ಇಂದಿರಾ ಗಾಂಧಿ ನಂಬಿಕಸ್ಥೆ ಮಾರ್ಗರೇಟ್ ಆಳ್ವ ರಾಜಕೀಯ ಜೀವನದ ಹಾದಿ
ಕರ್ನಾಟಕದ ಅತ್ಯಂತ ಹಿರಿಯ ಕಾಂಗ್ರೆಸ್ಸಿಗರಲ್ಲಿ ಒಬ್ಬರೆನಿಸಿರುವ 80 ವರ್ಷದ ಮಾರ್ಗರೇಟ್ ಆಳ್ವ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿದ್ದಾರೆ. ರಾಜಕೀಯ ಕುಟುಂಬ ಹಿನ್ನೆಲೆಯಿಂದ ಬಂದಿರುವ ಮಾರ್ಗರೇಟ್ ಆಳ್ವ ರಾಷ್ಟ್ರ ರಾಜಕೀಯದಲ್ಲಿ ಪ್ರಭಾವಿ ಮಹಿಳೆ ಎನಿಸಿದ್ದರು. ಇಂದಿರಾ ಗಾಂಧಿಯ ನಂಬಿಕಸ್ಥೆ ಮಹಿಳೆಯರಲ್ಲಿ ಒಬ್ಬರಾಗಿದ್ದವರು.
ಮಾರ್ಗರೇಟ್ ಆಳ್ವ ಸಂಸದೆ, ಕೇಂದ್ರ ಸಚಿವೆ, ರಾಜ್ಯಪಾಲೆಯಾಗಿ ವಿವಿಧ ಹಂತಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಎಐಸಿಸಿಯ ಜಂಟಿ ಕಾರ್ಯದರ್ಶಿಯಾಗಿಯೂ ಅವರು ಕೆಲಸ ಮಾಡಿದ್ದಾರೆ.
ಮಾರ್ಗರೇಟ್ ಆಳ್ವ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರು. 1942, ಏಪ್ರಿಲ್ 14ರಂದು ಮಂಗಳೂರಿನಲ್ಲಿ ಜನಿಸಿದರು. ಇವರ ಜನ್ಮ ಹೆಸರು ಮಾರ್ಗರೇಟ್ ನಜರೆತ್. ಓದಿದ್ದು ಬೆಂಗಳೂರಿನ ಮೌಂಟ್ ಕಾರ್ಮೆಟ್ ಕಾಲೇಜಿನಲ್ಲಿ. ಬೆಂಗಳೂರು ವಿವಿ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಇವರ ಸಾಮಾಜಿಕ ಕೈಂಕರ್ಯಗಳಿಗೆ ವಕೀಲಿಕೆ ವೃತ್ತಿ ಪೂರಕವಾಗಿ ನಿಂತಿತು.
ಓದಿನ ದಿನಗಳಿಂದಲೂ ಸಾಮಾಜಿಕ ಚಟುವಟಿಕೆ ಮತ್ತು ಭಾಷಣಗಳಲ್ಲಿ ಅಪರಿಮಿತಿ ಆಸಕ್ತಿ ಮತ್ತು ಚಟುವಟಿಕೆ ಹೊಂದಿದ್ದ ಮಾರ್ಗರೇಟ್ ಆಳ್ವ ಕರುಣಾ ಎಂಬ ಎನ್ಜಿಒ ಸಂಸ್ಥೆ ಮೂಲಕ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳತ್ತ ಗಮನ ಕೊಡುತ್ತಿದ್ದವರು. ಮದುವೆ ಆದ ಬಳಿಕ ಇವರ ಜೀವನಕ್ಕೆ ಇನ್ನೊಂದು ದೊಡ್ಡ ತಿರುವು ಸಿಕ್ಕಿತು. ಇವರ ಸಾಮಾಜಿಕ ಕಾರ್ಯದ ಹಾದಿ ಹೆಚ್ಚು ವಿಸ್ತಾರಗೊಂಡಿತು.
ಮದುವೆ ಬಳಿಕ ರಾಜಕೀಯ ಪ್ರವೇಶ
ವಕೀಲಿಕೆ ಓದಿದ ಮಾರ್ಗರೇಟ್ ಆಳ್ವ ರಾಜಕೀಯಕ್ಕೆ ಬಂದದ್ದು ಮದುವೆ ಬಳಿಕ. ಇವರ ಪತಿ ನಿರಂಜನ್ ಆಳ್ವ ರಾಜಕೀಯ ಕುಟುಂಬಕ್ಕೆ ಸೇರಿದವರು. ನಿರಂಜನ್ ತಂದೆ ಜೋಚಿಮ್ ಆಳ್ವ ಮತ್ತು ತಾಯಿ ವಯಲೆಟ್ ಆಳ್ವ ಇಬ್ಬರೂ ಕಾಂಗ್ರೆಸ್ ಸಂಸದರಾಗಿದ್ದವರು. ವಯಲೆಟ್ ಆಳ್ವ ರಾಜ್ಯಸಭಾ ಸ್ಪೀಕರ್ ಕೂಡ ಆಗಿದ್ದರು. ಜೋಚಿಮ್ ಆಳ್ವ ಪ್ರಭಾವದಿಂದ 1969ರಲ್ಲಿ ಮಾರ್ಗರೆಟ್ ಆಳ್ವ ರಾಜಕೀಯ ಪ್ರವೇಶಿಸಿದರು.
ಮಾರ್ಗರೇಟ್ ಪತಿ ನಿರಂಜನ್ ಆಳ್ವ ಉದ್ಯಮಿಯೂ ಹೌದು. ರಫ್ತು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಮಾರ್ಗರೇಟ್ ಆಳ್ವ ಅವರು ಪೂರ್ಣ ರೀತಿಯಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ.

ಕಾಂಗ್ರೆಸ್ ಪಥ
ಮಾರ್ಗರೇಟ್ ಆಳ್ವ ಪತಿಯ ಕುಟುಂಬದವರು ಅಪ್ಪಟ ಕಾಂಗ್ರೆಸ್ಸಿಗರಾಗಿದ್ದವರು. ಮಾರ್ಗರೇಟ್ ಕೂಡ ಸಹಜವಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಅಡಿ ಇಟ್ಟರು. 1969ರಿಂದಲೂ ಅದೇ ಪಕ್ಷಕ್ಕೆ ನಿಷ್ಠರಾಗಿ ಉಳಿದಿದ್ದಾರೆ. ಎಪ್ಪತ್ತರ ದಶಕದಲ್ಲಿ ಕಾಂಗ್ರೆಸ್ ಇಬ್ಭಾಗವಾದಾಗ ಇಂದಿರಾ ಗಾಂಧಿ ಬಣ ಸೇರಿದ್ದ ಮಾರ್ಗರೆಟ್ ಆಳ್ವ, ಕರ್ನಾಟಕದಲ್ಲಿ ಕಾಂಗ್ರೆಸ್ ಐ ಬೆಳೆಸಲು ಶ್ರಮಿಸಿದರು.
ತುರ್ತುಪರಿಸ್ಥಿತಿ ಇದ್ದ 1975-1977ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿಯಾಗಿದ್ದರು. 1978-80ರವರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮಾರ್ಗರೇಟ್ ಆಳ್ವ ಕಾರ್ಯನಿರ್ವಹಿಸಿದರು. 2004-2009ರಲ್ಲಿ ಎಐಸಿಸಿಯಲ್ಲಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

ಸಂಸದೆ ಮತ್ತು ಸಚಿವೆ
ಮಾರ್ಗರೇಟ್ ಆಳ್ವ ಐದು ಬಾರಿ ಸಂಸದೆಯಾಗಿದ್ದವರು. ನಾಲ್ಕು ಬಾರಿ ರಾಜ್ಯಸಭಾ ಸದಸ್ಯೆ ಮತ್ತು ಒಮ್ಮೆ ಲೋಕಸಭಾ ಸದಸ್ಯೆಯಾಗಿದ್ದರು. 1974, 1980, 1986 ಮತ್ತು 1992ರಲ್ಲಿ ರಾಜ್ಯಸಭಾ ಸದಸ್ಯೆಯಾಗಿದ್ದರು. 1999ರಲ್ಲಿ ಉತ್ತರ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ಹೆಗಡೆಯನ್ನು ಸೋಲಿಸಿದರು. ಮುಂದಿನ ಚುನಾವಣೆಯಲ್ಲಿ ಹೆಗಡೆ ವಿರುದ್ಧ ಆಳ್ವ ಸೋಲನುಭವಿಸಿದರು.
ರಾಜೀವ್ ಗಾಂಧಿ ನೇತೃತ್ವದ ಸರಕಾರದಲ್ಲಿ ಮಾರ್ಗರೇಟ್ ಆಳ್ವ ಸಂಸದೀಯ ವ್ಯವಹಾರ ಹಾಗೂ ಯುವಜನ ಕ್ರೀಡೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಖಾತೆಗಳ ರಾಜ್ಯ ಸಚಿವೆಯಾಗಿದ್ದರು.
ಹಲವು ಸಂಸದೀಯ ಸಮಿತಿಗಳ ಸದಸ್ಯೆಯಾಗಿ ಕೆಲಸ ಮಾಡಿದ್ದಾರೆ. ಮಾನವ ಸಂಪನ್ಮೂಲ ಖಾತೆಯಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಅವರು ವಹಿಸಿದ ಶ್ರಮ ಮೆಚ್ಚುಗೆಗೆ ಪಾತ್ರವಾಗಿದೆ.

ನಾಲ್ಕು ಬಾರಿ ರಾಜ್ಯಪಾಲೆ
ಮಾರ್ಗರೇಟ್ ಆಳ್ವ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ಧಾರೆ. 2009ರಲ್ಲಿ ಉತ್ತರಾಖಂಡ್, 2012ರಲ್ಲಿ ರಾಜಸ್ಥಾನ, 2014ರಲ್ಲಿ ಗುಜರಾತ್ ಮತ್ತು 2014ರಲ್ಲಿ ಗೋವಾ ರಾಜ್ಯಗಳ ಗವರ್ನರ್ ಆಗಿದ್ದರು. ಉತ್ತರಾಖಂಡ್ ರಾಜ್ಯಕ್ಕೆ ರಾಜ್ಯಪಾಲರಾದ ಮೊದಲ ಮಹಿಳೆ ಎಂಬ ದಾಖಲೆ ಅವರದ್ದಾಗಿದೆ.
ಇದೇ ವೇಳೆ, ಮಾರ್ಗರೇಟ್ ಆಳ್ವ 12 ವರ್ಷಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯನಿರ್ವಹಣೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲಿ ಅರ್ಹರಿಗೆ ಟಿಕೆಟ್ ಕೊಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದರು.
ಇನ್ನು, ಮಾರ್ಗರೇಟ್ ಆಳ್ವ ಆತ್ಮಚರಿತ್ರೆ ಬರೆಯುತ್ತಿದ್ದಾರೆಂಬ ಸುದ್ದಿ ಕೂಡ ಇದೆ. ಬಹುಶಃ ರಾಜಕೀಯದಿಂದ ಸಂಪೂರ್ಣವಾಗಿ ನೇಪಥ್ಯಕ್ಕೆ ಸರಿದ ಬಳಿಕ ಅವರ ಆತ್ಮಚರಿತ್ರೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
(ಒನ್ಇಂಡಿಯಾ ಸುದ್ದಿ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications