Get Updates
Get notified of breaking news, exclusive insights, and must-see stories!

ಜುಲೈ 1 ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆ: ಇತಿಹಾಸ ತಿಳಿಯಿರಿ

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1ರಂದು 'ಪತ್ರಿಕಾ ದಿನ'ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ 'ಪತ್ರಿಕಾ ದಿನಾಚರಣೆ' ಆಚರಿಸಲಾಗುತ್ತದೆ.

ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843ರ ಜುಲೈ 1ರಂದ ಮಂಗಳೂರಿನಲ್ಲಿ ಬಾಸೆಲ್ ಮಿಷನ್‍ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್‍ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.

July 1 Patrika Dina In Karnataka History And Significance

ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.

ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾಷೆಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.

ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು.

ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.

ಮೋಗ್ಲಿಂಗ್‌ಗೆ ಡಾಕ್ಟರೇಟ್: ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್‍ನ ಎಬರ್‍ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858ರಲ್ಲಿ ಮೋಗ್ಲಿಂಗ್‍ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಆಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್‍ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷೆ ಪ್ರಾದೇಶಿಕ ಚಾನೆಲ್‍ಗಳು, ಆನ್‍ಲೈನ್ ಆವೃತ್ತಿಗಳು, ವೆಬ್‍ಸೈಟ್‍ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್‍ಬುಕ್, ವಾಟ್ಸಪ್ ಮಾಹಿತಿ, ಇಂಟರ್‌ನೆಟ್ ವಿನಿಮಯ ಗ್ರೂಪ್‍ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ.

ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಿಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸೇರಿದಂತೆ ಪಿಜಿ ಡಿಪ್ಲೊಮಾ ಕೋರ್ಸ್‌ ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ 4ನೇ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ.

ಬರಹ ಕೃಪೆ: ರಘು ಆರ್., ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+