ಕೊವಿಡ್19 ಪಿಡುಗು ಕಾರಣ ಹೇಳಿ ಇಪಿಎಫ್ ವಿಥ್ ಡ್ರಾ ಮಾಡುವುದು ಹೇಗೆ?
ಬೆಂಗಳೂರು, ಮಾರ್ಚ್ 30: ಕೊರೊನಾ ವೈರಾಣು ಹಬ್ಬದಿರುವಂತೆ ಸರ್ಕಾರದಿಂದ 21 ದಿನಗಳ ಲಾಕ್ ಡೌನ್ ಘೋಷಿಸಿರುವುದು ನಿಮಗೆಲ್ಲ ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಭವಿಷ್ಯ ನಿಧಿ ವಿಥ್ ಡ್ರಾಗೆ ಸಂಬಂಧಿಸಿದಂತೆ ಹೊಸದಾಗಿ ವಿನಾಯ್ತಿ ನೀಡಲಾಗಿದೆ. ಅದರರ್ಥ EPFO ಸದಸ್ಯರು ತಮ್ಮ ಅಗತ್ಯಗಳಿಗೆ ಹಣ ವಿಥ್ ಡ್ರಾ ಮಾಡಬಹುದು. ಆದರೆ ಎಷ್ಟು ಹಣ ತೆಗೆದುಕೊಳ್ಳಬಹುದು, ಹೇಗೆ ತೆಗೆದುಕೊಳ್ಳಬಹುದು ಎಂಬ ಮಾಹಿತಿ ಇಲ್ಲಿದೆ.
ಅನಾರೋಗ್ಯ, ಮನೆ ಖರೀದಿ ಸೇರಿದಂತೆ ಇತರ ಕಾರಣಗಳಿಗಾಗಿ ಮರುಪಾವತಿ ಮಾಡುವ ಅಗತ್ಯ ಇಲ್ಲದೆ ಪಿಎಫ್ ಹಣ ವಿಥ್ ಡ್ರಾ ಮಾಡಬಹುದಿತ್ತು. ಆದರೆ ಕೊರೊನಾ ವ್ಯಾಪಕವಾಗಿ ಹರಡಿರುವುದರಿಂದ ತುರ್ತು ಹಣಕಾಸಿನ ಅಗತ್ಯಗಳಿಗೆ ಸಮಸ್ಯೆ ಆಗಬಾರದು ಎಂದು ಸರ್ಕಾರದಿಂದ ಈ ನಿರ್ಧಾರ ಮಾಡಲಾಗಿದೆ.
ಕೊರೊನಾವೈರಸ್ ಹಬ್ಬುತ್ತಿರುವ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭವಿಷ್ಯ ನಿಧಿ ವಿಥ್ ಡ್ರಾ ಕುರಿತಂತೆ ಕೂಡಾ ಪ್ರಮುಖ ಘೋಷಣೆ ಮಾಡಿದರು. ಈ ಹೊಸ ಇಪಿಎಫ್ ನಿಯಮದಂತೆ ಎಷ್ಟು ವಿಥ್ ಡ್ರಾ ಮಾಡಬಹುದು ಎಂಬ ಮಾಹಿತಿ ಮುಂದಿದೆ.

ಪಿಎಫ್ ಒಟ್ಟು ಮೊತ್ತದ ಶೇಕಡಾ 75ರಷ್ಟು
ಮೂಲವೇತನ(Basic Pay)+ ತುಟ್ಟಿ ಭತ್ಯೆ (DA) ಸೇರಿ ಮೂರು ತಿಂಗಳ ಮೊತ್ತ (ಪೂರ್ತಿ ವೇತನ ಅಲ್ಲ) ಅಥವಾ ಪಿಎಫ್ ಒಟ್ಟು ಮೊತ್ತದ ಶೇಕಡಾ 75ರಷ್ಟು ಇವೆರಡರಲ್ಲಿ ಯಾವ ಮೊತ್ತವು ಕಡಿಮೆಯೋ ಅಷ್ಟನ್ನು ಮಾತ್ರ ವಿಥ್ ಡ್ರಾ ಮಾಡಬಹುದು. ಆ ಮುಂಗಡವನ್ನು ಹಿಂತಿರುಗಿಸಬೇಕು ಅಂತೇನೂ ಇಲ್ಲ. ಇದಕ್ಕಾಗಿ ಇಪಿಎಫ್ ಯೋಜನೆ 1952ರಲ್ಲಿ ಬದಲಾವಣೆ ಮಾಡಲಾಗಿದೆ.

ಶೇ 75 ರಷ್ಟು ಮೊತ್ತ ಪಡೆದುಕೊಳ್ಳಬಹುದೇ?
ಭವಿಷ್ಯ ನಿಧಿ ಖಾತೆ (ಪಿಎಫ್)ಯಿಂದ ಶೇ. 75 ಹಣವನ್ನು ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಕಾರ್ವಿುಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ನಿರ್ಧರಿಸಿದೆ. ಇಪಿಎಫ್ಒ ಎಲ್ಲ ನೌಕರರ ಪಿಎಫ್ ನಿಧಿಯನ್ನು ನೋಡಿಕೊಳ್ಳುತ್ತದೆ. ಇದ್ರಲ್ಲಿ 60 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಉದ್ಯೋಗಿಗಳು ತಮ್ಮ ಖಾತೆಯಲ್ಲಿನ ಬಾಕಿ ಶೇ. 25 ಹಣವನ್ನು ಎರಡು ತಿಂಗಳ ನಿರುದ್ಯೋಗದ ನಂತರ ಪಡೆಯಬಹುದಾಗಿದೆ ಅಥವಾ ಸಂಪೂರ್ಣ ಹಣವನ್ನು ಪಡೆದು ಖಾತೆ ಮುಚ್ಚಲು ಕೂಡ ಅವಕಾಶ ನೀಡಲು ಇಪಿಎಫ್ಒ ಮುಂದಾಗಿದೆ.

ಭವಿಷ್ಯ ನಿಧಿ ಲೆಕ್ಕಾಚಾರ ಹೇಗೆ?
ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.

ನಿರ್ಮಲಾರಿಂದ ಪ್ರಮುಖ ಘೋಷಣೆ
ಶೇ24ರಷ್ಟು ಹಣ ಸರ್ಕಾರವೇ ಭರಿಸಲಿದೆ. ಉದ್ಯೋಗದಾತ ಹಾಗೂ ಉದ್ಯೋಗಿಗಳ ಕೊಡುಗೆಯನ್ನು ಕೇಂದ್ರ ಸರ್ಕಾರವೇ ಭರಿಸಲಿದ್ದು, ಇದು ಮುಂದಿನ ಮೂರು ತಿಂಗಳ ಅವಧಿಗೆ ನೀಡಲಿದೆ. 100 ಉದ್ಯೋಗಿಗಳನ್ನು ಒಳಗೊಂಡ ಸಂಸ್ಥೆಯಾಗಿರಬೇಕು, ಆ ಸಂಸ್ಥೆಯ ಶೇ 90ರಷ್ಟು ಉದ್ಯೋಗಿಗಳು 15 ಸಾವಿರ ರು ಗೂ ಕಡಿಮೆ ತಿಂಗಳ ಆದಾಯ ಹೊಂದಿರಬೇಕು
ಇದರೊಂದಿಗೆ ಈ ಮೊದಲೇ ಹೇಳಿದಂತೆ, ಇಪಿಎಫ್ಒ ನಿಯಂತ್ರಣ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಶೇ 75 ರಷ್ಟು ಹಣ ಅಥವಾ ಮೂರು ತಿಂಗಳ ಸಂಬಳ ವಿಥ್ ಡ್ರಾ ಮಾಡಲು ಅನುಮತಿ ಸಿಗಲಿದೆ. ಇದರಿಂದ 4 ಕೋಟಿ 80 ಲಕ್ಷ ಚಂದಾದಾರರಿಗೆ ಅನುಕೂಲವಾಗಲಿದೆ.

ಇಪಿಎಫ್ ವಿಥ್ ಡ್ರಾ ವಿಧಾನ
ಅಧಿಕೃತ ವೆಬ್ ತಾಣ (unifiedportal-mem.epfindia.gov.in)ಕ್ಕೆ ಭೇಟಿ ಕೊಡಿ, ಮುಖಪುಟದಲ್ಲಿ ಅಡ್ವಾನ್ಸ್ಡ್ ಕ್ಲೇಮು ಮಾಡಲು ಕ್ಲಿಕ್ ಮಾಡಿ ಎಂಬ ಲಿಂಕ್ ನೋಡಿ.. ಅದರಲ್ಲಿರುವ ನಿಬಂಧನೆಗಳನ್ನು ಪರೀಕ್ಷಿಸಿ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿ ನಿಮ್ಮ ಉದ್ಯೋಗದಾತರಿಗೆ ತಲುಪಿ ಅಪ್ರೂ ಆದ ಕೂಡಲೇ ನಿಮ್ಮ ಕ್ಲೇಮು ಪ್ರಕ್ರಿಯೆಗೆ ಚಾಲನೆ ಸಿಗಲಿದೆ.
1. UAN ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ
2. ಆನ್ ಲೈನ್ ಸರ್ವೀಸಸ್ ವಿಭಾಗಕ್ಕೆ ಭೇಟಿ ನೀಡಿ ಕ್ಲೇಮ್ ಆಯ್ಕೆ ಮಾಡಿಕೊಳ್ಳಿ.
3. ನಿಮ್ಮ ಬ್ಯಾಂಕ್ ಅಕೌಂಟ್ ಸಂಖ್ಯೆ ದೃಢಪಡಿಸಿ.
4. ಚೆಕ್ ಅಥವಾ ಪಾಸ್ ಬುಕ್ ಸ್ಕ್ಯಾನ್ಡ್ ಕಾಪಿ ಸಲ್ಲಿಸಿ
5.ಮುಂಗಡವಾಗಿ ವಿಥ್ ಡ್ರಾ ಮಾಡುತ್ತಿರುವುದೇಕೆ ಎಂಬುದಕ್ಕೆ ಕಾರಣ ನೀಡಿ. ಇಲ್ಲಿ'outbreak of pandemic' ಕಾರಣ ಆಯ್ಕೆ ಮಾಡಿಕೊಳ್ಳಿ
6. ಆಧಾರ್ ಬಳಸಿ ಒಟಿಪಿ ಸೃಷ್ಟಿಸಿಕೊಳ್ಳಿ. ನಿಮ್ಮ ಕ್ಲೇಮು ಉದ್ಯೋಗ ಸಂಸ್ಥೆ ತಲುಪಲಿದ್ದು, ನಿಮ್ಮ ಸಂಸ್ಥೆ ಒಪ್ಪಿಗೆ ಸೂಚಿಸುತ್ತಿದ್ದಂತೆ ನೀವು ಮೊತ್ತ ಪಡೆದುಕೊಳ್ಳಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications