ಕೆಲವೇ ನಿಮಿಷಗಳಲ್ಲಿ ಇ-ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?
ನವದೆಹಲಿ, ನವೆಂಬರ್ 05: ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number(PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ.
ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್ ಕಾರ್ಡ್ ನೀಡುವ ಯೋಜನೆ ಮುಂದಿನ ಕೆಲವು ವಾರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಮೂಲಗಳು ಹೇಳಿವೆ.
ಈ ಸೌಲಭ್ಯದಲ್ಲಿ ಅರ್ಜಿ ಸಲ್ಲಿಸಲಿರುವ ವ್ಯಕ್ತಿಯ ವಿವರಗಳನ್ನು ಆಧಾರ್ ಮೂಲಕ ತೆಗೆದುಕೊಳ್ಳಲಾಗುವುದು. ಇದರಿಂದ ಪ್ಯಾನ್ ಕಾರ್ಡ್ ದಾರರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ.

ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು
***
ಇ ಪ್ಯಾನ್ ಕಾರ್ಡ್ ವಿಶೇಷ ಹೇಗೆ?
* ಇ ಪ್ಯಾನ್ ಅರ್ಜಿಯಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಕಡ್ಡಾಯ.
* ಆಧಾರ್ ಸಂಖ್ಯೆಗೆ ಜೋಡಿಸಿರುವ ಅಧಿಕೃತ ಫೋನ್ ನಂಬರ್ ಪರಿಶೀಲಿಸಲಾಗುವುದು
* ನಿಮ್ಮ ಅಧಿಕೃತ ಫೋನ್ ನಂಬರ್ ಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರಲಿದೆ.
* ಯಾವುದೇ ಬೇರೆ ದಾಖಲೆ ಒದಗಿಸುವ ಅಗತ್ಯವಿಲ್ಲ.
* ಹೊಸ PAN ಸೃಷ್ಟಿಯಾಗುತ್ತಿದ್ದಂತೆ, ಡಿಜಿಟಲ್ ಸಹಿಯುಳ್ಳ ಇ-ಪ್ಯಾನ್ ವಿತರಿಸಲಾಗುವುದು
* ಇದು ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ. ಇದರಲ್ಲಿ ಭೌಗೋಳಿಕ ಮಾಹಿತಿ, ಅರ್ಜಿದಾರರನ ಭಾವಚಿತ್ರ ಇರಲಿದೆ. ಎಲ್ಲಾ ಮಾಹಿತಿಯೂ encrypt ಆಗಿರುವುದರಿಂದ ಮಾಹಿತಿ ಸುರಕ್ಷವಾಗಿರಲಿದೆ.
ಇ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?
UTI-ITSL ಮೂಲಕ ಹೊಸ ಪ್ಯಾನ್ ಪಡೆಯಲು ಬಯಸುವವರು ಹಾಗೂ ಪ್ಯಾನ್ ಕಾರ್ಡಿನಲ್ಲಿ ಬದಲಾವಣೆ ಬಯಸುವವರು ಆನ್ ಲೈನ್ ನಲ್ಲಿ ಇ-ಪ್ಯಾನ್ ಕಾರ್ಡ್
* NSDL ಹಾಗೂ UTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ
* ಡೌನ್ ಲೋಡ್ ಇ ಪ್ಯಾನ್ ಕಾರ್ಡ್ ಕ್ಲಿಕ್ ಮಾಡಿ
* ಚಾಲ್ತಿ ಪ್ಯಾನ್ ಬದಲಾವಣೆ ಬಯಸುವವರು PAN, ಆಧಾರ್, ಹುಟ್ಟಿದ ದಿನಾಂಕ. ಇತ್ಯಾದಿ ಪ್ರಮುಖ ಮಾಹಿತಿ ನೀಡಿ.
* ನಿಗದಿತ ಶುಲ್ಕವನ್ನು ಡೆಬಿಟ್/ ಕ್ರೆಡಿಟ್, ಡಿಡಿ ಅಥವಾ ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಿ.
* 15 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಕಳಿಸಲಾಗುತ್ತದೆ.
* ಪರಿಶೀಲನೆ ನಂತರ ನಿಮ್ಮ ಪ್ಯಾನ್ ಕಾರ್ಡ್ ನಿಮ್ಮ ಅಧಿಕೃತ ವಿಳಾಸವನ್ನು ತಲುಪಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications