ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ಶಿವಪುರ ಧ್ವಜ ಸತ್ಯಾಗ್ರಹ
ಸ್ವಾತಂತ್ರ್ಯ ದಿನಾಚರಣೆ ಹತ್ತಿರವಾಗುತ್ತಿದೆ. ಕರ್ನಾಟಕದಲ್ಲಿನ ಸ್ವಾತಂತ್ರ್ಯ ಹೋರಾಟಗಳ ಬಗ್ಗೆ ಮಾನಾಡುವಾಗ ಶಿವಪುರ ಧ್ವಜ ಸತ್ಯಾಗ್ರಹವನ್ನು ನೆನಪು ಮಾಡಿಕೊಳ್ಳಬೇಕು. ಈ ಚಳವಳಿ ರಾಜ್ಯದ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚುವಲ್ಲಿ ಯಶಸ್ವಿಯಾಗಿತ್ತು.
ಮಂಡ್ಯ ಜಿಲ್ಲೆಯ ಮದ್ದೂರು ಸಮೀಪ ಶಿಂಷಾ ನದಿ ತೀರದಲ್ಲಿ ಶಿವಪುರ. 1938ರ ಏಪ್ರಿಲ್ 10ರಿಂದ ಮೂರು ದಿನ ನಡೆದ ಶಿವಪುರ ಧ್ವಜ ಸತ್ಯಾಗ್ರಹ ರಾಜ್ಯದ ಹಲವು ಭಾಗಗಳಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿಯಾಯಿತು.
ಮೈಸೂರು ಸಂಸ್ಥಾನದ ಜನರಲ್ಲಿಯೂ ಸ್ವಾತಂತ್ರ್ಯದ ಕಲ್ಪನೆ ಉಂಟಾಗಿ ಸರ್ಕಾರದ ವಿರುದ್ಧ ಆಂದೋಲನ ಆರಂಭವಾಯಿತು. ಬೆಂಗಳೂರು, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ಚಳವಳಿಯಲ್ಲಿ ತೊಡಗಿದ್ದ ನಾಯಕರನ್ನು ಸರ್ಕಾರ ಬಂಧಿಸಿತು.

ವಿವಿಧ ನಾಯಕರ ಬಂಧನಕ್ಕೆ ಅಂಜದ ಜನರು 1938 ಜನವರಿ 26ರಂದು ಸ್ವರಾಜ್ಯ ದಿನಾಚರಣೆಯನ್ನು ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸ್ವರಾಜ್ಯ ದಿನಾಚರಣೆ ವೇಳೆ ಜನರ ಮೇಲೆ ಲಾಠಿ ಪ್ರಹಾರ ನಡೆಸಲಾಯಿತು.
ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದಿತು. ಅನೇಕ ಮುಖಂಡರು ತ್ರಿವರ್ಣ ಧ್ವಜ ಹಾರಿಸಿದರು. ಆಗ ಅವರನ್ನು ಬಂಧಿಸಲಾಯಿತು. ಇದರಿಂದ ರೊಚ್ಚಿಗೆದ್ದ ನಾಯಕರು ಮೈಸೂರಿನ ಹೊರಗೆ ಧ್ವಜ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದರು.
ಶಿವಪುರದಲ್ಲಿ ಧ್ವಜ ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ತಿರುಮಲಗೌಡ ಅವರ ಜಮೀನಿನಲ್ಲಿ ಧ್ವಜಸ್ತಂಭ ನಿಲ್ಲಿಸಲಾಯಿತು. ಆದರೆ, ಮೈಸೂರು ಮ್ಯಾಜಿಸ್ಟ್ರೇಟರು ಮದ್ದೂರು ಸುತ್ತಮತ್ತ ಒಂದು ತಿಂಗಳ ಕಾಲ ಸಭೆ, ಮೆರವಣಿಗೆ, ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದರು.
ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿ 1938 ಏಪ್ರಿಲ್ 9ರಂದು ಟಿ.ಸಿದ್ದಲಿಂಗಯ್ಯ ಅವರ ಆಧ್ಯಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಹಲವರನ್ನು ಬಂಧಿಸಲಾಯಿತು. ಮೂರು ದಿನಗಳ ಧ್ವಜ ಸತ್ಯಾಗ್ರಹ ನಾಡಿನಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications