ಟ್ರಕ್ನೊಳಗಿದ್ದ ವ್ಯಕ್ತಿಯ ಮೇಲೆ ಮಣ್ಣು ಸುರಿದ ಜೆಸಿಬಿ: ವಿಡಿಯೋ ವೈರಲ್
ಕೆಲವು ಬೃಹತ್ ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುವಂತಹ ಸ್ಥಳಗಳಲ್ಲಿ ಬೆಚ್ಚಿಬೀಳಿಸುವಂತಹ ಘಟನೆಗಳು ನಡೆಯುತ್ತವೆ. ಅದಕ್ಕೆ ಈ ವೈರಲ್ ವಿಡಿಯೋವೊಂದು ಸಾಕ್ಷಿಯಾಗಿದೆ. ಟ್ರಕ್ನೊಳಗೆ ಮನುಷ್ಯನಿದ್ದಾನೆ ಎಂದು ತಿಳಿಯದೆ ಜೆಸಿಬಿ ಯಂತ್ರದಿಂದ ಆ ವ್ಯಕ್ತಿಯ ಮೇಲೆ ಮಣ್ಣು ಸುರಿಯಲಾಗಿದೆ. ಈ ಘಟನೆಯ ವೀಡಿಯೋ ಸಾಮಾಝಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತನ್ನ ಮೇಲೆ ಮಣ್ಣು ಬೀಳುತ್ತಿದ್ದಂತೆ ಟ್ರಕ್ನೊಳಗಿದ್ದ ವ್ಯಕ್ತಿ ಎದ್ದು ನಿಂತು ಕೂಗಿಕೊಂಡಿದ್ದಾನೆ.
ಸಾಮಾನ್ಯವಾಗಿ ನಿರ್ಮಾಣ ಕಾರ್ಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ಬಹಳಷ್ಟು ಕಾರ್ಮಿಕರು ಮತ್ತು ಯಂತ್ರಗಳನ್ನು ನಿಯೋಜಿಸಲಾಗುತ್ತದೆ. ಕಡಿಮೆ ಕಾರ್ಮಿಕರ ಕಾರ್ಯ ವೇಳೆ ಯಂತ್ರಗಳು ಹಾಗೂ ಯಂತ್ರಗಳು ಕಾರ್ಯ ನಿರ್ವಹಿಸದ ವೇಳೆ ಹೆಚ್ಚು ಕಾರ್ಮಿಕರು ಕಟ್ಟಡ ಇನ್ನಿತರ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯ. ಆದರಿಲ್ಲಿ ಯಂತ್ರ ವ್ಯಕ್ತಿ ಇಬ್ಬರು ಒಟ್ಟಿಗೆ ಕೆಲಸ ಮಾಡುವ ಮೂಲಕ ಚಾಲಕನ ಅಜಾಗರೂಕತೆಯಿಂದಾಗಿ ಒಂದು ದುರಂತ ಸಂಭವಿಸಿದೆ.

ಅದೃಷ್ಟವಶಾತ್ ವ್ಯಕ್ತಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ. ಈ ವೈರಲ್ ವಿಡಿಯೊವು ಜೆಸಿಬಿ ಯಂತ್ರ ಇರುವ ಸ್ಥಳದಲ್ಲಿ ಸಂಭವಿಸಿದ ಘಟನೆಯಾಗಿದ್ದು, ಸ್ಥಳೀಯರು ಇದನ್ನು ಸೆರೆ ಹಿಡಿದಿದ್ದಾರೆ.
Cuando estas evacuando y salen con esto pic.twitter.com/ZW4kTHMgga
— El Chiki (@Elchiki_hn) January 14, 2023
ವೈರಲ್ ವಿಡಿಯೋದಲ್ಲಿ ಟ್ರಕ್ಕೊಂದರಲ್ಲಿ ಜೆಸಿಬಿಯಿಂದ ಮಣ್ಣು ಹಾಕುವುದನ್ನು ಕಾಣಬಹುದು. ಮಣ್ಣು ಸಂಪೂರ್ಣವಾಗಿ ಸುರಿಯುತ್ತಿದ್ದಂತೆ ಇದ್ದಕ್ಕಿದ್ದಂತೆ ವ್ಯಕ್ತಿಯೊಬ್ಬ ಎದ್ದು ನಿಲ್ಲುತ್ತಾನೆ. ಬಿಳಿ ಬಟ್ಟೆ ಹಾಕಿಕೊಂಡಿದ್ದ ವ್ಯಕ್ತಿಯ ದೇಹವೆಲ್ಲ ಮಣ್ಣು ಮೆತ್ತುಕೊಂಡಿರುತ್ತದೆ. ಪ್ಯಾಂಟ್ ಕೆಳಗೆ ಜರಿದಿರುತ್ತದೆ. ಈ ವೇಳೆ ಗಾಬರಿಗೊಂಡ ಆತ ಯಂತ್ರದ ಚಾಲಕನನ್ನು ಕೂಗುತ್ತಾನೆ. ಈ ವಿಡಿಯೋವನ್ನು EI Chiki ಎಂಬಾ ಪುಟದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಎಲ್ಲಿಯದ್ದು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ವಿಡಿಯೋ 1.8k ಜನರು ವೀಕ್ಷಿಸಿದ್ದಾರೆ. ಸಾಕಷ್ಟು ಕಾಮೆಂಟ್ ಮಾಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications