ಕನಸಿನ ಕನ್ಯೆ ಹೇಮಾ ಮಾಲಿನಿ 100 ಕೋಟಿ ಆಸ್ತಿಯ ಒಡತಿ!
ಮಥುರಾ, ಮಾರ್ಚ್ 26: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಹೇಮಾ ಮಾಲಿನಿ ಅವರು ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ನೀಡಿದ ಅಫಿಡವಿಟ್ ನಲ್ಲಿ ತಮ್ಮ ಆಸ್ತಿಯ ವಿವರ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕನಸಿನ ಕನ್ಯೆ ಹೇಮಾ ಮಾಲಿನಿ ರೂ.100 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ. 2014 ರ ಚುನಾವಣೆಯ ಸಮಯದಲ್ಲಿ ರೂ.66 ಕೋಟಿ ಮೌಲ್ಯದ ಆಸ್ತಿಯನ್ನು ಅವರು ಹೊಂದಿದ್ದರು.
ಉತ್ತರ ಪ್ರದೇಶದ ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹೇಮಾ ಮಾಲಿನಿ, ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಿದರು. ಲೋಕಸಭೆ ಚುನವಣೆ ಏಪ್ರಿಲ್ 11 ರಿಂದ ಆರಂಭವಾಗಲಿದ್ದು, ಮೇ.19 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ.

5 ವರ್ಷದಲ್ಲಿ ತಲಾ 10 ಕೋಟಿ ರೂ.ಆದಾಯ
ಕಳೆದ ಐದು ವರ್ಷಗಳಿಂದ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ ಸಿಂಗ್ ಡಿಯೋಲ್ ದಂಪತಿ ತಲಾ 10 ಕೋಟಿ ರೂ.ನಷ್ಟು ಆದಾಯ ಗಳಿಸಿದ್ದಾರೆ ಎಂಬುದು ಆದಾಯ ತೆರಿಗೆ ಇಲಾಖೆಯಿಂದ ತಿಳಿದುಬಂದಿದೆ.
2014-15 ರಲ್ಲಿ 3.12 ಕೋಟಿ ರೂ, 2015-16 ರಲ್ಲಿ 1.19 ಕೋಟಿ ರೂ., 2016-17 ರಲ್ಲಿ 4.30 ಕೋಟಿ ರೂ. ಸಂಪಾದಿಸಿದ್ದಾರೆ.

ಮರ್ಸಿಡಝ್ ಕಾರ್
ಇದರೊಟ್ಟಿಗೆ ಅವರ ಬಳಿ 33.62 ಲಕ್ಷ ರೂ ಬೆಲೆಯ ಮರ್ಸಿಡಝ್ ಕಾರು ಮತ್ತು 4.75ಲಕ್ಷ ರೂ.ಮೌಲ್ಯದ ಟೊಯೋಟಾ ಕಾರಿದೆ.
1965 ರಲ್ಲಿ ಧರ್ಮೇಂದ್ರ ಅವರು ಕೊಂಡುಕೊಂಡಿದ್ದ ರೇಂಜ್ ರೋವರ್ ಕಾರು ಇಂದಿಗೂ ಅವರ ಬಳಿ ಇದೆ. ಆಗ ಆ ಕಾರಿಗೆ ಅವರು ನೀಡಿದ್ದ ಹಣ, 7000 ರೂ!

ಸಾಲ ಎಷ್ಟಿದೆ?
6.75 ಕೋಟಿ ರೂ.ನಷ್ಟು ಸಾಲವನ್ನು ಹೇಮಾ ಮಾಲಿನಿ ಹೊಂದಿದ್ದು, ಪತಿ ಧರ್ಮೇಂದ್ರ ಹೆಸರಿನಲ್ಲಿ 7.37 ಕೋಟಿ ರೂ. ಸಾಲವಿದೆ. ಮುಂಬೈಯ ಜುಹು ವೈಲ್ ಪಾರ್ಲೆಯಲ್ಲಿ ಬಂಗಲೆ ನಿರ್ಮಿಸಲು ತೆಗೆದುಕೊಂಡ ಸಾಲವದು.
ಕೇವಲ 9 ನೇ ವಯಸ್ಸಿನಲ್ಲಿಯೇ ಶಾಲೆಯನ್ನು ಬಿಟ್ಟು ನೃತ್ಯ ಕಲಿಯುವುದಕ್ಕೆ ಆರಂಭಿಸಿದ್ದ ಹೇಮಾಮಾಲಿನಿ ನಂತರ ಮೆಟ್ರಿಕ್ಯುಲೇಶನ್ ಮುಗಿಸಿದರು. 2012 ರಲ್ಲಿ ಉದಯಪುರದ ಪದ್ಮಾವತಿ ಸಿಂಘಾನಿಯಾ ವಿವಿಯಲ್ಲಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.

ಎರಡು ಬಾರಿ ರಾಜ್ಯಸಭೆ ಸದಸ್ಯೆಯಾಗಿದ್ದ ಹೇಮಾಮಾಲಿನಿ
2003 ರಿಂದ 2009 ಮತ್ತು 2011 ರಿಂದ 2012 ರ ಅವಧಿಯಲ್ಲಿ ಎರಡು ಬಾರಿ ರಾಜ್ಯಸಭೆಗೆ ಹೇಮಾ ಮಾಲಿನಿ ಆಯ್ಕೆಯಾಗಿದ್ದರು. 2014 ರಲ್ಲಿ ಮಥುರಾ ಕ್ಷೇತ್ರದಿಂದಲೇ ಸ್ಪರ್ಧಿಸಿ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿ ಜಯಂತ್ ಚೌಧರಿ ಅವರನ್ನು 3,30,743 ಮತಗಳಿಂದ ಸೋಲಿಸುವ ಮೂಲಕ ಹೇಮಾಮಾಲಿನಿ ದಾಖಲೆ ಬರೆದಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications