡಿದ್ದ ರೇಂಜ್ ರೋವರ್ ಕಾರು ಇಂದಿಗೂ ಅವರ ಬಳಿ ಇದೆ. ಆಗ ಆ ಕಾರಿಗೆ ಅವರು ನೀಡಿದ್ದ ಹಣ, 7000 ರೂ!

ಸಾಲ ಎಷ್ಟಿದೆ?
6.75 ಕೋಟಿ ರೂ.ನಷ್ಟು ಸಾಲವನ್ನು ಹೇಮಾ ಮಾಲಿನಿ ಹೊಂದಿದ್ದು, ಪತಿ ಧರ್ಮೇಂದ್ರ ಹೆಸರಿನಲ್ಲಿ 7.37 ಕೋಟಿ ರೂ. ಸಾಲವಿದೆ. ಮುಂಬೈಯ ಜುಹು ವೈಲ್ ಪಾರ್ಲೆಯಲ್ಲಿ ಬಂಗಲೆ ನಿರ್ಮಿಸಲು ತೆಗೆದುಕೊಂಡ ಸಾಲವದು.
ಕೇವಲ 9 ನೇ ವಯಸ್ಸಿನಲ್ಲಿಯೇ ಶಾಲೆಯನ್ನು ಬಿಟ್ಟು ನೃತ್ಯ ಕಲಿಯುವುದಕ್ಕೆ ಆರಂಭಿಸಿದ್ದ ಹೇಮಾಮಾಲಿನಿ ನಂತರ ಮೆಟ್ರಿಕ್ಯುಲೇಶನ್ ಮುಗಿಸಿದರು. 2012 ರಲ್ಲಿ ಉದಯಪುರದ ಪದ್ಮಾವತಿ ಸಿಂಘಾನಿಯಾ ವಿವಿಯಲ್ಲಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.

ಎರಡು ಬಾರಿ ರಾಜ್ಯಸಭೆ ಸದಸ್ಯೆಯಾಗಿದ್ದ ಹೇಮಾಮಾಲಿನಿ
2003 ರಿಂದ 2009 ಮತ್ತು 2011 ರಿಂದ 2012 ರ ಅವಧಿಯಲ್ಲಿ ಎರಡು ಬಾರಿ ರಾಜ್ಯಸಭೆಗೆ ಹೇಮಾ ಮಾಲಿನಿ ಆಯ್ಕೆಯಾಗಿದ್ದರು. 2014 ರಲ್ಲಿ ಮಥುರಾ ಕ್ಷೇತ್ರದಿಂದಲೇ ಸ್ಪರ್ಧಿಸಿ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿ ಜಯಂತ್ ಚೌಧರಿ ಅವರನ್ನು 3,30,743 ಮತಗಳಿಂದ ಸೋಲಿಸುವ ಮೂಲಕ ಹೇಮಾಮಾಲಿನಿ ದಾಖಲೆ ಬರೆದಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications