Get Updates
Get notified of breaking news, exclusive insights, and must-see stories!

ಕಾರ್ಗಿಲ್ ವಿಜಯ್ ದಿವಸ್ 2022: ಈ ದಿನದ ಇತಿಹಾಸ, ಮಹತ್ವ ಮತ್ತು ವಿಶೇಷತೆ ತಿಳಿಯಿರಿ

ಭಾರತೀಯರ ಪಾಲಿಗೆ ಜುಲೈ 26 ಎನ್ನುವುದು ಕೇವಲ ಒಂದು ದಿನವಲ್ಲ. ದೇಶದ ಗಡಿ ನುಗ್ಗಲು ಯತ್ನಿಸಿದ ಪರಕೀಯರಿಗೆ ಪಾಠ ಕಲಿಸಿದ ದಿನ. ರಾಷ್ಟ್ರಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ಗೌರವಿಸುವ ವಿಶೇಷ ಹಬ್ಬವಿದೆ. ಇಂಥದೊಂದು ಹಬ್ಬಕ್ಕೆ ನಾವು ಇಟ್ಟುಕೊಂಡಿರುವ ಹೆಸರೇ ಕಾರ್ಗಿಲ್ ವಿಜಯ್ ದಿವಸ್.

ಅದು 1999ರ ಜುಲೈ 26ರ ದಿನ. ಪಾಕಿಸ್ತಾನದ ವಿರುದ್ಧ ಭಾರತವು ದಿಗ್ವಿಜಯದ ಧ್ವಜವನ್ನು ಎತ್ತಿ ಹಿಡಿದ ದಿನ. ಹೀಗಾಗಿ ಈ ದಿನವನ್ನು ಪ್ರತಿವರ್ಷ ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್‌ನಲ್ಲಿ 60 ದಿನಗಳ ಕಾಲ ನಡೆದ ಸಂಘರ್ಷದಲ್ಲಿ ಪಾಕಿಸ್ತಾನದ ಸೇನೆಯನ್ನು ಭಾರತೀಯ ಯೋಧರು ಹಿಮ್ಮೆಟ್ಟಿಸಿದರು.

ಆಪರೇಷನ್ ವಿಜಯ್ ಭಾಗವಾಗಿ ಟೈಗರ್ ಹಿಲ್ ಮತ್ತು ಇತರೆ ಪೋಸ್ಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದಲೇ ಈ ದಿನವನ್ನು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಕುರಿತಾದ ಇತಿಹಾಸ, ಮಹತ್ವ ಮತ್ತು ವಿಶೇಷತೆಯನ್ನು ತಿಳಿದುಕೊಳ್ಳೋಣ.

ಕಾರ್ಗಿಲ್ ವಿಜಯ್ ದಿವಸ್ ಇತಿಹಾಸ ತಿಳಿಯಿರಿ

ಕಾರ್ಗಿಲ್ ವಿಜಯ್ ದಿವಸ್ ಇತಿಹಾಸ ತಿಳಿಯಿರಿ

1971ರ ಇಂಡೋ-ಪಾಕ್ ಯುದ್ಧದ ನಂತರದಲ್ಲಿ ಹಲವಾರು ಸಶಸ್ತ್ರ ಒಪ್ಪಂದಗಳನ್ನು ಮಾಡಿಕೊಳ್ಳಲಾಯಿತು. ಇದರ ಮಧ್ಯೆ 1998ರಲ್ಲಿ ಉಭಯ ರಾಷ್ಟ್ರಗಳು ಪರಮಾಣು ಪರೀಕ್ಷೆ ನಡೆಸಿದವು. ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಇತ್ಯರ್ಥಗೊಳಿಸಿಕೊಳ್ಳುವ ಸಂಬಂಧ 1999ರಲ್ಲಿ ಲಾಹೋರ್ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಅಂಕಿತ ಹಾಕಿದವು. ಇದರ ಮಧ್ಯೆ 'ಆಪರೇಷನ್ ಬದ್ರ' ಹೆಸರಿನಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತದ ಭೂಪ್ರದೇಶದ ಒಳನುಸುಳುವಿಕೆಯನ್ನು ಶುರು ಮಾಡಿತು. ಇದು ಕಾಶ್ಮೀರ ಮತ್ತು ಲಡಾಖ್ ನಡುವಿನ ಸಂಪರ್ಕ ಕಡಿತದ ಗುರಿಯನ್ನು ಹೊಂದಿತ್ತು. ಈ ಯುದ್ಧವು ಕಾಶ್ಮೀರ ವಿವಾದ ಇತ್ಯರ್ಥಕ್ಕಾಗಿ ಭಾರತವನ್ನು ಒತ್ತಾಯಿಸಿತು.

1999ರ ಮೇ ಮತ್ತು ಜುಲೈ ತಿಂಗಳಿನಲ್ಲಿ ಕಾರ್ಗಿಲ್ ಜಿಲ್ಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯಿತು. ಈ ಯುದ್ಧದ ಹಿಂದೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಇದ್ದರು ಎಂದು ಹೇಳಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಭಾರತದ ನಿಯಂತ್ರಣದಲ್ಲಿದ್ದ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ತಮ್ಮ ಸೇನೆಯನ್ನು ನಿಯೋಜಿಸುವ ಮೂಲಕ ಪಾಕಿಸ್ತಾನವು ಆ ಪ್ರದೇಶಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಎರಡನೇ ಹಂತದಲ್ಲಿ ಯುದ್ಧತಂತ್ರದ ಮೂಲಕ ಭಾರತವು ತಕ್ಕ ತಿರುಗೇಟು ನೀಡಿತು. ಅಂತಿಮವಾಗಿ ವಾಯುಪಡೆಯ ಸಹಾಯದಿಂದ ಭಾರತೀಯ ಸೇನೆಯು ಯುದ್ಧವನ್ನು ಮುಕ್ತಾಯಗೊಳಿಸಿತು.

ಭಾರತದ ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ಹುನ್ನಾರ

ಭಾರತದ ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ಹುನ್ನಾರ

ಕಳೆದ 1999ರ ಫೆಬ್ರವರಿಯಲ್ಲಿ ಭಾರತದ ಅಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಭಾರತ-ಪಾಕಿಸ್ತಾನ 'ಭಾಯಿ ಭಾಯಿ' ಎಂಬ ಕಲ್ಪನೆಯಲ್ಲಿ ಭಾರತದಿಂದ ಲಾಹೋರಿಗೆ ಐತಿಹಾಸಿಕ ಬಸ್ ಸೇವೆ ಆರಂಭಿಸಿದರು. 1999ರ ಫೆಬ್ರವರಿ 21ರಂದು ಬಸ್ ಪ್ರಾರಂಭಿಸಿ, ಲಾಹೋರ್ ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ ಸ್ನೇಹದ ಹಸ್ತ ಚಾಚುವ ಹೃದಯ ವೈಶಾಲ್ಯತೆ ತೋರಿದ್ದರು.

ಒಂದು ಕಡೆ ಸ್ನೇಹ ಹಸ್ತಕ್ಕೆ ಕೈಕುಲುಕಿದ್ದ ಪಾಕಿಸ್ತಾನ, ಇನ್ನೊಂದು ಮಗ್ಗಲಿನಲ್ಲಿ ಭಾರತದ ಬೆನ್ನಿಗೆ ಚೂರಿ ಹಾಕುವ ಹುನ್ನಾರ ನಡೆಸಿತ್ತು. ಶ್ರೀನಗರದಿಂದ ಲೇಹ್ ಸಂಪರ್ಕಿಸುವ ಏಕೈಕ ರಸ್ತೆ ಮಾರ್ಗ ಅಂದರೆ ರಾ‍ಷ್ಟ್ರೀಯ ಹೆದ್ದಾರಿ 1ಡಿ. ಈ ಹೆದ್ದಾರಿ ಜೋಜಿ ಲಾ ಪಾಸ್ ಮತ್ತು ಕಾರ್ಗಿಲ್ ಎಂಬ ಪ್ರದೇಶಗಳ ಮೂಲಕ ಹಾದು ಹೋಗುತ್ತದೆ. ಈ ಕಾರ್ಗಿಲ್ ಪ್ರದೇಶವನ್ನು ವಶಪಡಿಸಿಕೊಳ್ಳುವ ಮೂಲಕ ಕಾಶ್ಮೀರದಿಂದ ಲಡಾಕ್ ಭಾಗವನ್ನು ಬೇರ್ಪಡಿಸಿ ಸಿಯಾಚಿನ್ ಪ್ರದೇಶವನ್ನು ಕಬಳಿಸುವ ಹುನ್ನಾರ ರಚಿಸಿತು.

ಕಾರ್ಗಿಲ್ ವಿಜಯ್ ದಿವಸ್ 2022ರ ಮಹತ್ವ

ಕಾರ್ಗಿಲ್ ವಿಜಯ್ ದಿವಸ್ 2022ರ ಮಹತ್ವ

1990ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಟ ಹುತಾತ್ಮರಾದ ಭಾರತೀಯ ಯೋಧರನ್ನು ಗೌರವಿಸುವ ಉದ್ದೇಶದಿಂದ ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಭಾರತದಾದ್ಯಂತ ಈ ದಿನವನ್ನು ವಿಶೇಷವಾಗಿ ಸ್ಮರಿಸಿಕೊಳ್ಳಲಾಗುತ್ತದೆ. ನವದೆಹಲಿಯಲ್ಲಿ ಪ್ರಧಾನಮಂತ್ರಿಗಳು ಪ್ರತಿ ವರ್ಷ ಈ ದಿನದಂದು ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿಯಲ್ಲಿ ಸೈನಿಕರಿಗೆ ಗೌರವ ಸಲ್ಲಿಸುತ್ತಾರೆ.

23ನೇ ಕಾರ್ಗಿಲ್ ವಿಜಯ್ ದಿವಸ್

23ನೇ ಕಾರ್ಗಿಲ್ ವಿಜಯ್ ದಿವಸ್

ಭಾರತದಲ್ಲಿ ಈ ವರ್ಷ ಕಾರ್ಗಿಲ್ ವಿಜಯ್ ದಿವಸ್‌ನ 23ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಭಾರತೀಯ ಸೇನೆಯು ದೆಹಲಿಯಿಂದ ಕಾರ್ಗಿಲ್ ವಿಜಯ್ ದಿವಸ್ ಮೋಟಾರ್ ಬೈಕ್ ಯಾತ್ರೆಗೆ ಚಾಲನೆ ನೀಡುತ್ತದೆ.

ಮಂಗಳವಾರದಂದು ಯುದ್ಧ ಸ್ಮಾರಕದಲ್ಲಿ ಧ್ವಜಾರೋಹಣ ಸಮಾರಂಭಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವೇಳೆ ಹುತಾತ್ಮ ಯೋಧರ ಕುಟುಂಬಗಳನ್ನು ಆಹ್ವಾನಿಸಲಾಗಿದೆ. ಡ್ರಾಸ್‌ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ನೃತ್ಯ ಪ್ರದರ್ಶನ, ದೇಶಭಕ್ತಿ ಗೀತೆ ಮತ್ತು ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+