ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶ ಸ್ವಾತಂತ್ರ್ಯ ಪಡೆದದ್ದು ಆಗಸ್ಟ್ 15ಕ್ಕೆ, ಆದರೆ ಮೈಸೂರಿನ ಲೆಕ್ಕ ಬೇರೆ!

By Yashaswini
|
Google Oneindia Kannada News

Recommended Video

ಮೈಸೂರಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಯಾವಾಗ ಗೊತ್ತಾ..? | Oneindia Kannada

ಇಡೀ ದೇಶಕ್ಕೆ ಸ್ವಾತಂತ್ರ್ಯದ ದಿನ ಆಗಸ್ಟ್ 15, 1947 ಎಂದರೆ ಮೈಸೂರಿಗರಿಗೆ ಅಲ್ಲ. ಹೌದು, ಇದು ಅಚ್ಚರಿಯೇ ಸರಿ. ಇಡೀ ದೇಶ 1947ರ ಆಗಸ್ಟ್ 15ರಂದು ಬೆಳಗ್ಗೆ ರಾಷ್ಟ್ರ ಧ್ವಜಾರೋಹಣ ಮಾಡುತ್ತಾ, ಸಿಹಿ ಹಂಚಿ ಸಂಭ್ರಮಿಸಿದರೆ, ಮೈಸೂರು ರಾಜ್ಯದಲ್ಲಿ ನಿರಾಶೆ, ಆತಂಕದ ಕಾರ್ಮೋಡ ತುಂಬಿತ್ತು. ಅಂದು ನಮ್ಮ ರಾಜ್ಯಕ್ಕೆ ಸ್ವಾತಂತ್ರ್ಯದ ಸಂಭ್ರಮ ಇರಲೇ ಇಲ್ಲ.

ಪ್ರಜೆಗಳ ಕೈಗೆ ಅಧಿಕಾರ ಕೊಡಲು ಹಾಗೂ ಭಾರತ ಒಕ್ಕೂಟಕ್ಕೆ ಸೇರಲು ಒಪ್ಪದ ಪ್ರಮುಖರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಒಬ್ಬರು. ಮಹಾರಾಜರ ನಿಲುವಿಗೆ ಬೆಂಬಲಕ್ಕೆ ನಿಂತವರು ದಿವಾನರಾಗಿದ್ದ ಸರ್ ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್.

ಸ್ವಾತಂತ್ರ್ಯ ಭಾರತದ ಆಶಯ ಈಡೇರುವುದು ಯಾವಾಗ?ಸ್ವಾತಂತ್ರ್ಯ ಭಾರತದ ಆಶಯ ಈಡೇರುವುದು ಯಾವಾಗ?

1947ರ ಆಗಸ್ಟ್ 15ರ ಮಧ್ಯರಾತ್ರಿ ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಕೆಲವು ದೇಶೀಯ ಸಂಸ್ಥಾನಗಳು ಸ್ವತಂತ್ರ ಭಾರತ ಒಕ್ಕೂಟಕ್ಕೆ ಸೇರಲು ಒಪ್ಪಲಿಲ್ಲ. ಅದಕ್ಕಾಗಿ ಜನ ಉಗ್ರ ಹೋರಾಟವನ್ನೇ ನಡೆಸಿದ್ದರಿಂದ ಹಲವಾರು ಹೋರಾಟಗಾರರ ಬಲಿದಾನವೂ ಆಯಿತು.

India got independence on August 15th, but Mysuru story was different why?

ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ವೀರರ ಬಿಸಿರಕ್ತಕ್ಕೆ ಅರ್ಥ ಬರಬೇಕಾದರೆ, ಮಹಾತ್ಮ ಗಾಂಧೀಜಿ ಶಾಂತಿಯುತ ಸತ್ಯಾಗ್ರಹಕ್ಕೆ ಬೆಲೆ ಬರಬೇಕಾದರೆ ಮೈಸೂರು ರಾಜ್ಯ ಸ್ವತಂತ್ರ ಭಾರತದ ಭಾಗವಾಗಲೇ ಬೇಕು ಎಂದು ಹೋರಾಟಗಾರರು ಬಯಸಿದರು. ಆಗ ಹುಟ್ಟಿಕೊಂಡಿದ್ದೇ 'ಮೈಸೂರು ಚಲೋ' ಹೋರಾಟ.

ಮೈಸೂರು ಆಜಾದ್ ಕಾಂಗ್ರೆಸ್ ಅನ್ನು ರಚಿಸಿಕೊಂಡ ಕೆ.ಸಿ.ರೆಡ್ಡಿ, ಕೆಂಗಲ್ ಹನುಮಂತಯ್ಯ, ಎಚ್.ಸಿ. ದಾಸಪ್ಪ, ಟಿ. ಮರಿಯಪ್ಪ, ತಾಳೆಕೆರೆ ಸುಬ್ರಹ್ಮಣ್ಯ ಮುಂತಾದ ನಾಯಕರು 1947ರ ಆಗಸ್ಟ್ 21 ರಂದು ಮೈಸೂರು ಚಳವಳಿಗೆ ಕರೆ ನೀಡಿದರು. ನಾಯಕರ ಕರೆ ಹೊರಬಿದ್ದ ಕೂಡಲೇ ಇಡೀ ಸಂಸ್ಥಾನದಲ್ಲಿ ಮೈಸೂರು ಚಲೋ ಚಳವಳಿ ದಿನದಿನಕ್ಕೆ ಉಗ್ರರೂಪ ತಾಳುತ್ತಾ ಹೋಯಿತು.

ವೀರಪುತ್ರರ ನಾಡು ಈಸೂರಿನ ಇತಿಹಾಸ ನಿಮಗೆಷ್ಟು ಗೊತ್ತು?ವೀರಪುತ್ರರ ನಾಡು ಈಸೂರಿನ ಇತಿಹಾಸ ನಿಮಗೆಷ್ಟು ಗೊತ್ತು?

ಈ ಮಧ್ಯೆ ಕೆಲವು ದೇಸಿ ಸಂಸ್ಥಾನಗಳ ರಾಜರು, ತಿರುವನಂತಪುರದ ದಿವಾನರಾಗಿದ್ದ ಸರ್ ಸಿ.ಪಿ. ರಾಮಸ್ವಾಮಿ ಅಯ್ಯರ್ ಅವರ ನೆರವಿನಿಂದ ಸ್ವತಂತ್ರವಾಗಿಯೇ ಉಳಿಯಲು ಹೋರಾಟಕ್ಕೆ ಅಣಿಯಾದರು. ಮೈಸೂರು ದಿವಾನರಾಗಿದ್ದ ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಸಹ ಅವರೊಂದಿಗೆ ಇದ್ದು, ಚಳವಳಿಯನ್ನು ಹತ್ತಿಕ್ಕಲು ಉಗ್ರ ಕ್ರಮವನ್ನು ತೆಗೆದುಕೊಂಡರು.

ಮುಖಂಡರ ಬಂಧನ, ಎಲ್ಲ ಕಡೆ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ ಸಾಮಾನ್ಯವಾಯಿತು. ಕೆಲವು ಕಡೆ ಗೋಲಿಬಾರ್ ಸಹ ನಡೆಯಿತು. ಮೈಸೂರಿನಲ್ಲಿ ವಿದ್ಯಾರ್ಥಿ ರಾಮಸ್ವಾಮಿ ಪೊಲೀಸರ ಗುಂಡೇಟಿಗೆ ಬಲಿಯಾದರೆ, ತುಮಕೂರಿನಲ್ಲಿ ಸ್ವಾತಂತ್ರ್ಯ ಯೋಧ, ಹೆಸರಾಂತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪುತ್ರ ಗುಂಡಿಗೆ ತುತ್ತಾದರು.

ಮೈಸೂರಿನ ಒಂದು ವೃತ್ತಕ್ಕೆ ರಾಮಸ್ವಾಮಿ ಹೆಸರನ್ನು ಇಡಲಾಗಿದೆ. ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಮೈಸೂರು ಚಳವಳಿಗೆ ಧುಮುಕಿದರು. ಹಲವರ ಬಂಧನವೂ ಆಯಿತು. ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ವಿದ್ಯಾರ್ಥಿಗಳು ಮುನ್ನುಗ್ಗಿ ಬಂಧನಕ್ಕೆ ಒಳಗಾಗುತ್ತಿದ್ದರು.

ಮೈಸೂರು ಸಂಸ್ಥಾನದ ಎಲ್ಲ ಜೈಲುಗಳೂ ತುಂಬಿ, ಜೈಲಿನಲ್ಲಿ ಜಾಗವಿಲ್ಲದ ಕಾರಣ ಬಂಧಿತರನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಂಡು, ಮಧ್ಯರಾತ್ರಿ ಬಿಡುಗಡೆ ಮಾಡುತ್ತಿದ್ದರು. ಮುಂದೆ ಹೋರಾಟ ಪ್ರಬಲಗೊಂಡು ಮಹಾರಾಜರು ಬೇರೆ ದಾರಿಯಿಲ್ಲದೆ ಭಾರತ ಗಣರಾಜ್ಯದಲ್ಲಿ ಮೈಸೂರು ರಾಜ್ಯವನ್ನು ಸೇರಿಸಲು ಒಪ್ಪಿಕೊಂಡರು. ಹಾಗಾಗಿ 1947ರ ಅಕ್ಟೋಬರ್ 24ರಂದು ಮೈಸೂರು ರಾಜ್ಯಕ್ಕೆ ಸ್ವಾತಂತ್ರ್ಯ ಬಂತು.

English summary
Mysuru province primarily not agreed to join to Indian federal system. Later huge protest staged by people and on October 24th, 1947 finally Mysuru royal family joined India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X