ಪ್ರಧಾನ ಮಂತ್ರಿ ಉಜ್ವಲ್ ಯೋಜನೆ; ಉಚಿತ ಸಿಲಿಂಡರ್ ಪಡೆಯುವುದು ಹೇಗೆ?
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ್ ಯೋಜನೆ (3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತವಾಗಿ ಎಲ್ಪಿಜಿ ವಿತರಣೆ ಮಾಡಲಾಗುತ್ತದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸುತ್ತಿದ್ದು, ಉಚಿತ ಸಿಲಿಂಡರ್ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.
ಉಜ್ವಲ್ ಯೋಜನೆ 3ನೇ ಹಂತದಡಿ ಎಲ್ಪಿಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆಜಿ ಸಿಲಿಂಡರ್ ಮತ್ತು ಎರಡು 5 ಕೆಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ.

ಇದುವರೆಗೂ ಎಲ್ಪಿಜಿ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್ಪಿಜಿ ವಿತರಕ ಕಂಪನಿಗೆ ಭೇಟಿ ನೀಡಿ ಈ ಯೋಜನೆಯಡಿ ಸಿಲಿಂಡರ್ ಸೌಲಭ್ಯವನ್ನು ಪಡೆಯಬಹುದು.
ಅರ್ಹತೆ, ಬೇಕಾಗುವ ದಾಖಲೆಗಳು; ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಎಲ್ಪಿಜಿ ಸಂಪರ್ಕದ ಅರ್ಜಿದಾರ (ಮಹಿಳೆ ಮಾತ್ರ) 18 ವರ್ಷ ಪೂರ್ಣಗೊಂಡಿರಬೇಕು. ಒಂದೇ ಮನೆಯಲ್ಲಿ ಯಾವುದೇ OMCಯಿಂದ ಬೇರೆ ಯಾವುದೇ LPG ಸಂಪರ್ಕ ಇರಬಾರದು.
ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (KYC). ಅರ್ಜಿದಾರರ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯಾಗಿ ಅರ್ಜಿದಾರರ ಆಧಾರ್ ಕಾರ್ಡ್ ಆಧಾರ್ನಲ್ಲಿ ನಮೂದಿಸಿದ ಅದೇ ವಿಳಾಸದಲ್ಲಿ (ಅಸ್ಸಾಂ ಮತ್ತು ಮೇಘಾಲಯಕ್ಕೆ ಕಡ್ಡಾಯವಾಗಿಲ್ಲ) ವಾಸಿಸುತ್ತಿದ್ದರೆ ದಾಖಲೆ ನೀಡಬೇಕು.
ಅರ್ಜಿ ಸಲ್ಲಿಸುತ್ತಿರುವ ರಾಜ್ಯದಿಂದ ನೀಡಲಾದ ಪಡಿತರ ಚೀಟಿ/ ಇತರೆ ರಾಜ್ಯ ಸರ್ಕಾರ. (ವಲಸೆ ಅರ್ಜಿದಾರರಿಗೆ) ಪ್ರಕಾರ ಕುಟುಂಬದ ಸಂಯೋಜನೆ/ ಸ್ವಯಂ ಘೋಷಣೆ ಪ್ರಮಾಣೀಕರಿಸುವ ದಾಖಲೆ
Sl ನಲ್ಲಿ ಡಾಕ್ಯುಮೆಂಟ್ನಲ್ಲಿ ಕಾಣಿಸಿಕೊಳ್ಳುವ ಫಲಾನುಭವಿ ಮತ್ತು ವಯಸ್ಕ ಕುಟುಂಬದ ಸದಸ್ಯರ ಆಧಾರ್ ಬೇಕಾಗುತ್ತದೆ.
ಬ್ಯಾಂಕ್ ಖಾತೆ ಸಂಖ್ಯೆ ಮತ್ತು IFSC, ಕುಟುಂಬದ ಸ್ಥಿತಿಯನ್ನು ಬೆಂಬಲಿಸಲು ಪೂರಕ KYCಯನ್ನು ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ನೀಡಬೇಕಾಗುತ್ತದೆ. ಅರ್ಜಿದಾರರು ವಿತರಕರಲ್ಲಿ ಅರ್ಜಿಯನ್ನು ಸಲ್ಲಿಸುವ ಮೂಲಕ ಅಥವಾ ಆನ್ಲೈನ್ ಪೋರ್ಟಲ್ ಮೂಲಕ ಸಹ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಮೇ 1, 2016ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪ್ರಾರಂಭಿಸಿದರು. ಈಗ ಯೋಜನೆಯ 3ನೇ ಹಂತದಲ್ಲಿದೆ. ಈಗಲೂ ಸಹ ಬಡ ಕುಟುಂಬದ ಮಹಿಳೆಯರು ಯೋಜನೆಯಡಿ ಅರ್ಜಿ ಸಲ್ಲಿಕೆ ಮಾಡಿ ಉಚಿತ ಸಿಲಿಂಡರ್ ಪಡೆಯಬಹುದು.
ದೇಶದಾದ್ಯಂತ ಹೊಗೆ ರಹಿತ ಗ್ರಾಮಗಳನ್ನು ನಿರ್ಮಿಸುವ ಪ್ರಧಾನ ಮಂತ್ರಿಯವರ ಕನಸಿಗೆ ಅನುಗುಣವಾಗಿ ಈ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಬಿಪಿಎಲ್ ಕುಟುಂಬಗಳ ಮಹಿಳೆಯರಿಗೆ ತಮ್ಮದೇ ಆದ ಗುರುತಾಗಿ ಎಲ್ಪಿಜಿ ಸಂಪರ್ಕವನ್ನು ಪಡೆಯಲು, ಮನೆಯನ್ನು ಹೊಗೆ ಮುಕ್ತ, ಕಡಿಮೆ ಮಾಲಿನ್ಯಗೊಳಿಸಿ ಆರೋಗ್ಯಕರ ಜೀವನ ನಡೆಸಲು ಯೋಜನೆ ಸಹಾಯಕವಾಗಿದೆ.
ಈ ಯೋಜನೆಯ ಮುಖ್ಯ ಉದ್ದೇಶ ಸ್ವಚ್ಛ್ ಇಂಧನ್, ಬೆಹ್ತಾರ್ ಜೀವನ್, ಮಹಿಳಾ ಕೋ ಮಿಲಾ ಸಮ್ಮಾನ್ ಎಂಬುದಾಗಿದೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಸಂಪರ್ಕಗಳನ್ನು ಒದಗಿಸುವ ಮಹತ್ತರ ಯೋಜನೆ ಇದಾಗಿದೆ. ಯೋಜನೆಯಡಿ ಸಿಲಿಂಡರ್ ಸಂಪರ್ಕಗಳನ್ನು ಕುಟುಂಬದ ಮಹಿಳಾ ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗುತ್ತದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಒದಗಿಸುವ ಸಾಮಾಜಿಕ, ಆರ್ಥಿಕ ಜಾತಿ ಗಣತಿ (SECC) ದತ್ತಾಂಶದ ಮೇಲೆ ಅರ್ಹ BPL ಕುಟುಂಬಗಳನ್ನು ಗುರುತಿಸಲಾಗುತ್ತದೆ. ಯೋಜನೆಯನ್ನು ಮುಂದುವರಿಸಲು ಮತ್ತು ಅದನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸಲು, ತೈಲ ಮಾರುಕಟ್ಟೆ ಕಂಪನಿಗಳ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಮೊದಲ ಹಂತದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಅನ್ನು ಆರಂಭಿಸಿದ ಬಳಿಕ ಸೆಪ್ಟೆಂಬರ್ 2019ರಲ್ಲಿ 8 ಕೋಟಿ ಸಂಪರ್ಕಗಳ ಗುರಿ ಸಾಧಿಸಲಾಯಿತು. ಉಳಿದ ಬಡ ಕುಟುಂಬಗಳನ್ನು ಯೋಜನೆಗೆ ಸೇರಿಸಲು ಈ ಯೋಜನೆಯ ಹಂತ-2 (ಉಜ್ವಲ 2.0) ಆಗಸ್ಟ್ 2021ರಲ್ಲಿ ಪ್ರಾರಂಭಿಸಲಾಯಿತು. 1 ಕೋಟಿ ಹೆಚ್ಚುವರಿ ಸಂಪರ್ಕಗಳನ್ನು ನೀಡಲಾಯಿತು.
ಕೇಂದ್ರ ಸರ್ಕಾರ 01/07/2023ರಲ್ಲಿ ನೀಡಿದ ಮಾಹಿತಿಯಂತೆ ಸುಮಾರು 9.59 ಕೋಟಿ PMUY ಫಲಾನುಭವಿಗಳಿದ್ದಾರೆ. ಅವರಲ್ಲಿ 8.41 ಕೋಟಿ ಜನರು 2022-23ರಲ್ಲಿ ಕನಿಷ್ಠ ಒಂದು ಮರುಪೂರಣವನ್ನು ತೆಗೆದುಕೊಂಡಿದ್ದಾರೆ.
-
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ











Click it and Unblock the Notifications