ಈ ಸುಲಭ ಉಪಾಯದಿಂದ ಸಿಲಿಂಡರ್ನಲ್ಲಿ ಎಷ್ಟು ಗ್ಯಾಸ್ ಇದೆ ಎಂದು ತಿಳಿದುಕೊಳ್ಳಿ
ನಮ್ಮ ಮನೆಗಳಲ್ಲಿ ಸಿಲಿಂಡರ್ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ನಿರ್ದಿಷ್ಟ ಸಂದರ್ಭದಲ್ಲಿ ಸಿಲಿಂಡರ್ ಖಾಲಿಯಾದರೆ, ನಾವು ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ರಾತ್ರಿ ಊಟ ತಯಾರಿಸುವ ಮಧ್ಯೆ ಸಿಲಿಂಡರ್ ನಲ್ಲಿ ಗ್ಯಾಸ್ ಖಾಲಿಯಾದರೆ ಆ ದಿನ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಂಡು ರಾತ್ರಿ ಕಳೆಯಬೇಕು.
ಸಿಂಗಲ್ ಗ್ಯಾಸ್ ಸಿಲಿಂಡರ್ ಇರುವ ಮನೆಗಳಲ್ಲಿ ಏಕಾಏಕಿ ಗ್ಯಾಸ್ ಖಾಲಿಯಾಗುವುದರಿಂದ ಆಗುವ ತೊಂದರೆಗಳು ಸಾಕಷ್ಟು. ಹೀಗಾಗಿ ಮನೆಯಲ್ಲಿ ಮಹಿಳೆಯರು ಸಿಲಿಂಡರ್ನಲ್ಲಿ ಗ್ಯಾಸ್ ಎಷ್ಟು ಇದೆ ಎಂದು ಮುಂಚಿತವಾಗಿ ತಿಳಿದುಕೊಳ್ಳಲು ಸಿಲಿಂಡರ್ ಅನ್ನು ಎತ್ತುವ ಮೂಲಕ ಅಥವಾ ಗ್ಯಾಸ್ ಜ್ವಾಲೆಯನ್ನು ನೋಡುವ ಮೂಲಕ ಕಂಡುಹಿಡಿಯುವ ಪ್ರಯತ್ನಗಳನ್ನು ಮಾಡುತ್ತಾರೆ. ಈ ಮೂಲಕ ಸಿಲಿಂಡರ್ ಅವಧಿ ಮುಗಿಯಲಿದೆ ಎಂದು ಅಂದಾಜಿಸಲಾಗುತ್ತದೆ. ಆದರೆ ಇಂದು ನಾವು ಈ ಸಮಸ್ಯೆಗಳಿಗೆ ಸರಳ ಪರಿಹಾರವನ್ನು ತಂದಿದ್ದೇವೆ. ಈ ಅಳತೆಯ ಮೂಲಕ, ಸಿಲಿಂಡರ್ನಲ್ಲಿ ಎಷ್ಟು ಗ್ಯಾಸ್ ಉಳಿದಿದೆ ಎಂಬುದನ್ನು ನೀವು ಕಂಡುಹಿಡಿಯಬಹುದು ಮತ್ತು ಅದರ ಪ್ರಕಾರ ಸಿಲಿಂಡರ್ ಅನ್ನು ಮುಂಚಿತವಾಗಿ ಬುಕ್ ಮಾಡಬಹುದು.
ಒದ್ದೆಯಾದ ಟವೆಲ್ ಅಥವಾ ಕಾಟನ್ ಬಟ್ಟೆಯನ್ನು ತೆಗೆದುಕೊಂಡು ಅದನ್ನು ಸಿಲಿಂಡರ್ ಸುತ್ತಲೂ ಕಟ್ಟಿ. ಸ್ವಲ್ಪ ಸಮಯದ ನಂತರ ಸಿಲಿಂಡರ್ ಹೊರಗಿನಿಂದ ಒದ್ದೆಯಾದಾಗ, ಆ ಬಟ್ಟೆಯನ್ನು ತೆಗೆದುಹಾಕಿ. ಕೆಲವು ಸೆಕೆಂಡುಗಳ ನಂತರ ಸಿಲಿಂಡರ್ನ ಕೆಲವು ಭಾಗವು ಬೇಗನೆ ಒಣಗಲು ಪ್ರಾರಂಭಿಸಿದೆ ಎಂದು ನೀವು ಗಮನಿಸಬಹುದು. ಸ್ವಲ್ಪ ಒಣಗಿದ ಭಾಗದವರೆಗಿನ ಅನಿಲವು ಖಾಲಿಯಾಗುತ್ತದೆ ಮತ್ತು ಅನಿಲವು ತೇವದ ಭಾಗದಲ್ಲಿ ಮಾತ್ರ ಉಳಿಯುತ್ತದೆ.

ಸಿಲಿಂಡರ್ನ ಖಾಲಿ ಭಾಗವು ಬಿಸಿಯಾಗಿರುವುದರಿಂದ ಇದು ಸಂಭವಿಸುತ್ತದೆ. ಆದ್ದರಿಂದ ಅದು ಹೊರಗಿನಿಂದಲೂ ಒಣಗಲು ಪ್ರಾರಂಭಿಸುತ್ತದೆ. ಅದೇ ಸಮಯದಲ್ಲಿ, ದ್ರವ ಅನಿಲವನ್ನು ತುಂಬಿದ ಭಾಗವು ತುಲನಾತ್ಮಕವಾಗಿ ಕಡಿಮೆ ಬಿಸಿಯಾಗಿರುತ್ತದೆ. ಈ ಕಾರಣದಿಂದಾಗಿ ಅದು ಹೊರಗಿನಿಂದ ತೇವವಾಗಿ ಕಾಣುತ್ತದೆ. ಈ ರೀತಿಯಾಗಿ ಸಿಲಿಂಡರ್ನ ಯಾವ ಭಾಗದವರೆಗೆ ಅನಿಲ ಉಳಿದಿದೆ ಎಂಬುದನ್ನು ಕಂಡುಹಿಡಿಯಬಹುದು.

ಗಮನಿಸಿ: ಈ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಇದನ್ನು ಪ್ರಯತ್ನಿಸುವ ಮುನ್ನ ಮೊದಲು ಸಂಬಂಧಿತ ತಜ್ಞರೊಂದಿಗೆ ಸಮಾಲೋಚಿಸಿ.
Recommended Video
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications