ಡಿ.ಜೆ ಹಳ್ಳಿ ಗಲಭೆ ಹುಬ್ಬಳ್ಳಿಯಲ್ಲೂ ಮರುಕಳಿಸಿತೇ? ಅದೇ ದಾರಿ, ಅದೇ ಮಾದರಿ
ಬೆಂಗಳೂರು, ಮೇ. 18: ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರಿನಲ್ಲಿ ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿಯನ್ನ ಸುಟ್ಟು ಹಾಕಿತ್ತು. ಇದೀಗ ಮಸೀದಿ ಕುರಿತು ಯುವಕನೊಬ್ಬ ಹಾಕಿಕೊಂಡಿದ್ದ ವಾಟ್ಸಪ್ ಸ್ಟೇಟಸ್ ವಿಡಿಯೋ ಹುಬ್ಬಳ್ಳಿ ಗಲಭೆಗೆ ನಾಂದಿ ಹಾಡಿದೆ. ಹುಬ್ಬಳ್ಳಿ -ಧಾರವಾಡದಲ್ಲಿ ವ್ಯಕ್ತಿಯೊಬ್ಬ ಹಾಕಿಕೊಂಡಿದ್ದ ಪೋಸ್ಟ್ ನಿಂದ ರೊಚ್ಚಿಗೆದ್ದ ಮುಸ್ಲಿಂ ಸಮುದಾಯ ಪೊಲೀಸ್ ಠಾಣೆ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡಿದೆ. ಹುಬ್ಬಳ್ಳಿ ಗಲಭೆ ನೋಡಿದರೆ ಕೆ.ಜಿ. ಹಳ್ಳಿ- ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆಗೂ- ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೂ ಸಾಮ್ಯತೆ ಕಾಣುತ್ತಿದೆ!
ಕೆ.ಜಿ ಹಳ್ಳಿ ಗಲಭೆ ಮೂಲ:
ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಅವರ ಅಕ್ಕನ ಮಗ ನವೀನ್ ಎಂಬ ಯುವಕ ಮಹಮದ್ ಪೈಗಂಬರ್ ಬಗ್ಗೆ ಅವಹೇಳನ ಹಾಕಿದ ಕಾರಣಕ್ಕೆ ಒಂದೇ ರಾತ್ರಿಯಲ್ಲಿ ಬೆಂಗಳೂರು ಹೊತ್ತು ಉರಿದಿತ್ತು. ನವೀನ್ ಮೇಲೆ ಹಲ್ಲೆ ಮಾಡುವ ಸಲುವಾಗಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಇಟ್ಟಿದ್ದರು. ಇದಾದ ಬಳಿಕ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳೇ ಹೊತ್ತಿ ಉರಿದಿದ್ದವು. ಸಿಕ್ಕ ಸಿಕ್ಕವರಿಗೆ ಕಲ್ಲು ಬೀಸಿದ್ದರು. ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.

ಈ ಪ್ರಕರಣ ಸಂಬಂಧ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿಯೇ ಇದೊಂದು ಷಡ್ಯಂತ್ರ್ಯ ಎಂಬುದು ಗೊತ್ತಾಗಿತ್ತು. ಆ ಬಳಿಕ ಎನ್ಐಎ ಪ್ರಕರಣವನ್ನು ತನಿಖೆಗೆ ಎತ್ತಿಕೊಂಡಿತ್ತು. ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಅಂತೂ ಗಲಭೆ ಎಬ್ಬಿಸಲು ಮುಸ್ಲಿಂ ಸಮುದಾಯದ ಹುಡುಗರು ಪ್ಲಾನ್ ರೂಪಿಸಿ ಕಲ್ಲುಗಳನ್ನು ಸಂಗ್ರಹಿಸಿದ್ದರು. ಬೆಂಗಳೂರು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

ಹುಬ್ಬಳ್ಳಿಯಲ್ಲೂ ಇದೇ ಮಾದರಿ
ಹುಬ್ಬಳ್ಳಿಯಲ್ಲಿ ಕೂಡ ಇದೇ ಘಟನೆಯನ್ನು ಹೋಲುವ ಗಲಭೆ ನಡೆದಿದೆ. ಮುಸ್ಲಿಂ ಸಮುದಾಯದ ಮಸೀದಿ ಮೇಲೆ ಭಗವಾ ಧ್ವಜ ಹಾರುತ್ತಿರುವ 12 ಸೆಕೆಂಡಿನ ವಾಟ್ಸಪ್ ಸಂದೇಶ ಸ್ಟೇಟಸ್ ಹಾಕಿದ್ದ ಅಭಿಷೇಕ್ ಎಂಬುವನ ಮೇಲೆ ದಾಳಿ ಮಾಡಲು ಯತ್ನಿಸಿದ್ದಾರೆ. ಇದಕ್ಕೆ ಪೂರ್ವ ನಿಯೋಜನೆಯಂತೆ ಎರಡು ಲೋಡು ಕಲ್ಲು ಸಂಗ್ರಹಿಸಿದ್ದಾರೆ. ವಾಟ್ಸಪ್ ಸಂದೇಶದಿಂದ ಗಲಭೆ ಆಗುತ್ತದೆ ಎನ್ನುವ ಸಂದೇಶ ಪಡೆದಿದ್ದ ಪೊಲೀಸರು ಮೊದಲೇ ಎಚ್ಚೆತ್ತುಕೊಂಡು ಅಭಿಷೇಕ್ ಮನೆಗೆ ಭದ್ರತೆ ನೀಡಿದ್ದರು. ಅವಹೇಳನಕಾರಿ ಸುಳ್ಳು ಪೋಸ್ಟ್ ಹಾಕಿದ್ದ ಆತನನ್ನು ವಶಕ್ಕೆ ಪಡೆದಿದ್ದರು.

ಆದರೆ, ಇದನ್ನೇ ನೆಪ ಇಟ್ಟುಕೊಂಡು ನೂರಾರು ಮುಸ್ಲಿಂ ಸಮುದಾಯದ ಯುವಕರು ಕಲ್ಲು ತೂರಿದ್ದಾರೆ. ಶಾಂತಿ ಕಾಪಾಡುವಂತೆ ಪೊಲೀಸರು ಕೊಟ್ಟ ಕರೆಗೆ ಸ್ಪಂದಿಸಿಲ್ಲ. ಬದಲಿಗೆ ಕಲ್ಲುಗಳನ್ನು ಎಸೆದಿದ್ದಾರೆ. ಇದರಿಂದ ಪೊಲೀಸರಿಗೆ ಗಾಯಗಳಾಗಿವೆ. ಹಲವು ವಾಹನ ಕೂಡ ಜಖಂ ಆಗಿವೆ. ಹುಬ್ಬಳ್ಳಿ ಹಳೇ ಪೊಲೀಸ್ ಠಾಣೆ ಮೇಲೆ ಒಂದೇ ಸಮುದಾಯದ ಜನಾಂಗ ದಾಳಿ ಮಾಡಿ ಕಲ್ಲು ತೂರಿದ್ದಾರೆ. ಕಲ್ಲು ತೂರಿ ಹಲ್ಲೆಗೆ ಯತ್ನಿಸಿದ 100 ಕ್ಕೂ ಹೆಚ್ಚು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಕ್ಷಲುಕ ಕಾರಣಕ್ಕೆ ಪೋಸ್ಟ್ ನೆಪ ಇಟ್ಟುಕೊಂಡು ಗಲಭೆ ಎಬ್ಬಿಸಿರುವರು ಇದೀಗ ಜೈಲು ಕಂಬಿ ಎಣಿಸುತ್ತಿದ್ದಾರೆ. ಇದೀಗ ಮತ್ತಷ್ಟು ಆರೋಪಿಗಳ ತಲಾಷೆಗೆ ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ. ಶಾಂತಿ ಕದಡದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.

ಹಿಜಾಬ್, ಜಟ್ಕಾ ಕಟ್ ವಿವಾದ ಸಂದರ್ಭದಲ್ಲಿ ಸಹ ಶಾಂತಿಯುತವಾಗಿದ್ದ ಹುಬ್ಬಳ್ಳಿ ಒಂದು ಪೋಸ್ಟ್ ನಿಂದ ಕೆರಳಿದೆ. ಇದರ ಹಿಂದೆ ಒಂದು ಕೋಮಿನ ಕಲ್ಲಂಗಡಿ ಖಾಲಿ ಮಾಡಿಸಿದ್ದ ವಿಚಾರ ಹುಬ್ಬಳ್ಳಿಯಲ್ಲಿ ದಂಗೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಅಂತೂ ಹುಬ್ಬಳ್ಳಿಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಕೆ.ಜಿ. ಹಳ್ಳೆ ಗಲಾಟೆಗೆ ಹೋಲಿಸಿದ್ರೆ ಹುಬ್ಬಳ್ಳಿ ಗಲಭೆ ಪೊಲೀಸರು ಮೊದಲೇ ಎಚ್ಚೆತ್ತುಕೊಂಡಿರುವುದರಿಂದ ಆಗಬಹುದಾದ ಭಾರಿ ಅನಾಹುತ ತಪ್ಪಿದೆ.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications