ಪಟಾಕಿಯಿಂದ ಸುಟ್ಟ ಗಾಯ; ಚಿಕಿತ್ಸೆ ಮಾಡಿಕೊಳ್ಳುವುದು ಹೇಗೆ, ಇಲ್ಲಿದೆ ವಿವರ
ನವದೆಹಲಿ, ಅ.23: ಅಕ್ಟೋಬರ್ 24ಕ್ಕೆ ದೀಪಾವಳಿ ಹಬ್ಬವಿದ್ದರೂ ಕೂಡ ಈಗಾಗಲೇ ಎಲ್ಲೆಡೆ ದೀಪಗಳನ್ನು ಕೊಳ್ಳುವುದು, ಪಟಾಕಿ ಖರೀದಿ ಮತ್ತು ಪಟಾಕಿ ಸಿಡಿಸುವುದು ನಡೆಯುತ್ತಿದೆ. ಲಕ್ಷ್ಮಿ ದೇವಿಯ ಆರಾಧಕರು ಭಾನುವಾರ ಧಂತೇರಸ್ ಮತ್ತು ಸೋಮವಾರ ನರಕ ಚತುರ್ದಶಿಯನ್ನು ಉತ್ಸಾಹದಿಂದ ಆಚರಿಸುತ್ತಿದ್ದಾರೆ.
ದೀಪಾವಳಿಯು ಬೆಳಕಿನ ಆಚರಣೆಯಾಗಿದೆ. ಹೀಗಾಗಿ ಕೆಲವೊಮ್ಮೆ ನಾವು ಪಟಾಕಿ, ದೀಪಗಳು ಮತ್ತು ಮೇಣದಬತ್ತಿಗಳನ್ನು ಬೆಳಗಿಸುವಾಗ ಜಾಗರೂಕರಾಗಿರವುದನ್ನು ಮರೆಯುತ್ತೇವೆ. ಆಕಸ್ಮಿಕವಾಗಿ ಹಲವು ಅವಘಡಗಳು ಸಂಭವಿಸುತ್ತವೆ. ಹೀಗಾಗಿ ದೀಪಾವಳಿ ಸಮಯದಲ್ಲಿ ಸುಟ್ಟ ಗಾಯಗಳನ್ನು ತಪ್ಪಿಸಲು, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ.
ಸುಟ್ಟಗಾಯ ಎಷ್ಟು ತೀವ್ರವಾಗಿದೆ ಎಂಬುದರ ಮೇಲೆ ಪ್ರಥಮ ಚಿಕಿತ್ಸಾ ವಿಧಾನವನ್ನು ನಿರ್ಧರಿಸಲಾಗುತ್ತದೆ. ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ಸುಟ್ಟಗಾಯಗಳನ್ನು ಈ ಕೆಳಗಿನ ವಿಧಾನಗಳಲ್ಲಿ ಚಿಕಿತ್ಸೆ ನೀಡಬಹುದು.

ಒಬ್ಬ ವ್ಯಕ್ತಿ ಸಣ್ಣ ಸುಟ್ಟಗಾಯಗಳಿಂದ ಬಳಲುತ್ತಿದ್ದರೆ, ಸುಟ್ಟ ಭಾಗವನ್ನು ಹರಿಯುತ್ತಿರುವ ತಣ್ಣೀರಿನ ಅಡಿಯಲ್ಲಿ ಇರಿಸಬೇಕು. ಅಥವಾ ಕೋಲ್ಡ್ ಕಂಪ್ರೆಸ್ ಅನ್ನು ಬಳಸಬೇಕು. ಇದು ಸುಟ್ಟ ಗಾಯವನ್ನು ತಂಪಾಗಿಸುವ ಮೂಲಕ ಅದು ದೊಡ್ಡ ಗಾಯವಾಗುವ, ಊದಿಕೊಳ್ಳುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ. ಇದು ಸುಟ್ಟಗಾಯಗಳ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.
ಗಾಯಗೊಂಡ ಪ್ರದೇಶಕ್ಕೆ ಹತ್ತಿ ಬಳಸಿ ಸಡಿಲವಾದ ಬ್ಯಾಂಡೇಜ್ ಮಾಡಬೇಕು. ಗಾಯವನ್ನು ಮುಚ್ಚಿಟ್ಟರೆ ಬೇಗ ವಾಸಿಯಾಗುತ್ತದೆ.
ಸುಟ್ಟ ಗಾಯದ ಪ್ರದೇಶಕ್ಕೆ ತೆಳ್ಳಗೆ ಕೆನೆ ಹಚ್ಚಿ, ಇದರಿಂದ ಗುಳ್ಳೆಗಳು ಕಡಿಮೆಯಾಗುತ್ತವೆ. ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಯಾವುದೇ ಕ್ರೀಮ್ಗಳು, ಲೋಷನ್ಗಳು ಅಥವಾ ಇತರ ಉತ್ಪನ್ನಗಳನ್ನು ಬಳಸಬೇಡಿ. ಇದು ಮತ್ತಷ್ಟು ಅನಾಹುತಕ್ಕೆ ಕಾರಣವಾಹಬಹುದು.

ಇನ್ನು, ವೈದ್ಯರು ಸೂಚಿಸಿದಂತೆ ನೋವು ನಿವಾರಕಗಳನ್ನು ಮಾತ್ರ ತೆಗೆದುಕೊಳ್ಳಿ. ಸುಟ್ಟ ಗಾಯದ ಮೇಲೆ ಕಾಣಿಸಿಕೊಳ್ಳುವ ಗುಳ್ಳೆಗಳನ್ನು ಒಡೆಯಲು ಮಾತ್ರ ಪ್ರಯತ್ನಿಸಬೇಡಿ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications