Prasada: ನಿಮ್ಮ ಮನೆ ಬಾಗಿಲಿಗೆ ಬರುತ್ತೆ 400 ದೇವಸ್ಥಾನಗಳ ಪ್ರಸಾದ, ಪಡೆಯುವುದು ಹೇಗೆ?
ಸಾಮಾನ್ಯವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅಲ್ಲಿದ ದೇವರ ಪ್ರಸಾದವನ್ನು ಖರೀದಿಸಿ, ಬಂಧು-ಬಳಗ ಹಾಗೂ ನೆರೆಹೊರೆಯವರಿಗೆ ವಿತರಿಸುವ ಪದ್ಧತಿ ಮೊದಲಿನಿಂದಲೂ ಇದೆ. ದೂರದ ದೇವಸ್ಥಾನಗಳಿಗೆ ಹೋಗುವವರಿಗೆ ಬರ್ತಾ ಸ್ವಲ್ಪ ಪ್ರಸಾದ ನಮಗೂ ತನ್ರೀ ಎಂದು ಮನವಿ ಮಾಡುವವರೂ ಇದ್ದಾರೆ. ಆದರೆ ಇನ್ನು ಮುಂದೆ ಕರ್ನಾಟಕದ 400 ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ಪ್ರಸಾದವು ನಿಮ್ಮ ಬಾಗಿಲಿಗೇ ಬರಲಿದೆ.
ಹೌದು, ಮುಜರಾಯಿ ಇಲಾಖೆ ಭಕ್ತರಿಗಾಗಿ ಈ ವಿಶೇಷ ಸೇವೆಯನ್ನು ಒದಗಿಸುತ್ತಿದೆ. ಭಕ್ತರಿಗಾಗಿ ಇ-ಪ್ರಸಾದ ಸೇವೆಯನ್ನು ಆರಂಭಿಸಿದ್ದು, ಇನ್ನು ಮುಂದೆ ಪ್ರಮುಖ ದೇವಸ್ಥಾನಗಳಲ್ಲಿ ವಿತರಿಸುವ ಪ್ರಸಾದವನ್ನು ಮನೆಗೆ ತರಿಸಿಕೊಳ್ಳಬಹುದಾಗಿದೆ. ಈ ಸೇವೆಯ ಮೂಲಕ ರಾಜ್ಯದಲ್ಲಿರುವ ಸುಮಾರು 400 ದೇಗುಲಗಳ ಪ್ರಸಾದ ಕೇವಲ 15 ದಿನಗಳಲ್ಲಿ ನಿಮ್ಮ ಮನೆಗೆ ಬಂದು ತಲುಪಲಿದೆ.

ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುವಂತೆ, ಪ್ರಸಾದದ ಕೌಂಟರ್ ಬಳಿಯೂ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಇದೆ. ಅಲ್ಲದೆ ಇದರಿಂದ ದೇವಸ್ಥಾನಗಳಲ್ಲಿ ಜನದಟ್ಟಣೆ ಕೂಡ ಅಧಿಕವಾಗುತ್ತಿದೆ. ಇದೇ ಕಾರಣದಿಂದ ಭಕ್ತರು ದೇವಾಲಯಗಳಿಗೆ ಬರಲು ಕೂಡ ಹಿಂದೇಟು ಹಾಕುತ್ತಿದ್ದರೆ, ಕೊನೇ ಪಕ್ಷ ದೇವಸ್ಥಾನಗಳಿಗೆ ಹೋಗುವವರಿಂದಾದರೂ ಪ್ರಸಾದ ತರಿಸಿಕೊಳ್ಳೋಣ ಎಂದುಕೊಳ್ಳುತ್ತಿದ್ದಾರೆ. ಇದನ್ನೆಲ್ಲ ಮನಗಂಡು ಮುಜರಾಯಿ ಇಲಾಖೆಯು ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ.
ಮನೆಯಲ್ಲಿರುವ ಹಿರಿಯರಿಗೆ ದೇವಸ್ಥಾನಗಳಿಗೆ ಹೋಗಿ ದೇವರ ದರ್ಶನ ಪಡೆಯಬೇಕು ಹಾಗೂ ಅಲ್ಲಿನ ಪ್ರಸಾದ ಸೇವನೆ ಮಾಡಬೇಕು ಎಂಬುದು ದೊಡ್ಡ ಆಸೆ. ಆದರೆ, ಹೆಚ್ಚಿನ ಜನದಟ್ಟಣೆ ಇರುವ ಕಾರಣಕ್ಕೆ ಹಾಗು ಅವರ ಆರೋಗ್ಯದ ದೃಷ್ಟಿಯಿಂದ ಮನೆಯಲ್ಲೇ ಉಳಿಯುತ್ತಾರೆ. ತಮ್ಮ ಆಪ್ತ ವಲಯದಲ್ಲಿ ಯಾರಾದರೂ ದೇವಸ್ಥಾನಗಳಿಗೆ ಹೋಗುತ್ತಿದ್ದರೆ, ಅಲ್ಲಿಂದ ಪ್ರಸಾದ ತಂದು ಕೊಡುವಂತೆ ಮನವಿಯೂ ಮಾಡುತ್ತಿದ್ದಾರೆ. ಇನ್ನು ಮುಂದೆ ಮನೆಯಲ್ಲಿ ಕುಳಿತುಕೊಂಡೇ ತಮಗೆ ಇಷ್ಟವಾದ ದೇವಸ್ಥಾನದಿಂದಲೇ ಪ್ರಸಾದವನ್ನು ತರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮುಜರಾಯಿ ಇಲಾಖೆಯು ಈಗಾಗಲೇ ಈ ಇ ಪ್ರಸಾದ ಸೇವೆಯನ್ನು ಪ್ರಾಯೋಗಿಕವಾಗಿ ರಾಜ್ಯದ ಕೆಲವು ದೇವಾಲಯಗಳಲ್ಲಿ ಶುರು ಮಾಡಿತ್ತು. ಆ ದೇವಸ್ಥಾನಗಳಿಂದ ಆನ್ಲೈನ್ ಮೂಲಕ ಭಕ್ತರ ಮನೆ ಬಾಗಿಲಿಗೆ ಪ್ರಸಾದ ತಲುಪಿಸುವುದಾಗಿ ಹೇಳಿತ್ತು. ಇದಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸಾವಿರಾರು ಮಂದಿ ಪ್ರಸಾದ ತರಿಸಿಕೊಂಡಿದ್ದಾರೆ. ಇದು ಯಶಸ್ವಿಯಾಗಿರುವ ಬೆನ್ನಲ್ಲೇ ಈ ಯೋಜನೆಯನ್ನು ರಾಜ್ಯದ ಪ್ರಮುಖ ದೇವಾಲಯಗಳಿಗೂ ವಿಸ್ತರಿಸಲು ಮುಜರಾಯಿ ಇಲಾಖೆ ಮುಂದಾಗಿದೆ.
ಈ ಇ-ಪ್ರಸಾದ ಯೋಜನೆಯಿಂದ ದೇವಸ್ಥಾನಗಳಲ್ಲಿ ಜನದಟ್ಟಣೆ ಕೂಡ ಕಡಿಮೆಯಾಗಲಿದೆ. ಪ್ರಸಾದದ ಕೌಂಟರ್ಗಳಲ್ಲಿ ಕ್ಯೂ ನಿಲ್ಲುವುದು ಕೂಡ ತಪ್ಪಲಿದೆ. ಅಂಗವಿಕಲರಿಗೂ ಈ ಸೇವೆಯಿಂದ ಬಹಳ ಅನುಕೂಲವಾಗಲಿದೆ. ಮುಖ್ಯವಾಗಿ ಮನೆಯಲ್ಲಿರುವ ವೃದ್ಧರು ತಮಗೆ ಇಷ್ಟವಾದ ದೇವಸ್ಥಾನದಿಂದಲೇ ಪ್ರಸಾದವನ್ನು ಮನೆಗೆ ತರಿಸಿಕೊಂಡು ಸೇವಿಸಬಹುದು. ಮಹಿಳೆಯರು ಸೇರಿದಂತೆ ಯಾರು ಬೇಕಾದರೂ ಈ ಸೇವೆಯ ಮೂಲಕ ಪ್ರಸಾದವನ್ನು ಆರ್ಡರ್ ಮಾಡಿ ತರಿಸಿಕೊಳ್ಳಬಹುದು. ಇನ್ನು ಕೆಲವೇ ವಾರಗಳಲ್ಲಿ ಈ ಸೇವೆಯು ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಭಕ್ತರಿಗೆ ಇದು ನಿಜಕ್ಕೂ ಸಿಹಿಸುದ್ದಿ ಎಂದು ಹೇಳಲಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications