ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ವಿಮಾ ಸೌಲಭ್ಯ, ವಿವರಗಳು
ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಈ ಕಾರ್ಮಿಕರಿಗಾಗಿಯೇ ಸರ್ಕಾರಿ ವಿಮೆ ಯೋಜನೆ ಜಾರಿಗೆ ತಂದಿದೆ.
ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಇ-ಶ್ರಮ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಬೇಕು. ಈ ಯೋಜನೆಗೆ 'ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ' ಎಂದು ಹೆಸರಿಡಲಾಗಿದೆ.
ಈ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಈ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸಲು ಕಾರ್ಮಿಕ ಇಲಾಖೆ ಯೋಜನೆಯನ್ನು ಜಾರಿಗೊಳಿಸಿದೆ.

ವಿಮೆ ಸೌಲಭ್ಯದ ಮಾಹಿತಿ: ವ್ಯಕ್ತಿ ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ) ದೊರೆಯಲಿದೆ.
ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ. 1 ಲಕ್ಷಗಳವರೆಗೆ ದೊರೆಯುತ್ತದೆ. ಈ ಯೋಜನೆಯ ಸೌಲಭ್ಯ ಪಡೆಯಲು ವಯೋಮಿತಿ 16 ರಿಂದ 59 ವರ್ಷಗಳು.
ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೂ ಭವಿಷ್ಯನಿಧಿ ಮತ್ತು ಇಎಸ್ಐ ಫಲಾನುಭವಿಯಾಗಿರಬಾರದು. ಅಲ್ಲದೇ, ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ನಲ್ಲಿ 'ನ್ಯೂಸ್ ಪೇಪರ್ ಬಾಯ್' ಎಂಬ ವರ್ಗದಡಿ ನೋಂದಣಿಯಾಗಿರಬೇಕು.
ಕ್ಲೇಮ್ ವಿಧಾನದ ಮಾಹಿತಿ; ಅರ್ಜಿದಾರ/ ಫಲಾನುಭವಿಯು ಅಪಘಾತ ಸಂಭವಿಸಿದ 1 ವರ್ಷದೊಳಗೆ ಹಾಗೂ ವೈದ್ಯಕೀಯ ಸೌಲಭ್ಯ ಪ್ರಕರಣಗಳಲ್ಲಿ ಆಸ್ಪತ್ರೆಗೆ ದಾಖಲಾದ 1 ವರ್ಷದೊಳಗೆ ನಿಗದಿತ ನಮೂನೆಯಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
* ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿತ ಗುರುತಿನ ಚೀಟಿ
* ನಿಗದಿತ ನಮೂನೆಯಲ್ಲಿ ಉದ್ಯೋಗ ಪ್ರಮಾಣ ಪತ್ರ
* ಪಥಮ ವರ್ತಮಾನ ವರದಿ ಪ್ರತಿ
* ಮರಣ ಪ್ರಮಾಣ ಪತ್ರ, ಮರಣ ಪ್ರಕರಣಗಳಲ್ಲಿ
* ಮರಣೋತ್ತರ ಪರೀಕ್ಷಾ ವರದಿ,
* ಆಸ್ಪತ್ರೆಯ ಮೂಲ ಬಿಲ್ಗಳು, ಆಸ್ಪತ್ರೆ ವೆಚ್ಚ ಮರುಪಾವತಿ ಪ್ರಕರಣಗಳಲ್ಲಿ
* ಮೂಲ ಡಿಸ್ಮಾರ್ಜ್ ಸಾರಾಂಶ
* ಸರ್ಕಾರಿ ವೈದ್ಯಕೀಯ ದುರ್ಬಲತೆ ಪ್ರಮಾಣ ಪತ್ರ (ದುರ್ಬಲತೆ ಪ್ರಕರಣಗಳಲ್ಲಿ)
* ಕಂದಾಯ ಇಲಾಖೆಯ ವಂಶ ವೃಕ್ಷ ಪ್ರಮಾಣ ಪತ್ರ (ಮರಣ ಪ್ರಕರಣಗಳಲ್ಲಿ ಮಾತ್ರ)
* ಪಡಿತರ ಚೀಟಿ (ಲಭ್ಯವಿದ್ದಲ್ಲಿ),
* ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ
* ನಾಮನಿರ್ದೇಶಿತರ/ ಫಲಾನುಭವಿಯ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತ್ರಿ
* ಅವಶ್ಯಕವಿರುವ ಇತರೆ ದಾಖಲೆಗಳನ್ನು ಸಲ್ಲಿಸಬೇಕು
ಒಂದು ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಅಪಘಾತದ ವೇಳೆ ಮಾದಕ ದ್ರವ್ಯ, ಮದ್ಯ ಸೇವಿಸಿದ್ದಲ್ಲಿ. ಫಲಾನುಭವಿಯ ಬುದ್ಧಿ ಭ್ರಮಣೆಯ ಕಾರಣ ಅಪಘಾತ ಸಂಭವಿಸಿದಲ್ಲಿ, ಫಲಾನುಭವಿ ಅಪರಾಧದ ಉದ್ದೇಶದಿಂದ ಮಾಡಿದ ಯಾವುದಾದರೂ ಕಾನೂನು ಉಲ್ಲಂಘನೆಯ ಕಾರಣ ಅಪಘಾತ ಸಂಭವಿಸಿದಲ್ಲಿ ಕ್ಲೇಮು ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08272-201534. ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications