ನಕ್ಷತ್ರಗಳು ಹೇಗೆ ಸಾಯುತ್ತವೆ? ವಿಜ್ಞಾನಿಗಳಿಂದ ರಹಸ್ಯ ಬಯಲು
ಸೂರ್ಯನಿಗಿಂತ ಸಾವಿರಾರು ಪಟ್ಟು ದೊಡ್ಡದಾದ ನಕ್ಷತ್ರಗಳು, ಅಂತ್ಯಕಾಲದಲ್ಲಿ ಆಂತರಿಕವಾಗಿ ಎದುರಿಸುವ ಒತ್ತಡದಿಂದಲೇ ಸಾವಿಗೀಡಾಗುತ್ತವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 'ನ್ಯೂಟ್ರಿನೋಸ್' ಎನ್ನುವ ಚಿಕ್ಕದಾದ ಸಬ್ಟಾಮಿಕ್ ಕಣಗಳಿಂದ ನಕ್ಷತ್ರಗಳ ಸಾವು ಸಂಭವಿಸುತ್ತದೆ ಎಂಬ ವಿಚಾರ ತಿಳಿದುಬಂದಿದೆ.
ಅಂತ್ಯಕಾಲದಲ್ಲಿ ನ್ಯೂಟ್ರಿನೋಸ್ ನಕ್ಷತ್ರದ ಶೇಕಡ 99ರಷ್ಟು ಶಾಕ ಹೊರಗೆ ದಬ್ಬುವ ಕಾರಣ ನಕ್ಷತ್ರ ಸ್ಫೋಟವಾಗಿ, ಸೂಪರ್ ನೋವಾ ಸೃಷ್ಟಿಯಾಗುತ್ತದೆ ಎಂದು ಭಾರತದ ವಿಜ್ಞಾನಿಗಳು ಮಹತ್ತರ ಮಾಹಿತಿ ಹೊರಗೆಡವಿದ್ದಾರೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ.
ಬೃಹತ್ ನಕ್ಷತ್ರ ಸ್ಫೋಟವಾದ ನಂತರ ಸೂಪರ್ ನೋವಾ ಉಂಟಾಗುತ್ತದೆ. ಬಿಳಿ ದೈತ್ಯ ನಕ್ಷತ್ರಗಳು ಸಾಮಾನ್ಯವಾಗಿ ಸ್ಫೋಟಗೊಂಡು, ತಮ್ಮ ಅಂತ್ಯಕಾಲ ಸಮೀಪಿಸಿದಾಗ ಸೂಪರ್ ನೋವಾ ಉಂಟಾಗುತ್ತದೆ. ಇದನ್ನು ನಕ್ಷತ್ರ ತ್ಯಾಜ್ಯ ಎಂದು ಕರೆಯುವ ವಿಜ್ಞಾನಿಗಳು, ಭವಿಷ್ಯದಲ್ಲಿ ನಕ್ಷತ್ರ ತ್ಯಾಜ್ಯದಿಂದಲೇ ಮತ್ತಷ್ಟು ಗ್ರಹ, ನಕ್ಷತ್ರಗಳು ಉದಯಿಸುತ್ತವೆ ಎಂಬುದನ್ನು ಪ್ರತಿಪಾದಿಸುತ್ತಾರೆ. ಆದರೆ ಇಷ್ಟು ದಿನ 'ಸೂಪರ್ ನೋವಾ' ಉಂಟಾಗಲು ಕಾರಣವೇನು ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿರಲಿಲ್ಲ.
ಗುವಾಹಟಿಯ 'ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' ಸಂಶೋಧಕರು ಜರ್ಮನಿ ಮೂಲದ 'ಮ್ಯಾಕ್ಸ್ ಪ್ಲ್ಯಾಂಕ್ ಇನ್ಸ್ಟಿಟ್ಯೂಟ್' ಮತ್ತು ಅಮೆರಿಕದ ನಾರ್ತ್ವೆಸ್ಟರ್ನ್ ವಿವಿ ಸಂಶೋಧಕರ ಸಹಾಯದೊಂದಿಗೆ ನಕ್ಷತ್ರಗಳ ಸಾವಿನ ಕುರಿತು ಹೊಸ ಅಂಶಗಳನ್ನು ಪ್ರತಿಪಾದಿಸಿದ್ದಾರೆ. ಈ ಸಂಶೋಧನೆ ಇಷ್ಟುದಿನ ಕಗ್ಗಂಟಾಗಿದ್ದ ನಕ್ಷತ್ರಗಳ ಸಾವಿನ ರಹಸ್ಯವನ್ನ ಹೊರಗೆಡವಿದ್ದು, ಭಾರಿ ಸಂಚಲನ ಸೃಷ್ಟಿಸಿದೆ.

ನಕ್ಷತ್ರ ಸ್ಫೋಟ ನೋಡಲು ಸಾಧ್ಯ..!
ಮಾನವ ಆಧುನಿಕ ಜಗತ್ತಿಗೆ ಕಾಲಿಟ್ಟು, ಭೂಮಿ ಹಾಗೂ ಬ್ರಹ್ಮಾಂಡದ ಮೇಲೆ ಹಿಡಿತ ಸಾಧಿಸುವ ಯತ್ನದಲ್ಲಿ ಮಗ್ನನಾಗಿದ್ದಾನೆ. ಆದರೆ ಆಧುನಿಕ ಕಾಲಘಟ್ಟದಲ್ಲಿ ನಕ್ಷತ್ರಗಳು ಸ್ಫೋಟಗೊಳ್ಳುವ ಪ್ರಕ್ರಿಯೆಯನ್ನ ವಿಜ್ಞಾನಿಗಳು ನೋಡಲು ಸಾಧ್ಯವಾಗಿಲ್ಲ. ಸದ್ಯದ ಮಟ್ಟಿಗೆ ಒಂದೆಡು ನಕ್ಷತ್ರಗಳು ಸ್ಫೋಟಗೊಳ್ಳುವ ಹಂತದಲ್ಲಿವೆ. ಸದ್ಯದಲ್ಲೇ ಅಂತಹದ್ದೊಂದು ಪ್ರಕ್ರಿಯೆಗೆ ಮಾನವರು ಸಾಕ್ಷಿಯಾಗಲಿದ್ದಾರೆ. ಈ ಹೊತ್ತಲ್ಲಿ ವಿಜ್ಞಾನಿಗಳು ನಕ್ಷತ್ರಗಳ ಸಾವಿನ ರಹಸ್ಯ ಕಂಡುಕೊಂಡಿದ್ದಾರೆ. ಅದರಲ್ಲೂ ಭಾರತದ ಹೆಮ್ಮೆಯ 'ಐಐಟಿ' ಸಂಸ್ಥೆಯ ಸಂಶೋಧಕರು ನಕ್ಷತ್ರಗಳ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಹೊರಗೆಡವಿದ್ದಾರೆ.

ಬ್ರಹ್ಮಾಂಡ ಅರಿಯಲು ಸಾಧ್ಯ..!
ನಕ್ಷತ್ರಗಳ ಸಾವು ತಿಳಿದರೆ ಬ್ರಹ್ಮಾಂಡ ಅರಿಯಲು ಸಾಧ್ಯ, ಬ್ರಹ್ಮಾಂಡ ಅರಿತುಕೊಂಡರೆ 'ಬಿಗ್ಬ್ಯಾಂಗ್' ಬಗ್ಗೆ ತಿಳಿಯಲು ಸಾಧ್ಯ. ಹೀಗೆ ಇದೆರಡೂ ಅಂಶಗಳು ಗೊತ್ತಾದರೆ ಭೂಮಿ ಮೇಲಿನ ನೂರಾರು ಪ್ರಾಕೃತಿ ಸಮಸ್ಯೆಗೆ ಹಾಗೂ ಒತ್ತಡಗಳಿಗೆ ಪರಿಹಾರ ಸಿಗಲಿದೆ. ಇದೇ ಕಾರಣಕ್ಕೆ ವಿಜ್ಞಾನಿಗಳು ನಕ್ಷತ್ರಗಳ ಹುಟ್ಟು ಹಾಗೂ ಸಾವಿನ ಸುತ್ತಾ ಸಾಕಷ್ಟು ಅಧ್ಯಯನ ನಡೆಸುತ್ತಿದ್ದಾರೆ. ಇದೇ ರೀತಿ ಅಂತಾರಾಷ್ಟ್ರೀಯ ವಿಜ್ಞಾನಿಗಳ ಜೊತೆಗೆ ಭಾರತದ ವಿಜ್ಞಾನಿಗಳು ಸಂಶೋಧನೆ ನಡೆಸುವಾಗ ಬೃಹತ್ ನಕ್ಷತ್ರಗಳ ಸಾವಿನ ರಹಸ್ಯ ಬಯಲಾಗಿದೆ.

ನಕ್ಷತ್ರದ ಜನನ ಹೇಗೆ..?
ಬ್ರಹ್ಮಾಂಡದ ಉಗಮವಾಗಿ ಸುಮಾರು 1375 ಕೋಟಿ ವರ್ಷವಾಗಿದೆ. 1375 ಕೋಟಿ ವರ್ಷದಲ್ಲಿ ಬಿಲಿಯನ್ ಲೆಕ್ಕದಲ್ಲಿ ಗ್ಯಾಲಕ್ಷಿಗಳು ಜನ್ಮತಾಳಿವೆ. ಪ್ರತಿಯೊಂದು ಗ್ಯಾಲಕ್ಸಿಯಲ್ಲೂ ಮತ್ತೊಂದಿಷ್ಟು ಬಿಲಿಯನ್ ನಕ್ಷತ್ರಗಳು, ಗ್ರಹಗಳು ಕೂಡ ಹರಡಿವೆ. ಈ ಸಮೂಹದಲ್ಲಿ ಸೌರಮಂಡಲವೂ ಒಂದು. ಹೀಗೆ ಬ್ರಹ್ಮಾಂಡದಲ್ಲಿ ನಕ್ಷತ್ರಗಳಿಗೆ ವಿಶೇಷ ಸ್ಥಾನಮಾನವಿದೆ. ನಕ್ಷತ್ರಗಳ ಹುಟ್ಟು ಹಾಗೂ ಬೆಳವಣಿಗೆ ಕೋಟಿ ಕೋಟಿ ವರ್ಷಗಳ ಪ್ರಕ್ರಿಯೆ. ಅದು ದಿಢೀರ್ ಎಂದು ಸಂಭವಿಸುವುದಿಲ್ಲ. ದಟ್ಟ ಧೂಳಿನ ಮೋಡಗಳು ಗುರತ್ವದ ಬಲದಿಂದ ಒಂದುಗೂಡಿ, ನಂತರ ಮೋಡದ ಒಳಗೆ ಗುರತ್ವದ ಬಲದಿಂದ ಶಾಖ ಏರ್ಪಡುತ್ತದೆ.

ಊಹೆಗೆ ನಿಲುಕದಷ್ಟು ಶಾಖ ಬಿಡುಗಡೆ
ಬಿಸಿ ಹೆಚ್ಚಾಗುತ್ತಾ ಸಾಗಿ ಬೈಜಿಕ ಸಮ್ಮಿಲ ಕ್ರಿಯೆ ಆರಂಭವಾಗುತ್ತದೆ. ಇದನ್ನ ಸಾಮಾನ್ಯವಾಗಿ ಹೇಳುವುದಾದರೆ ಭೂಮಿ ವಿನಾಶಕ್ಕೆ ಮನುಷ್ಯ ಕಂಡುಹಿಡಿದ ಅಣುಬಾಂಬ್ ಅಥವಾ ನ್ಯೂಕ್ಲಿಯರ್ ವೆಪನ್ಸ್ ಇದೇ ಮಾದರಿ ಅನುಸರಿಸುತ್ತವೆ. ಆದರೆ ಮಾನವನ ಬಾಂಬ್ ಬೈಜಿಕ ವಿದಳನ ಕ್ರಿಯೆಯಿಂದ ಆಗುತ್ತದೆ. ಆದರೆ ನಕ್ಷತ್ರಗಳಲ್ಲಿ ಬೈಜಿಕ ಸಮ್ಮಿಲನ ಕ್ರಿಯೆ ಮೂಲಕ ಅಪಾರ ಪ್ರಮಾಣದಲ್ಲಿ ಶಾಖ ಹಾಗೂ ಶಕ್ತಿ ಬಿಡುಗಡೆಯಾಗುತ್ತದೆ. ಇದೇ ಪ್ರಕ್ರಿಯೆ ಮುಂದೆ ನಕ್ಷತ್ರ ರೂಪಿಸುತ್ತದೆ. ಈ ಪ್ರಕ್ರಿಯೆಯಲ್ಲಿ ಹೈಡ್ರೋಜನ್ (H1) + ಹೈಡ್ರೋಜನ್ (H1) ಒಂದುಗೂಡಿ ಹೀಲಿಯಂ (H2) ಆಗುತ್ತದೆ. ಮುಂದೆ ಹೀಲಿಯಂ (H2) + ಹೀಲಿಯಂ (H2) ಒಂದುಗೂಡಿ ಬೆರಿಲಿಯಂ (Be4) ಆಗುತ್ತದೆ. ನಕ್ಷತ್ರಗಳ ಬೈಜಿಕ ಸಮ್ಮಿಲನ 1+1ರ ಸೂತ್ರ ಅವಲಂಬಿಸಿರುತ್ತದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications