Get Updates
Get notified of breaking news, exclusive insights, and must-see stories!

ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ವಿವರ

ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದೆ. ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇಂತಹ ಸಮಯದಲ್ಲಿ ಯೋಜನೆ ಉಪಯೋಗಕ್ಕೆ ಬರುತ್ತದೆ.

ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ 'ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ' ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು 2012ರಲ್ಲಿ ಜಾರಿಗೆ ತಂದಿದೆ.

Karnataka Private Commercial Transport Workers Accident Benefit Scheme

ಯೋಜನೆಯಡಿ ಸಿಗುವ ಸೌಲಭ್ಯಗಳು; ಈ ಯೋಜನೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸುತ್ತದೆ. ವಯೋಮಿತಿ 20 ರಿಂದ 70 ವರ್ಷಗಳು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತದೆ.

ಯೋಜನೆಗೆ ಅರ್ಹರಾಗಲು ಚಾಲಕರು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯ. ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ. ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮಂಡಳಿಯ ನಿಯಮಾನುಸಾರ ಅಧಿಸೂಚಿಸಲ್ಪಟ್ಟ ಆಯಾಯ ಜಿಲ್ಲೆಯ ನೋಂದಣಿ ಅಧಿಕಾರಿಗಳಿಂದ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.

ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ ಅವರ ನಾಮ ನಿರ್ದೇಶಿತರಿಗೆ ರೂ. 5 ಲಕ್ಷ ಪರಿಹಾರ ಸಿಗಲಿದೆ. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗಳಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ. 2 ಲಕ್ಷದವರೆಗೆ ಪರಿಹಾರ ಸಿಗುತ್ತದೆ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ, ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಟ ರೂ. 50 ಸಾವಿರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ, ಗರಿಷ್ಠ ರೂ. 1 ಲಕ್ಷದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುತ್ತದೆ.

ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ 1 ವರ್ಷದೊಳಗೆ ಮಂಡಳಿಗೆ ಫಲಾನುಭವಿ/ ನಾಮ ನಿರ್ದೇಶಿತರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ, ಫಲಾನುಭವಿಯ ನಾಮ ನಿರ್ದೇಶಿತರು ಕ್ಲೇಮ್ ಅರ್ಜಿಯ ಜೊತೆಗೆ ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಪ್ರಥಮ ವರ್ತಮಾನ ವರದಿ ಮತ್ತು ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ ಹಾಗೂ ಕ್ಲೀನರ್‌ಗಳು ನೋಂದಣಿ ಗುರುತಿನ ಚೀಟಿ ಲಗತ್ತಿಸಿ ಸಲ್ಲಿಸಬೇಕು.

ಅಪಘಾತದಿಂದ ದುರ್ಬಲತೆ ಉಂಟಾದಲ್ಲಿ ಕ್ಲೇಮ್ ಅರ್ಜಿಯ ಜೊತೆಗೆ ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ/ ಬ್ಯಾಡ್ಜ್, ಕ್ಲೀನರ್‌ಗಳು ನೋಂದಣಿ ಗುರುತಿನ ಚೀಟಿ, ಪ್ರಥಮ ವರ್ತಮಾನ ವರದಿ ಮತ್ತು ಒಳರೋಗಿ ಆಸ್ಪತ್ರೆ ವೆಚ್ಚ ಹಿಂಪಡೆಯಲು ವೈದ್ಯಕೀಯ ಪ್ರಮಾಣ ಪತ್ರ/ ಬಿಲ್‍ಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಸ್ವೀಕರಿಸಿದ ಕ್ಲೇಮ್ ಅರ್ಜಿಯ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅರ್ಹರಿದ್ದಲ್ಲಿ, ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.

ಶೈಕ್ಷಣಿಕ ಸಹಾಯ; ಅಪಘಾತದಿಂದ ಮರಣ ಹೊಂದಿದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ, 1 ನೇ ತರಗತಿಯಿಂದ ಪದವಿ ಪೂರ್ವ/ 12 ನೇ ತರಗತಿಯ ವರೆಗೆ ವಾರ್ಷಿಕ ತಲಾ ರೂ. 10,000ಗಳ ಶೈಕ್ಷಣಿಕ ಧನ ಸಹಾಯ ನೀಡಲಾಗುವುದು.

ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಅಥವಾ ನೇರವಾಗಿ ಮಂಡಳಿಗೆ ಸಲ್ಲಿಸಬಹುದು. ಈ ಅರ್ಜಿಯನ್ನು ಪರಿಶೀಲಿಸಿ, ಧನ ಸಹಾಯದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+