ಅತ್ಯುತ್ತಮ ಆಡಳಿತದಲ್ಲಿ ಕೇರಳಕ್ಕೆ ಮೊದಲು, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ
ಬೆಂಗಳೂರು, ಅಕ್ಟೋಬರ್ 31: ದೇಶದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಮೊದಲ ಸ್ಥಾನ ಪಡೆದಿದೆ. ತಮಿಳುನಾಡು ಎರಡನೆಯ ಸ್ಥಾನದಲ್ಲಿದ್ದರೆ, ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ಪಬ್ಲಿಕ್ ಅಫೇರ್ಸ್ ಸೆಂಟರ್ ಈ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ-2020ಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನೇತೃತ್ವವಿರುವ ಬೆಂಗಳೂರು ನಗರ ಮೂಲದ ಈ ಲಾಭರಹಿತ ಸಂಸ್ಥೆಯು ತನ್ನ ವಾರ್ಷಿಕ ವರದಿಯಲ್ಲಿ ಈ ಮಾಹಿತಿ ನೀಡಿದೆ. ಸುಸ್ಥಿರ ಅಭಿವೃದ್ಧಿಯ ಸನ್ನಿವೇಶದಲ್ಲಿ ಸಂಯುಕ್ತ ಸೂಚ್ಯಂಕದ ಆಧಾರದಲ್ಲಿ ಆಡಳಿತ ಪ್ರದರ್ಶನವನ್ನು ಪರಿಗಣಿಸಿ ರಾಜ್ಯಗಳಿಗೆ ಶ್ರೇಯಾಂಕ ನೀಡಲಾಗಿದೆ ಎಂದು ಅದು ತಿಳಿಸಿದೆ.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಆಡಳಿತದ ವಿಚಾರದಲ್ಲಿ ದೊಡ್ಡ ರಾಜ್ಯಗಳ ವಿಭಾಗದಲ್ಲಿ ಮೊದಲ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿವೆ. ಕೇರಳ (1.388 ಪಿಎಐ ಸೂಚ್ಯಂಕ), ತಮಿಳುನಾಡು (0.912), ಆಂಧ್ರಪ್ರದೇಶ (0.531) ಮತ್ತು ಕರ್ನಾಟಕ (0.468) ಕ್ರಮವಾಗಿ ಮೊದಲ ಸ್ಥಾನಗಳಲ್ಲಿವೆ.
ಪಟ್ಟಿಯ ಅತಿ ಕೆಳಭಾಗದಲ್ಲಿ ಉತ್ತರ ಪ್ರದೇಶ (-1.461 ಸೂಚ್ಯಂಕ) ಇದೆ. ಒಡಿಶಾ (-1.201) ಮತ್ತು ಬಿಹಾರ (-1.158) ನಂತರದ ಸ್ಥಾನಗಳಲ್ಲಿವೆ. ಮುಂದೆ ಓದಿ.

ಸಣ್ಣ ರಾಜ್ಯಗಳಲ್ಲಿ ಗೋವಾ ಮುಂದೆ
ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ ಅತ್ಯಧಿಕ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಗೋವಾ ರಾಜ್ಯಕ್ಕೆ 1.745 ಸೂಚ್ಯಂಕಗಳು ದೊರೆತಿವೆ. ಅದರ ನಂತರ ಮೇಘಾಲಯ (0.797) ಮತ್ತು ಹಿಮಾಚಲ ಪ್ರದೇಶ (0.725) ಇವೆ. ಸಣ್ಣರಾಜ್ಯಗಳ ಪಟ್ಟಿಯಲ್ಲಿ ಅತಿ ಕಳಪೆ ಪ್ರದರ್ಶನ ತೋರಿಸಿರುವುದು ಮಣಿಪುರ (-0.363). ದೆಹಲಿ (-0.289) ಮತ್ತು ಉತ್ತರಾಖಂಡ (-0.277) ನಂತರದ ಸ್ಥಾನಗಳಲ್ಲಿವೆ.

ಕೇಂದ್ರಾಡಳಿತ ಪ್ರದೇಶಗಳು
ಕೇಂದ್ರಾಡಳಿತ ಪ್ರದೇಶಗಳಲ್ಲಿನ ಆಡಳಿತವನ್ನು ಪರಿಗಣಿಸಿದಾಗ ಚಂಡೀಗಡ 1.05 ಪಿಐಎ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಬಳಿಕ ಪುದುಚೆರಿ (0.52) ಮತ್ತು ಲಕ್ಷದ್ವೀಪ (0.0003) ಸ್ಥಾನ ಪಡೆದಿವೆ. ದಾದರ್ ಮತ್ತು ನಗರ್ ಹವೇಲಿ (-0.69) ಅಂಡಮಾನ್, ಜಮ್ಮು ಮತ್ತು ಕಾಶ್ಮೀರ (-0.50) ಮತ್ತು ನಿಕೋಬಾರ್ (-0.30) ಅತಿ ಕಳಪೆ ಸಾಧನೆ ಮಾಡಿವೆ.

ಮೂರು ಸ್ಥಂಭಗಳ ಆಧಾರ
ಮೂರು ಪ್ರಮುಖ ಸ್ತಂಭಗಳಾದ ನೀತಿ, ಬೆಳವಣಿಗೆ ಮತ್ತು ಸುಸ್ಥಿರತೆಯಿಂದ ವ್ಯಾಖ್ಯಾನಿಸಲಾಗಿರುವ ಸುಸ್ಥಿರ ಅಭಿವೃದ್ಧಿಯ ಸನ್ನಿವೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳ ಆಡಳಿದ ಪ್ರದರ್ಶನವನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ ಎಂದು ಪಿಎಸಿ ತಿಳಿಸಿದೆ.
Recommended Video

ಕಸ್ತೂರಿ ರಂಗನ್ ಹೇಳಿಕೆ
'ಪಿಎಐ 2020ಯು ಭಾರತದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸಂಕ್ರಮಣದ ಕುರಿತಾದ ಪ್ರತಿಫಲಿಸುವಂತೆ ಒಳನೋಟಗಳನ್ನು ಒದಗಿಸುವ ಮತ್ತು ಸೃಷ್ಟಿಸುವ ಮಹತ್ವದ ಕಾರ್ಯವನ್ನು ಮಾಡುತ್ತದೆ' ಎಂದು ಅಧ್ಯಕ್ಷ ಕೆ. ಕಸ್ತೂರಿರಂಗನ್ ತಿಳಿಸಿದ್ದಾರೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications