ರಾಜ್ಯ ಬಜೆಟ್: ಕುಡುಕರ ಮೇಲೆ ಯಾಕೆ ಕೋಪತಾಪ ಮುಖ್ಯಮಂತ್ರಿಗಳೇ..
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ (ಮಾ 4) ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದಾರೆ. 135 ನಿಮಿಷದ ಸುದೀರ್ಘವಾಗಿ ಮಂಡಿಸಿದ ಆಯವ್ಯಯದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ಎಂದಿನಂತೆ ಆಡಳಿತ ಪಕ್ಷದವರು ಬಜೆಟ್ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರೆ, ವಿರೋಧ ಪಕ್ಷದವರು ಸಂಪ್ರದಾಯದಂತೆ ಕೆಟ್ಟ ಬಜೆಟ್ ಎಂದು ವರ್ಣಿಸಿದ್ದಾರೆ. ಬೆಂಗಳೂರು ನಗರ ಮತ್ತು ತವರು ಜಿಲ್ಲೆ ಹಾವೇರಿ ಜಿಲ್ಲೆಗೆ ಬಂಪರ್ ಘೋಷಣೆಯನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ.
ನೇರವಾಗಿ ಯಾವುದೇ ತೆರಿಗೆಯನ್ನು ಏರಿಸದಿದ್ದರೂ, ರಾಜಸ್ವ ಸಂಗ್ರಹದ ಗುರಿಯನ್ನು ಮುಖ್ಯಮಂತ್ರಿಗಳು ಹೆಚ್ಚಿಸಿದ್ದಾರೆ. ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಮೇಲ್ನೋಟಕ್ಕೆ ಹೆಚ್ಚುವರಿ ಕರ ವಿಧಿಸದಿದ್ದರೂ, ರಾಜಸ್ವ ಸಂಗ್ರಹದ ಟಾರ್ಗೆಟ್ ಹೆಚ್ಚಿಸಿರುವುದರಿಂದ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಜನರಿಗೆ ತಟ್ಟಬಹುದು.
ಸರಕಾರಕ್ಕೆ ಪ್ರಮುಖ ಆದಾಯದ ಮೂಲವಾಗಿರುವ ಅಬಕಾರಿ ಇಲಾಖೆಯ ರಾಜಸ್ವ ಸಂಗ್ರಹವನ್ನೂ ಮುಖ್ಯಮಂತ್ರಿಗಳು ಹೆಚ್ಚಿಸಿದ್ದಾರೆ. ಯಾವುದೇ ಸರಕಾರವಿರಲಿ, ಯಾರೇ ಮುಖ್ಯಮಂತ್ರಿಯಾಗಿರಲಿ, ಅಬಕಾರಿ ಇಲಾಖೆಯ ಮೇಲೆಯೇ ಎಲ್ಲರಿಗೂ ಮೊದಲ ಕಣ್ಣು.

ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹಣೆಯ ಗುರಿ
ಮುಖ್ಯಮಂತ್ರಿಗಳು ತಮ್ಮ ಬಜೆಟಿನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಮಾಡಿಲ್ಲ. ರಾಜಸ್ವದ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ರಾಜಸ್ವ ಸಂಗ್ರಹಣೆಯ ಗುರಿಯನ್ನು ಪರಿಷ್ಕರಿಸಿದ್ದು ಸಾರಿಗೆ ಇಲಾಖೆಗೆ 8,007 ಕೋಟಿ, ಅಬಕಾರಿ ಇಲಾಖೆಗೆ 29,000 ಕೋಟಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ರುಪಾಯಿ ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ.

ಗುರಿ ಮೀರಿ ಆದಾಯ ಸಂಗ್ರಹಿಸುವ ತಾಕತ್ತು ಇಲಾಖೆಗೆ ಇದೆ ಎನ್ನುವ ವಿಶ್ವಾಸ
2021-22 ಸಾಲಿಗೆ ಅಬಕಾರಿ ಇಲಾಖೆಗೆ 24,580 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ನಿಗದಿ ಪಡಿಸಲಾಗಿತ್ತು. ಅದರಲ್ಲಿ, ಫೆಬ್ರವರಿ ಅಂತ್ಯಕ್ಕೆ 23,726 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಈಗಾಗಲೇ ಸಂಗ್ರಹಿಸಿಯಾಗಿದೆ. ಹಾಗಾಗಿ, ನಿರೀಕ್ಷಿತ ಗುರಿ ಮೀರಿ ಆದಾಯ ಸಂಗ್ರಹಿಸುವ ತಾಕತ್ತು ಇಲಾಖೆಗೆ ಇದೆ ಎನ್ನುವ ವಿಶ್ವಾಸದಿಂದಾಗಿ ಮುಂದಿನ ವರ್ಷದ ಗುರಿಯನ್ನು ಹೆಚ್ಚಿಸಲಾಗಿದೆ. 2022-23ರ ಸಾಲಿಗೆ 29,000 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹದ ಗುರಿಯನ್ನು ನೀಡಲಾಗಿದೆ.

ಈ ಬಾರಿ ಕೊರತೆ ಆಗುವುದಿಲ್ಲ ಎನ್ನುವ ನಿರೀಕ್ಷೆಯಿದೆ ಎಂದ ಮುಖ್ಯಮಂತ್ರಿ
ಆ ಮೂಲಕ, 4,420 ಕೋಟಿ ರೂಪಾಯಿ ಹೆಚ್ಚುವರಿ ಸಂಗ್ರಹದ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ/ನಿರೀಕ್ಷಿಸಲಾಗಿದೆ. ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಸಿಎಂ ಬೊಮ್ಮಾಯಿ, "ನಾವು ಮದ್ಯವನ್ನು ಪ್ರಮೋಟ್ ಮಾಡುತ್ತಿಲ್ಲ. ಸೋರಿಕೆ ತಡೆಯುವುದಕ್ಕೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಕಳೆದ ಬಾರಿ ಲಾಕ್ಡೌನ್ ಸಮಯದಲ್ಲಿ ಅದಕ್ಕೂ ಕೊರತೆಯಾಗಿತ್ತು. ಈ ಬಾರಿ ಕೊರತೆ ಆಗುವುದಿಲ್ಲ ಎನ್ನುವ ನಿರೀಕ್ಷೆಯಿದೆ"ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ದರ ಹೆಚ್ಚಳ ಮಾಡುವ ಚಿಂತನೆ ಇಲ್ಲ ಎಂದ ಅಬಕಾರಿ ಸಚಿವ ಗೋಪಾಲಯ್ಯ
ಇಲ್ಲಿ ಗಮನಿಸಬೇಕಾದ ವಿಚಾರ ಏನಂದರೆ, 4,420 ಕೋಟಿ ರೂಪಾಯಿ ಹೆಚ್ಚುವರಿ ಸಂಗ್ರಹಿಸಲು ಸರಕಾರ ಏನು ಕ್ರಮಕ್ಕೆ ಮುಂದಾಗಲಿದೆ ಎನ್ನುವುದು. ಒಂದೋ, ಮದ್ಯದ ಮಳಿಗೆಯನ್ನು ಹೆಚ್ಚಿಸಬೇಕು ಇಲ್ಲವೋ ಮದ್ಯದ ದರಗಳನ್ನು ಪರಿಷ್ಕರಿಸಬೇಕು. ಕೆಲವು ದಿನಗಳ ಹಿಂದೆ 'ಮದ್ಯದ ದರ ಹೆಚ್ಚಳ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ' ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದರು. ಆದರೆ, ದರ ಹೆಚ್ಚಿಸದೇ ಅಗಾಧ ಮೊತ್ತದ ಪರಿಷ್ಕೃತ ಟಾರ್ಗೆಟ್ ಅನ್ನು ಇಲಾಖೆ ತಲುಪುವುದು ಹೇಗೆ ಎನ್ನುವುದಿಲ್ಲಿ ಪ್ರಶ್ನೆ. ಒಟ್ಟಾರೆಯಾಗಿ, ಪ್ರತೀ ಬಜೆಟ್ ನಂತೆ ಈ ಬಾರಿಯೂ ಕುಡುಕರ ಮೇಲೆಯೇ ಸರಕಾರಕ್ಕೆ ಕಣ್ಣು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications