ಕಾಂಗ್ರೆಸ್ನ ಜಾತಿ ಲೆಕ್ಕಾಚಾರದಲ್ಲಿ ಜಾಟ್ ಸಿಖ್ಖರ ಬೆಂಬಲ ಕಳೆದುಕೊಳ್ಳುವ ಸಾಧ್ಯತೆ
ಪಂಜಾಬ್ನಲ್ಲಿ 2022 ರ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಇದೆ. ಈ ನಡುವೆ ಕಾಂಗ್ರೆಸ್ ಜಾತಿ ಲೆಕ್ಕಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ತನ್ನ ನಾಯಕನಾಗಿ ಪರಿಶಿಷ್ಟ ಜಾತಿಯ ಚರಂಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಿದೆ, ಈ ನಿರ್ಧಾರವು ಗಮನಾರ್ಹ ದಲಿತ ಮತದಾರರ ಬೆಂಬಲವನ್ನು ಗಳಿಸಲು ಪಕ್ಷಕ್ಕೆ ಸಹಾಯ ಮಾಡುವ ಪ್ರಯತ್ನವೆಂದು ಪರಿಗಣಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಜಾಟ್ ಸಿಖ್ ಮತ ಬ್ಯಾಂಕ್ ಅನ್ನು ಕಳೆದುಕೊಳ್ಳಬಹುದು.
ಪಂಜಾಬ್ ಪರಿಶಿಷ್ಟ ಜಾತಿ ಸಮುದಾಯದ ಶೇಕಡ 32ರಷ್ಟು ಜನಸಂಖ್ಯೆಯನ್ನು ಹೊಂದಿದೆ. ಇದು ದೇಶದಲ್ಲೇ ಅತಿ ಹೆಚ್ಚಾಗಿದೆ. ಆದರೆ ಜಾಟ್ ಸಿಖ್ ಜನಸಂಖ್ಯೆಯು ಸುಮಾರು ಶೇಕಡ 20ರಷ್ಟು ಆಗಿದೆ. ಆದರೆ 1977 ರಿಂದ, ರಾಜ್ಯವು ಎಂದಿಗೂ ಜಾಟ್ ಸಿಖ್ ಅಲ್ಲದ ಮುಖ್ಯಮಂತ್ರಿಯನ್ನು ನೋಡಿಲ್ಲ. ಅದು ಕಾಂಗ್ರೆಸ್ ಅಥವಾ ಶಿರೋಮಣಿ ಅಕಾಲಿ ದಳವಾಗಿರಬಹುದು. ಇದು ಜಾಟ್ ಸಿಖ್ ಸಮುದಾಯದ ರಾಜಕೀಯ ಪ್ರಾಬಲ್ಯವನ್ನು ಸೂಚಿಸುತ್ತದೆ. ಗಿಯಾನಿ ಜೈಲ್ ಸಿಂಗ್ 1972-77ರ ನಡುವೆ ಪಂಜಾಬ್ನ ಕೊನೆಯ ಸಿಖ್ ಅಲ್ಲದ ಜಾಟ್ ಮುಖ್ಯಮಂತ್ರಿಯಾಗಿದ್ದರು.
2022 ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ಕಾಂಗ್ರೆಸ್ನ ರಾಜಕೀಯವು ಪ್ರಧಾನವಾಗಿ ಪರಿಶಿಷ್ಟ ಜಾತಿ ಸಮುದಾಯವನ್ನು ಓಲೈಸುವುದರಲ್ಲಿ ತೊಡಗಿತ್ತು. ಆದರೆ ಈ ಸಂಪೂರ್ಣ ಕಸರತ್ತಿನಲ್ಲಿ, ಪಕ್ಷವು ಜಾಟ್ ಸಿಖ್ಗಳ ಮತವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಇದು ಪಕ್ಷದ ಮತ ಬ್ಯಾಂಕಿಗೆ ಧಕ್ಕೆ ಉಂಟು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಬೇರೆಯವರು ಸಿಎಂ ಆದಾಗ ಅಸಮಾಧಾನ ಸಹಜ
ಈ ಮಧ್ಯೆ ಜಾಟ್ ಸಿಖ್ಖರಲ್ಲಿ ಅಸಮಾಧಾನವು ಎದ್ದಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಈ ಸಮುದಾಯದ ಪ್ರಾಬಲ್ಯವು ಕಡಿಮೆ ಆಗಬಹುದು. "ಜಾಟ್ ಸಿಖ್ಖರು ಪಂಜಾಬ್ನಲ್ಲಿ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಹಸಿರು ಕ್ರಾಂತಿಯ ಹಿನ್ನೆಲೆಯಲ್ಲಿ ಅವರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬಲಗೊಂಡಿತು. ಅವರು ಆರ್ಥಿಕವಾಗಿ ಬಲಿಷ್ಠರಾಗಿದ್ದರಿಂದ ಅದು ರಾಜಕೀಯದಲ್ಲೂ ಪ್ರತಿಫಲ ನೀಡಿದೆ. ಈಗ ಬೇರೆಯವರು ಆಡಳಿತದ ಚುಕ್ಕಾಣಿ ಹಿಡಿದರೆ ಸಮುದಾಯದಲ್ಲಿ ಅಸಮಾಧಾನ ಉಂಟಾಗುವುದು ಸಹಜ," ಎಂದು ನಾಯಕರುಗಳು ಹೇಳುತ್ತಾರೆ.
ಇನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (ಜಾಟ್ ಸಿಖ್) ಚನ್ನಿ ನಾಯಕತ್ವವನ್ನು ಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಈ ಸಮರ್ಥನೆಯು ಪಕ್ಷದ ಜಾಟ್ ಸಿಖ್ ನಾಯಕರಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ. ತಮ್ಮ ನಿಷ್ಠಾವಂತರಿಗೆ ಹೆಚ್ಚಿನ ಪಕ್ಷದ ಟಿಕೆಟ್ಗಳನ್ನು ಪಡೆಯಲು ಸಾಧ್ಯವಾದರೆ, ಖಂಡಿತವಾಗಿಯೂ ಜಾಟ್ ಸಿಖ್ ನಾಯಕರಲ್ಲಿ ಆತಂಕವು ಹೆಚ್ಚಾಗುತ್ತದೆ. ಅದು ಹೆಚ್ಚು ಸ್ಪಷ್ಟವಾಗಿರುತ್ತದೆ ಎಂದು ಪಂಜಾಬ್ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ಪ್ರಾಧ್ಯಾಪಕ ಅಶುತೋಷ್ ಕುಮಾರ್ ಹೇಳಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪಕ್ಷವು ಕ್ಯಾಪ್ಟನ್ (ನಿವೃತ್ತ) ಅಮರಿಂದರ್ ಸಿಂಗ್ (ಜಾಟ್ ಸಿಖ್) ರಾಜೀನಾಮೆ ಬಳಿಕ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲಾಯಿತು. ಪಂಜಾಬ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಸರ್ಕಾರವನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವಾಗ, ಪಕ್ಷದ ಇತ್ತೀಚಿನ ನಡೆಗಳು ಪಕ್ಷದಲ್ಲಿ ಅಸಮಾಧಾನ ಸೃಷ್ಟಿ ಮಾಡಿದೆ. (ಒನ್ಇಂಡಿಯಾ ಸುದ್ದಿ)
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications