ಕರ್ನಾಟಕ ಒನ್ ಕೇಂದ್ರ ತರೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರು ನಗರದಲ್ಲಿ ಒಂದೇ ಸೂರಿನಡಿ ಹಲವು ನಾಗರಿಕ ಸೇವೆಗಳನ್ನು ನೀಡಲು 'ಬೆಂಗಳೂರು ಒನ್' ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕರ್ನಾಟಕ ಸರ್ಕಾರ 'ಕರ್ನಾಟಕ ಒನ್' ಸೇವಾಕೇಂದ್ರವನ್ನು ಆರಂಭಿಸಿದೆ.
ಪ್ರಸ್ತುತ ಕರ್ನಾಟಕದಲ್ಲಿ 60ಕ್ಕೂ ಹೆಚ್ಚು ಕರ್ನಾಟಕ ಒನ್ ಸೇವಾ ಕೇಂದ್ರಗಳಿವೆ. ಹಲವು ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳನ್ನು ತೆರೆಯಲು ಆಗಾಗ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ನಾಗರಿಕರಿಗೆ ಹಲವು ವಿವಿಧ ಸೇವೆ ನೀಡುವ ಈ ಕೇಂದ್ರ ಆರಂಭಿಸಲು ಬೇಕಾದ ಅರ್ಹತೆಗಳೇನು?, ಅರ್ಜಿ ಸಲ್ಲಿಕೆ ಹೇಗೆ? ಮುಂತಾದ ಮಾಹಿತಿಗಳು ಇಲ್ಲಿವೆ.

2 ಕೇಂದ್ರಗಳಿಗೆ ಅರ್ಜಿ ಆಹ್ವಾನ; ಅಣ್ಣಿಗೇರಿ ಪಟ್ಟಣದಲ್ಲಿ ಎರಡು ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಉಳಿದಿರುವ ಕರ್ನಾಟಕ ಒನ್ 2 ಕೇಂದ್ರಗಳಿಗೆ ಪ್ರಾಂಜೇಸಿಗಾಗಿ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಆಸಕ್ತರು https://www.karnatakaone.gov.in/Public/FranchiseeTerms ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಕೆ ಮಾಡಲು ಜನವರಿ 2, 2014 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವವರು ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಠ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡ, ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್ ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಹೊಂದಿರಬೇಕು.
ಈಗಾಗಲೇ ಸರಕಾರದಿಂದ ಅಸ್ತಿತ್ವದಲ್ಲಿರುವ ಕರ್ನಾಟಕ ಒನ್ ಕೇಂದ್ರದಿಂದ ಅಂತರ 2 ಕಿ. ಮೀ. ಇರಬೇಕು ಹಾಗೂ ಅರ್ಜಿದಾರರು ಕೇಂದ್ರವನ್ನು ಸ್ಥಾಪಿಸಲು ಒಂದಕ್ಕಿಂತ ಹೆಚ್ಚು ಸ್ಥಳಗಳನ್ನು ಗುರುತಿಸಿದಲ್ಲಿ ಜಿಲ್ಲಾ ಕಾರ್ಯಪಡೆಯ ನಿರ್ಣಯ ಅಂತಿಮ ಇರುವ ಮಾನದಂಡಗಳಿಗೆ ಬದ್ಧರಾಗಿರಬೇಕು.
ಮಾನದಂಡಳ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ ಡೆಸ್ಕ್ ಸಂಖ್ಯೆ 080-49203888, 8904085030ಗೆ ಸಂಪರ್ಕಿಸಬಹುದು. ವಲಯ ಕೋಆರ್ಡಿನೇಟರ್ ಆಗಿರುವ ಅನೀಸ್ ಅಹಮದ್ ಅವರನ್ನು 9845220135, [email protected] ಮೂಲಕ ಸಂಪರ್ಕಿಸಬಹುದು.
ಈಗ ಕರ್ನಾಟಕ ಒನ್ ಕೇಂದ್ರದ ಮೂಲಕ ಹಲವು ಸೇವೆಗಳನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ಫಲಾನುಭವಿಗಳು ಈ ಕೇಂದ್ರದ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸಹ ಅವಕಾಶ ನೀಡಲಾಗಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications