ಪಟಾಕಿಯಿಂದ ಸುಟ್ಟ ಗಾಯ; ಚಿಕಿತ್ಸೆ ಮಾಡಿಕೊಳ್ಳುವುದು ಹೇಗೆ, ಇಲ್ಲಿದೆ ವಿವರ
ನವದೆಹಲಿ, ಅ.23: ಅಕ್ಟೋಬರ್ 24ಕ್ಕೆ ದೀಪಾವಳಿ ಹಬ್ಬವಿದ್ದರೂ ಕೂಡ ಈಗಾಗಲೇ ಎಲ್ಲೆಡೆ ದೀಪಗಳನ್ನು ಕೊಳ್ಳುವುದು, ಪಟಾಕಿ ಖರೀದಿ ಮತ್ತು ಪಟಾಕಿ ಸಿಡಿಸುವುದು ನಡೆಯುತ್ತಿದೆ. ಲಕ್ಷ್ಮಿ ದೇವಿಯ ಆರಾಧಕರು ಭಾನುವಾರ ಧಂತೇರಸ್ ಮತ್ತು ಸೋಮವಾರ ನರಕ ಚತುರ್ದಶಿಯನ್ನು ಉತ್ಸಾಹದಿಂದ ಆಚರಿಸುತ್ತಿದ್ದಾರೆ.
ದೀಪಾವಳಿಯು ಬೆಳಕಿನ ಆಚರಣೆಯಾಗಿದೆ. ಹೀಗಾಗಿ ಕೆಲವೊಮ್ಮೆ ನಾವು ಪಟಾಕಿ, ದೀಪಗಳು ಮತ್ತು ಮೇಣದಬತ್ತಿಗಳನ್ನು ಬೆಳಗಿಸುವಾಗ ಜಾಗರೂಕರಾಗಿರವುದನ್ನು ಮರೆಯುತ್ತೇವೆ. ಆಕಸ್ಮಿಕವಾಗಿ ಹಲವು ಅವಘಡಗಳು ಸಂಭವಿಸುತ್ತವೆ. ಹೀಗಾಗಿ ದೀಪಾವಳಿ ಸಮಯದಲ್ಲಿ ಸುಟ್ಟ ಗಾಯಗಳನ್ನು ತಪ್ಪಿಸಲು, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ.
ಸುಟ್ಟಗಾಯ ಎಷ್ಟು ತೀವ್ರವಾಗಿದೆ ಎಂಬುದರ ಮೇಲೆ ಪ್ರಥಮ ಚಿಕಿತ್ಸಾ ವಿಧಾನವನ್ನು ನಿರ್ಧರಿಸಲಾಗುತ್ತದೆ. ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ಸುಟ್ಟಗಾಯಗಳನ್ನು ಈ ಕೆಳಗಿನ ವಿಧಾನಗಳಲ್ಲಿ ಚಿಕಿತ್ಸೆ ನೀಡಬಹುದು.

ಒಬ್ಬ ವ್ಯಕ್ತಿ ಸಣ್ಣ ಸುಟ್ಟಗಾಯಗಳಿಂದ ಬಳಲುತ್ತಿದ್ದರೆ, ಸುಟ್ಟ ಭಾಗವನ್ನು ಹರಿಯುತ್ತಿರುವ ತಣ್ಣೀರಿನ ಅಡಿಯಲ್ಲಿ ಇರಿಸಬೇಕು. ಅಥವಾ ಕೋಲ್ಡ್ ಕಂಪ್ರೆಸ್ ಅನ್ನು ಬಳಸಬೇಕು. ಇದು ಸುಟ್ಟ ಗಾಯವನ್ನು ತಂಪಾಗಿಸುವ ಮೂಲಕ ಅದು ದೊಡ್ಡ ಗಾಯವಾಗುವ, ಊದಿಕೊಳ್ಳುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ. ಇದು ಸುಟ್ಟಗಾಯಗಳ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.
ಗಾಯಗೊಂಡ ಪ್ರದೇಶಕ್ಕೆ ಹತ್ತಿ ಬಳಸಿ ಸಡಿಲವಾದ ಬ್ಯಾಂಡೇಜ್ ಮಾಡಬೇಕು. ಗಾಯವನ್ನು ಮುಚ್ಚಿಟ್ಟರೆ ಬೇಗ ವಾಸಿಯಾಗುತ್ತದೆ.
ಸುಟ್ಟ ಗಾಯದ ಪ್ರದೇಶಕ್ಕೆ ತೆಳ್ಳಗೆ ಕೆನೆ ಹಚ್ಚಿ, ಇದರಿಂದ ಗುಳ್ಳೆಗಳು ಕಡಿಮೆಯಾಗುತ್ತವೆ. ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಯಾವುದೇ ಕ್ರೀಮ್ಗಳು, ಲೋಷನ್ಗಳು ಅಥವಾ ಇತರ ಉತ್ಪನ್ನಗಳನ್ನು ಬಳಸಬೇಡಿ. ಇದು ಮತ್ತಷ್ಟು ಅನಾಹುತಕ್ಕೆ ಕಾರಣವಾಹಬಹುದು.

ಇನ್ನು, ವೈದ್ಯರು ಸೂಚಿಸಿದಂತೆ ನೋವು ನಿವಾರಕಗಳನ್ನು ಮಾತ್ರ ತೆಗೆದುಕೊಳ್ಳಿ. ಸುಟ್ಟ ಗಾಯದ ಮೇಲೆ ಕಾಣಿಸಿಕೊಳ್ಳುವ ಗುಳ್ಳೆಗಳನ್ನು ಒಡೆಯಲು ಮಾತ್ರ ಪ್ರಯತ್ನಿಸಬೇಡಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications