ರಾಜ್ಯೋತ್ಸವ ಪ್ರಶಸ್ತಿ; ಪ್ರೊ. ನ ವೆಂಕೋಬರಾವ್ ಪರಿಚಯ
ಹಾಸನ, ಅಕ್ಟೋಬರ್ 28: 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಹಾಸನ ಜಿಲ್ಲೆಯ ಪ್ರೊ. ನ. ವೆಂಕೋಬರಾವ್ ಅವರಿಗೆ ಸಂಕೀರ್ಣ ವಿಭಾಗದಲ್ಲಿ ಈ ಬಾರಿ ಪ್ರಶಸ್ತಿ ಸಿಕ್ಕಿದೆ.
ಪ್ರೊ. ನ ವೆಂಕೋಬರಾವ್ ಅವರು ನಿವೃತ್ತ ಇತಿಹಾಸ ಪ್ರಾಧ್ಯಾಪಕರು. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾಂತರಾಜಪುರದಲ್ಲಿ ಜನಿಸಿದವರು. ತಂದೆ ವಿಜ್ಞಾನಿ ನಂಜಪ್ಪ ತಾಯಿ ಸುಂದರಮ್ಮ.
ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಾಂತರಾಜಪುರದಲ್ಲಿ ನಡೆಸಿದ ಅವರು ನಂತರ ಚನ್ನರಾಯಪಟ್ಟಣ ಚಿಂತಾಮಣಿ ದೊಡ್ಡಬಳ್ಳಾಪುರ ಹಾಗೂ ಮೈಸೂರಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಗುರೂಜಿ ಗೋಳವಲ್ಕರ್, ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿ, ಶೇಷಾದ್ರಿ ಜಗನ್ನಾಥರಾವ್ ಜೋಶಿ, ಯಾದವರಾವ್ ಜೋಶಿ ಮುಂತಾದ ಗಣ್ಯರ ಜೊತೆ ಒಡನಾಟ ಹೊಂದಿದ್ದು, ದೇಶ ಸೇವೆಯನ್ನು ಮಾಡಿದ್ದಾರೆ. ಶ್ರೀಕಾಂತ ಕಾವ್ಯನಾಮದಲ್ಲಿ ಇವರು ಬರೆದ ಹಲವಾರು ಕಥೆಗಳು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಇವುಗಳಲ್ಲಿ 'ಭೂಮಿ ಕಂಪಿಸಲಿಲ್ಲ' ಎಂಬ ಕಥಾ ಸಂಕಲನವೂ ಒಂದು.
ಪ್ರೊ. ನ ವೆಂಕೋಬರಾವ್ ಲಯನ್ಸ್ ಸಂಸ್ಥೆಯಲ್ಲಿ ಹಲವಾರು ವಿಭಿನ್ನ ಸೇವಾ ಚಟುವಟಿಕೆಗಳನ್ನು ಮಾಡುವ ಮೂಲಕ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸೇವೆಯನ್ನು ಪರಿಗಣಿಸಿ ಲಯನ್ಸ್ ಸಂಸ್ಥೆ ಇವರಿಗೆ ಆಜೀವಷ ಗೌರವ ಸದಸ್ಯತ್ವ ನೀಡಿ ಗೌರವಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಥಮ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಕಟ್ಟುವಲ್ಲಿ ಪ್ರೊ. ನ. ವೆಂಕೋಬರಾವ್ ಯೋಗದಾನವಿದೆ. ಆರ್ಎಸ್ಎಸ್ ಪ್ರಕಟಿಸುವ ವಿಕ್ರಮ ಪತ್ರಿಕೆಯ ಉಪಸಂಪಾದಕರಾಗಿಯೂ ಕೆಲಸ ಮಾಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications