KJ George profile: ಕರ್ನಾಟಕದ ಪ್ರಭಾವಿ ಅಲ್ಪಸಂಖ್ಯಾತ ನಾಯಕ ಕೆಜೆ ಜಾರ್ಜ್ ವ್ಯಕ್ತಿ ಚಿತ್ರಣ
ಕೆಜೆ ಜಾರ್ಜ್ ಅವರು ಪೂರ್ಣ ಹೆಸರು ಕೆಲಚಂದ್ರ ಜೋಸೆಫ್ ಜಾರ್ಜ್. ಅವರು ಐದು ದಶಕಗಳ ಕಾಲ ಕಾಂಗ್ರೆಸ್ಸಿಗರಾಗಿ ಜಾರ್ಜ್ ಅವರು ಸುದೀರ್ಘ ವೃತ್ತಿಜೀವನದಲ್ಲಿ ಅನೇಕ ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ.
ಬೆಂಗಳೂರು, ಮಾರ್ಚ್ 1: ಕರ್ನಾಟಕದ ಪ್ರಭಾವಿ ರಾಜಕಾರಣಿಗಳಲ್ಲಿ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಸಹ ಒಬ್ಬರು. ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಹೆಗ್ಗುರುತು ಹೊಂದಿದವರು. ಕರ್ನಾಟಕ ಕಾಂಗ್ರೆಸ್ನಲ್ಲಿ ತಮ್ಮದೇ ಹಿಡಿತ ಹೊಂದಿರುವ ಅವರ ಬಗ್ಗೆ ತಿಳಿಯುವುದು ಮಹತ್ವವಾದದು. ಈ ಹಿನ್ನೆಲೆಯಲ್ಲಿ ಅವರ ವ್ಯಕ್ತಿ ಚಿತ್ರಣ ಇಲ್ಲಿದೆ ಓದಿ.
ಕೆಜೆ ಜಾರ್ಜ್ ಅವರು ಪೂರ್ಣ ಹೆಸರು ಕೆಲಚಂದ್ರ ಜೋಸೆಫ್ ಜಾರ್ಜ್. ಅವರು ಐದು ದಶಕಗಳ ಕಾಲ ಕಾಂಗ್ರೆಸ್ಸಿಗರಾಗಿ ಜಾರ್ಜ್ ಅವರು ಸುದೀರ್ಘ ವೃತ್ತಿಜೀವನದಲ್ಲಿ ಅನೇಕ ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ ಮತ್ತು ವಿವಿಧ ಸಿಎಂಗಳೊಂದಿಗೆ ಸೇವೆ ಸಲ್ಲಿಸಿದ್ದಾರೆ. ಜಾರ್ಜ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಸಚಿವರು ಮತ್ತು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾಗಿದ್ದರು. ಅಲ್ಲದೆ ಹೆಚ್ ಡಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್ ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದರು. ವೀರೇಂದ್ರ ಪಾಟೀಲ್ ಸರ್ಕಾರ 1980 ರ ದಶಕದಲ್ಲಿ ಯುವ ರಾಜಕಾರಣಿಯಾಗಿ ಅವರು ರಾಜ್ಯ (ಸ್ವತಂತ್ರ ಉಸ್ತುವಾರಿ) ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು.

ಕೆಜೆ ಜಾರ್ಜ್ ಅವರು 24 ಆಗಸ್ಟ್ 1949 ರಂದು ಈಗೀನ ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಕೆಲಚಂದ್ರ ಚಾಕೋ ಜೋಸೆಫ್ ಮತ್ತು ಮರಿಯಮ್ಮ ಜೋಸೆಫ್ ದಂಪತಿಗೆ ಜನಿಸಿದರು. ಅವರ ಕುಟುಂಬವು 1960 ರ ದಶಕದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಗೆ ಸ್ಥಳಾಂತರಗೊಂಡಿತು. ಬಳಿಕ ಬೆಂಗಳೂರಿಗೆ ಬಂದರು. ಬೆಂಗಳೂರಿಗೆ ಸ್ಥಳಾಂತರಗೊಳ್ಳುವ ಮೊದಲು ಅವರು ತಮ್ಮ ಬಾಲ್ಯದ ಹೆಚ್ಚಿನ ಸಮಯವನ್ನು ಅಲ್ಲಿಯೇ ಕಳೆದರು. ಜೋಸೆಫ್ ಮತ್ತು ಅವರ ಮಕ್ಕಳು 1980ರಲ್ಲಿ ಕೆಲಚಂದ್ರ ಸಮೂಹವನ್ನು ಸ್ಥಾಪಿಸಿದರು. ಜಾರ್ಜ್ ಅವರು ಸುಜಾ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ರಾಣಾ ಮತ್ತು ರೆನಿತ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಪ್ರಸ್ತುತ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ (ಹಿಂದೆ ಭಾರತಿ ನಗರ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು) ಶಾಸಕರಾಗಿ 5ನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಜೆ.ಜಾರ್ಜ್ 1968ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು.1969ರಲ್ಲಿ ಗೋಣಿಕೊಪ್ಪಲು ಟೌನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದಾಗ ಅವರ ರಾಜಕೀಯ ಜೀವನ ಆರಂಭವಾಯಿತು. 1971-1972ರ ಅವಧಿಯಲ್ಲಿ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು.

1972 ರಿಂದ 1973 ರವರೆಗೆ ಅವರು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜನರಲ್ ಆಗಿದ್ದರು. ಬಳಿಕ 1973 ರಿಂದ 1975 ರವರೆಗೆ ಅದರ ಅಧ್ಯಕ್ಷರಾಗಿದ್ದರು. 1975ರಲ್ಲಿ ಮತ್ತು 1978 ರ ಹೊತ್ತಿಗೆ ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಖಜಾಂಚಿಯಾದರು. 1982 ರಲ್ಲಿ ಅವರು ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲಿ ಅವರು 1985ರವರೆಗೆ ಸೇವೆ ಸಲ್ಲಿಸಿದರು. ನಂತರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕೆ.ಎಚ್.ರಂಗನಾಥ್, ಎನ್.ಧರಮ್ ಸಿಂಗ್, ಎಸ್.ಎಂ. ಕೃಷ್ಣ, ವಿ.ಎಸ್.ಕೌಜಲಗಿ, ಅಲ್ಲುಂ ವೀರಭದ್ರಪ್ಪ, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡಿಸ್, ವೀರೇಂದ್ರ ಪಾಟೀಲ್ ಮತ್ತು ಜನಾರ್ದನ ಪೂಜಾರಿ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
1985 ರಲ್ಲಿ ಅವರು ಹಿಂದಿನ ಭಾರತೀನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು. 1985 ರಿಂದ 1989 ರವರೆಗೆ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯೂ ಆಗಿದ್ದರು. 1980ರ ದಶಕದ ಕೊನೆಯಲ್ಲಿ ಮತ್ತು 1990 ರ ದಶಕದ ಆರಂಭದಲ್ಲಿ ಅವರು ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಅಡಿಯಲ್ಲಿ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಮುಖ್ಯಮಂತ್ರಿ ಬಂಗಾರಪ್ಪ ಅವರ ಅಡಿಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು.

ಪ್ರಸ್ತುತ ಅವರು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ, ಎ.ಐ.ಸಿ.ಸಿ. ಮತ್ತು ಅಖಿಲ ಭಾರತ ಐ.ಎನ್.ಟಿ.ಯು.ಸಿ. ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ. ಕೆ ಜೆ ಜಾರ್ಜ್ ಅವರು 2013 ರ ವಿಧಾನಸಭಾ ಚುನಾವಣೆಯಲ್ಲಿ ಸರ್ವಜ್ಞನಗರ ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಪದ್ಮನಾಭ ರೆಡ್ಡಿ ವಿರುದ್ಧ 69,673 ಮತಗಳನ್ನು ಪಡೆದು ಗೆದ್ದರು. ಅವರ ಅಧಿಕಾರಾವಧಿಯಲ್ಲಿ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ ಪಿಎಸಿ) ಸಾರ್ವಜನಿಕ ಡೊಮೇನ್ನಲ್ಲಿ ಲಭ್ಯವಿರುವ ಡೇಟಾ ಸೆಟ್ಗಳನ್ನು ಬಳಸಿಕೊಂಡು ಬೆಂಗಳೂರಿನ ಶಾಸಕರಲ್ಲಿ ಅತ್ಯುತ್ತಮ ಎಂದು ರೇಟ್ ಪಡೆದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯಲ್ಲಿ, ಜಾರ್ಜ್ ಅವರು ಸರ್ವಜ್ಞನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಎಂಎನ್ ರೆಡ್ಡಿ ವಿರುದ್ಧ 53,000 ಮತಗಳ ಅಂತರದಿಂದ ಗೆದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications