Get Updates
Get notified of breaking news, exclusive insights, and must-see stories!

Kaveri Aarti: ಕೆಆರ್‌ಎಸ್‌ನಲ್ಲೂ ನಡೆಯಲಿದೆ ಕಾವೇರಿ ಆರತಿ ಕಾರ್ಯಕ್ರಮ, ಯಾವಾಗ?

ಉತ್ತರ ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಗಮನ ಸೆಳೆದಿದ್ದ ಗಂಗಾ ಆರತಿ ಕಾರ್ಯಕ್ರಮದ ಮಾದರಿ ಕರ್ನಾಟಕದಲ್ಲೂ ಜನಮಾತೆಗೆ ನಮಿಸುವ ಆರತಿ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಳ್ಳುತ್ತಿದೆ. ಸದ್ಯ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಾವೇರಿ ಆರತಿ ಕಾರ್ಯಕ್ರಮ ನೆರವೇರಿಸಿರುವ ಸರ್ಕಾರವು ಇದೀಗ ಮಂಡ್ಯದ ಕೆಆರ್‌ಎಸ್‌ನಲ್ಲೂ ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸಜ್ಜಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಶುಕ್ರವಾರದಂದು ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಅದ್ಧೂರಿಯಾಗಿ ಕಾವೇರಿ ಆರತಿ ಕಾರ್ಯಕ್ರಮವನ್ನು ನೆರವೇರಿಸಿದ ಡಿಕೆ ಶಿವಕುಮಾರ್‌ ಅವರು ಇದೇ ವೇಳೆ ಈ ಕಾರ್ಯಕ್ರಮದ ಬಗ್ಗೆ ಮತ್ತೊಂದು ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ. ಮಂಡ್ಯದ ಕೆಆರ್‌ಎಸ್‌ ಡ್ಯಾಂನಲ್ಲಿ ಈ ಬಾರಿಯ ದಸರಾ ವೇಳೆಗೆ "ಕಾವೇರಿ ಆರತಿ" ಮಾಡಲು ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಇದಕ್ಕೊಂದು ಸಮಿತಿ ರಚಿಸಿದ್ದೇವೆ. ಜಲಮಾತೆಗೆ ನಮನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಏಕೆಂದರೆ ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Kaveri Aarti To be Held At KRS Dam During Dasara DK Shivakumar

ನೀರಿಲ್ಲದೇ ನಾವಿಲ್ಲ, ನೀರೇ ನಾಗರಿಕತೆ-ನೀರಿನಿಂದದಲೇ ಧರ್ಮ. ಬರಗಾಲ ಬಂದಾಗ, ಬಾವಿ ಒಣಗಿದಾಗ ನೀರಿನ ಮಹತ್ವ ನಮಗೆ ತಿಳಿಯುತ್ತದೆ. ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬರಬಾರದೆಂದು ಪ್ರಾರ್ಥನೆ ಮಾಡಲು, ದೇಶದ ಇತಿಹಾಸ ಸಂಸ್ಕೃತಿ ಉಳಿಸಲು ಈ "ಕಾವೇರಿ ಆರತಿ" ಮಾಡಿದ್ದೇವೆ. ಐತಿಹ್ಯವಿರುವ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು ಕಾವೇರಿ ಮಾತೆಗೆ ಆರತಿ ಬೆಳಗಿ, ಅಲ್ಲಿ ನೆರೆದಿದ್ದವರೊಂದಿಗೆ ಜಲಸಂರಕ್ಷಣೆಯ ಸಂಕಲ್ಪ ಕೈಗೊಂಡಿದ್ದೇನೆ. ಸಾರ್ವಜನಿಕರೆಲ್ಲರೂ ಈ ಪ್ರತಿಜ್ಞೆ ಸ್ವೀಕರಿಸಿ, ನೀರಿನ ಸಂರಕ್ಷಣೆಯ ಪಣ ತೊಡಿ. ಕಾವೇರಿ ಆರತಿ, ಅದು ಅನುದಿನವೂ ಜಲಜಾಗೃತಿಯಾಗಲಿ ಎಂದು ಡಿಕೆ ಶಿವಕುಮಾರ್‌ ಕರೆ ನೀಡಿದ್ದಾರೆ.

ಕತ್ತಲೆಯನ್ನು ಸೀಳಿ ಬೆಳಗಿದ ಕಾವೇರಿ ಆರತಿ, ಇದು ಜಲ ಸಂರಕ್ಷಣೆಯ ಜ್ಯೋತಿ. ಕರ್ನಾಟಕದಲ್ಲೇ ಮೊದಲ ಬಾರಿಗೆ ನಮ್ಮ ಬೆಂಗಳೂರು 'ಕಾವೇರಿ ಆರತಿ'ಯ ವೈಭವಕ್ಕೆ ಸಾಕ್ಷಿಯಾಗಿದೆ. ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ನೆರೆದಿದ್ದವರೆಲ್ಲರ ಮನಸ್ಸಿನಲ್ಲಿ ಭಾವನೆಗಳ ಸಂಚಲನವನ್ನು ಸೃಷ್ಟಿಸಿದೆ ಎಂದಿದ್ದಾರೆ. ಭಾಗಮಂಡಲದ ಸನ್ನಿಧಿಯಿಂದ, ತಲಕಾವೇರಿಯ ಮಡಿಲಿನಿಂದ ತಂದ ಪುಣ್ಯ ತೀರ್ಥವನ್ನು ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ನಡೆದ 'ಕಾವೇರಿ ಆರತಿ' ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ವಿತರಿಸಲಾಯಿತು.

Kaveri Aarti To be Held At KRS Dam During Dasara DK Shivakumar

ವಿಶ್ವ ಜಲ ದಿನದ ಅಂಗವಾಗಿ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನಕ್ಕೆ ಕರೆ ನೀಡಿದ್ದೇವೆ. ಇದಕ್ಕೆ ಪವಿತ್ರವಾದ ಕಾವೇರಿ ಆರತಿ ಮೂಲಕ ಚಾಲನೆ ನೀಡಲಾಗುತ್ತಿದೆ. ನೀವು ದೊಡ್ಡ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಬಂದಿದ್ದೀರಿ. ನಿಮಗೆ ಸರ್ಕಾರದ ಪರವಾಗಿ ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ. ನಾನೇ ತಲಕಾವೇರಿಗೆ ಹೋಗಿ, ಕಾವೇರಿ ಪೂಜೆ ಮಾಡಿ, ಪವಿತ್ರ ಕಾವೇರಿ ಜಲವನ್ನು ತಂದು ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಗೆ ಅರ್ಪಿಸಿ ಪವಿತ್ರವಾದ ಕಾರ್ಯಕ್ರಮ ನಡೆಸಿದ್ದೇನೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ನೀರು ಉಳಿಸುವ ಬಗ್ಗೆ ಜಾಗೃತಿಗಾಗಿ ಪ್ರತಿಜ್ಞಾವಿಧಿಯನ್ನು ಕೂಡ ಬೋಧಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+