Opinion Poll: ಕೇರಳದಲ್ಲಿ ಮತ್ತೆ ಪಿಣರಾಯಿ ವಿಜಯನ್ ದಿಗ್ವಿಜಯ
ನವದೆಹಲಿ, ಜನವರಿ 18: ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ಚುನಾವಣಾ ಸಮರದ ಕಾವೇರಲಿದೆ. ಚುನಾವಣಾ ದಿನಾಂಕ ಘೋಷಣೆಯಾಗದೆ ಇದ್ದರೂ ರಾಜಕೀಯ ಪಕ್ಷಗಳು ಅದಕ್ಕೆ ತಯಾರಿ ನಡೆಸುತ್ತಿವೆ. ಚುನಾವಣೆಗೂ ಮುನ್ನ ವಿವಿಧ ಮಾಧ್ಯಮಗಳು ಹಾಗೂ ಸಂಸ್ಥೆಗಳು ಜನರ ಅಭಿಪ್ರಾಯ ಯಾವ ರೀತಿ ಇದೆ ಎಂಬುದನ್ನು ಅರಿಯುವ ಸಮೀಕ್ಷೆಗಳು ನಡೆಯುತ್ತಿವೆ.
ಎಬಿಪಿ ಸುದ್ದಿ ವಾಹಿನಿ ಮತ್ತು ಸಿ ವೋಟರ್ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಮುಂದಿನ ಚುನಾವಣೆಗೂ ಮುನ್ನ ಜನರ ನಿರೀಕ್ಷೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.
ಕೇರಳದಲ್ಲಿ ಶೀಘ್ರದಲ್ಲಿಯೇ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮರಳಿ ಅಧಿಕಾರಕ್ಕೆ ಬರಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೊರೊನಾ ವೈರಸ್ ಸೋಂಕಿನ ನಿರ್ವಹಣೆಯಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳು, ಅವರ ಕಾರ್ಯವೈಖರಿಯೇ ಅವರ ಗೆಲುವಿಗೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದೆ.
ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 98 ಸೀಟುಗಳಲ್ಲಿ ಸ್ಪರ್ಧಿಸಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಮುಂದೆ ಓದಿ.

ಯಾರಿಗೆ ಎಷ್ಟು ಮತಗಳು?
ಎಲ್ಡಿಎಫ್: 81-89
ಯುಡಿಎಫ್: 49-57
ಬಿಜೆಪಿ: 0-2
ಇತರೆ: 0-2

ಮುಖ್ಯಮಂತ್ರಿ ಬಗ್ಗೆ ತೃಪ್ತಿ ಎಷ್ಟಿದೆ?
ತುಂಬಾ ತೃಪ್ತಿಕರ: 48%
ತೃಪ್ತಿಕರ: 35%
ಅತೃಪ್ತಿಕರ: 16%
ಹೇಳಲು ಅಸಾಧ್ಯ: 01%

ಮೋದಿ ಕಾರ್ಯವೈಖರಿ ಎಷ್ಟು ತೃಪ್ತಿಕರ?
ತುಂಬಾ ತೃಪ್ತಿಕರ: 33%
ತೃಪ್ತಿಕರ: 28%
ಅತೃಪ್ತಿಕರ: 39
ಹೇಳಲು ಅಸಾಧ್ಯ: 0%

ಕೇಂದ್ರ ಸರ್ಕಾರದ ಆಡಳಿತ ಸಮಾಧಾನಕರವೇ?
ತುಂಬಾ ತೃಪ್ತಿಕರ: 30%
ತೃಪ್ತಿಕರ: 28%
ಅತೃಪ್ತಿಕರ: 42%
ಹೇಳಲು ಅಸಾಧ್ಯ: 1%
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications