ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ?
ನಟ-ರಾಜಕಾರಣಿ ಕಮಲ್ ಹಾಸನ್ ಅವರ 'ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ' ಈ ಹೇಳಿಕೆ ಬಾರಿ ಚರ್ಚೆಯಾಗುತ್ತಿದೆ. ಆಗಾಗ 'ಹಿಂದೂ' ಎಂಬ ಪದ ತೆಗೆದು, ಅದಕ್ಕೆ ಎಷ್ಟು ಸಾಧ್ಯವೋ ಅಷ್ಟು ಅವಮಾನಿಸೋದೆ ಕೆಲವರ ಕೆಲಸ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಸದ್ಯದ ಪರಿಸ್ಥಿತಿಯಲ್ಲಿ ಇಡಿ ಜಗತ್ತು ಇಸ್ಲಾಂ ಭಯೋತ್ಪಾದನೆಯ ಬಗ್ಗೆ ತಲೆಕೆಡಸಿಕೊಂಡಿದ್ದಿದ್ದರೆ, ಕಮಲ್ ಹಾಸನ್ ರಂತವರು ಮಾತ್ರ 'ಹಿಂದೂ ಉಗ್ರ', 'ಹಿಂದೂ ಭಯೋತ್ಪಾದಕ' ಈ ಪದಗಳಿಗೆ ಅಂಟಿಕೊಂಡಿದ್ದಾರೆ. ಇವರ ಬಾಯಲ್ಲಿ, 'ಮುಸ್ಲಿಂ ಉಗ್ರ' ಎಂಬ ಪದ ಎಷ್ಟುಬಾರಿ ಬಂದಿದೆ?
ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ಮಾಡಿದ್ದು ಇಸ್ಲಾಂ ಉಗ್ರರು ಎಂದು ಇಡೀ ಜಗತ್ತಿಗೆ ಗೊತ್ತು. ಆದರೆ ಒಂದು ಗುಂಪು ಮಾತ್ರ 'ಭಯೋತ್ಪಾದಕರಿಗೆ ಧರ್ಮವಿಲ್ಲ' ಎನ್ನುತ್ತದೆ. ತಮಾಷೆಯೆಂದರೆ, ಅದೇ ಗುಂಪು ನಾಥೂರಾಮ ಗೋಡ್ಸೆಯನ್ನು 'ಹಿಂದೂ ಉಗ್ರ' ಎನ್ನುತ್ತದೆ. ಭಯೋತ್ಪಾದಕರಿಗೆ ಧರ್ಮವಿಲ್ಲ ಎಂದ ಮೇಲೆ, ನಾಥೂರಾಮ್ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾದ್ಯ?

ಉಗ್ರನಿಗೂ, ಕೊಲೆಗಾರನಿಗೂ ಬಹಳ ವ್ಯತ್ಯಾಸವಿದೆ. ಬಹುತೇಕ ಉಗ್ರ ದಾಳಿಯಲ್ಲಿ ಉಗ್ರರಿಗೆ ಸಾಯಿಸುವುದಷ್ಟೆ ಗುರಿಯಾಗಿರುತ್ತದೆ. ತಾವು ಸಾಯಿಸಲಿರುವ ವ್ಯಕ್ತಿಯ ಪರಿಚಯವೂ ಉಗ್ರರಿಗೆ ಇರುವುದಿಲ್ಲ. ಇನ್ನು ವೈಯಕ್ತಿಕ ದ್ವೇಷವಂತೂ ದೂರದ ಮಾತು. 2008ರಲ್ಲಿ ಮುಂಬೈ ಮೇಲೆ ನಡೆದ ಉಗ್ರರ ದಾಳಿ, ಇತ್ತೀಚೆಗೆ ಶ್ರೀಲಂಕದಲ್ಲಿ ನಡೆದ ಉಗ್ರರ ದಾಳಿ; ಇಲ್ಲಿ ಮೃತಪಟ್ಟ ಅಮಾಯಕರ ಪರಿಚಯ ಆ ಉಗ್ರರಿಗೆ ಇರಲಿಲ್ಲ. ಯಾರನ್ನಾದರೂ ಸರಿ, ಸಾಯಿಸಬೇಕಷ್ಟೆ- ಇದು ಉಗ್ರರ ಉದ್ದೇಶವಾಗಿತ್ತು.
ಆದರೆ ನಾಥೂರಾಮ್ ಗೋಡ್ಸೆ, ಗಾಂಧಿಯವರನ್ನು ಕೊಲ್ಲುವುದ್ದಕ್ಕೇ ಅವನದ್ದೇ ಆದ ಕೆಲವು ಕಾರಣಗಳಿದ್ದವು. ದೇಶ ವಿಭಜನೆ ಸಮಯದಲ್ಲಿ ನಡೆದ ಕೆಲವು ಘಟನೆಗಳು, ಹಿಂದೂಗಳ ಮಾರಣ ಹೋಮ, ಹಿಂದೂ ಮಹಿಳೆಯರ ಅತ್ಯಾಚಾರ; ಇವೆಲ್ಲಾ ಗೋಡ್ಸೆಗೆ ತುಂಬ ಸಿಟ್ಟು-ಬೇಸರಗಳನ್ನು ತಂದಿದ್ದವು. (ಅದನ್ನು ಇಲ್ಲಿ ವಿಸ್ತಾರವಾಗಿ ಬರೆಯಲು ಸಾಧ್ಯವಿಲ್ಲ. ತಿಳಿದುಕೊಳ್ಳಲು ಆಸಕ್ತಿ ಇರುವವರು ರವಿ ಬೆಳಗೆರೆಯವರ 'ಗಾಂಧಿ ಹತ್ಯೆ ಮತ್ತು ಗೋಡ್ಸೆ' ಪುಸ್ತಕ ಓದಬಹುದು). ಗೋಡ್ಸೆ ದೃಷ್ಟಿಯಲ್ಲಿ ಇವೆಲ್ಲಕ್ಕೂ ಗಾಂಧಿಯೇ ಪರೋಕ್ಷವಾಗಿ ಕಾರಣರಾಗಿದ್ದರು. ಹಾಗಾಗಿ ಅವನು ಗಾಂಧಿಯವರ ಮುಂದೆಯೇ ನಿಂತು ಗುಂಡು ಹಾರಿಸಿ ಹತ್ಯೆ ಮಾಡಿದ. ಸಿಕ್ಕ ಸಿಕ್ಕವರ ಮೇಲೆಲ್ಲ ಗುಂಡಿನ ದಾಳಿ ಮಾಡಲಿಲ್ಲ.
ನಾಥೂರಾಮ್ ಗೋಡ್ಸೆಯ ದುಷ್ಕೃತ್ಯ ಸಮರ್ಥನೀಯವಲ್ಲ. ಆದರೆ ಆತ ಉಗ್ರನಲ್ಲ ಎಂಬ ವಾದ ಮಂಡಿಸುವುದಕ್ಕಾಗಿ ಇದನ್ನು ವಿವರಿಸಿ ಹೇಳಬೇಕಾಯ್ತು. ಏಕೆಂದರೆ ಕೆಲವರಿಗೆ ಹಿಂದೂ ಧರ್ಮವನ್ನು ಅವಕಾಶ ಸಿಕ್ಕಾಗಲೆಲ್ಲ ಹೀಯಾಳಿಸಿ, ಹಿಂದೂಗಳಲ್ಲಿ ಕೀಳರಿಮೆ ಹುಟ್ಟಿಸುವುದೇ ಚಟವಾಗಿ ಬಿಟ್ಟಿದೆ. ಹಿಂದೂಗಳು ಮುಸ್ಲಿಮರ ಮೇಲೆ ದಾಳಿ ಮಾಡೇ ಇಲ್ಲ ಎಂದು ನಾನು ಹೇಳುವುದಿಲ್ಲ. ಖಂಡಿತಾ ಮಾಡಿದ್ದಾರೆ.
ಆದರೆ ಇಸ್ಲಾಂ ಮತಾಂಧರು ನಮ್ಮ ದೇಶದ ಮೇಲೆ, ಧರ್ಮದ ಮೇಲೆ ಯಾವ ಪರಿ ದಾಳಿ ಮಾಡಿ, ನಮ್ಮ ದೇವಸ್ಥಾನಗಳನ್ನು ಧ್ವಂಸ ಮಾಡಿದರು, ಸಂಸ್ಕೃತಿಯನ್ನು ನಾಶ ಮಾಡಿದರು, ಬಲವಂತದ ಮತಾಂತರ ಮಾಡಿದರು, ಮತಾಂತರ ಆಗಲು ಒಪ್ಪದ್ದಿದ್ದವರನ್ನು ಕೊಂದು ಹಾಕಿದರು, ಅತ್ಯಾಚಾರಗಳನ್ನು ಮಾಡಿದರು; ಇವೆಲ್ಲವೂ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ. ಹೇಳಿ ಕಮಲ ಹಾಸನ್, ಇದರ ಬಗ್ಗೆ ಯಾವಾಗ ಮಾತಾಡುತ್ತೀರಾ?
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications