ಆಧಾರ್ ಕಾರ್ಡ್ ಎಲ್ಲಿ ಬಳಸಬೇಕು, ಎಲ್ಲಿ ಬಳಸಬಾರದು, ತಿಳಿದಿರಿ
ಬೆಂಗಳೂರು, ಜೂ. 1: ನಮ್ಮ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುವ ಆಧಾರ್ ಕಾರ್ಡ್ ಮತ್ತು ನಂಬರ್ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರುವುದು ಅಗತ್ಯ. ಮೊನ್ನೆ ಯುಐಡಿಎಐನ (UIDAI- Unique Identification Authority of India) ಬೆಂಗಳೂರು ಕಚೇರಿಯಿಂದ ಒಂದು ಸಲಹೆ ಪ್ರಕಟಗೊಂಡಿದ್ದು ಗಮನ ಸೆಳೆದಿತ್ತು. ಹೋಟೆಲ್ನಲ್ಲಾಗಲೀ ಚಿತ್ರಮಂದಿರಗಳಲ್ಲಾಗಲೀ ಅಥವಾ ಆಧಾರ್ ಬಳಸಲು ಪರವಾನಿಗೆ ಪಡೆಯದಿರುವ ಯಾರೇ ಆಗಲೀ ಆಧಾರ್ ಕಾರ್ಡ್ ನಕಲುಪ್ರತಿ ಅಥವಾ ನಂಬರ್ ಕೇಳಿದರೆ ಕೊಡಬೇಡಿ ಎಂದು ಅದು ಸಲಹೆ ಕೊಟ್ಟಿತ್ತು. ಇದು ಜನರನ್ನು ಆತಂಕ ಮತ್ತು ಗೊಂದಲಕ್ಕೆ ದೂಡಿದ್ದಂತೂ ಹೌದು.
ಅದಾದ ಬೆನ್ನಲ್ಲೇ ಯುಐಡಿಎಐ ತನ್ನ ಸಲಹೆಯನ್ನು ವಾಪಸ್ ಪಡೆಯಿತು. ಆಧಾರ್ ಸುರಕ್ಷಿತವಾಗಿದೆ, ಅದರೆ, ಜಾಗ್ರತೆಯಿಂದ ಬಳಸಿ ಎಂದು ಮತ್ತೊಮ್ಮೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ದಂತೂ ಹೌದು.
ಹಾಗಾದರೆ ಆಧಾರ್ ಕಾರ್ಡ್ ಅನ್ನು ಹುಷಾರಾಗಿ ಬಳಸಬೇಕೆಂದರೆ ಹೇಗೆ ಬಳಸಬೇಕು, ಎಲ್ಲೆಲ್ಲಿ ಬಳಸಬೇಕು, ಎಲ್ಲೆಲ್ಲಿ ಬಳಸಬಾರದು ಎಂಬುದು ಜನಸಾಮಾನ್ಯರಿಗೆ ಸ್ಪಷ್ಟ ಅರಿವು ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ನಮ್ಮದು ಕೆಲ ಮೂಲಭೂತವೆನಿಸುವ ಮತ್ತು ಉಪಯುಕ್ತವೆನಿಸುವ ಸಲಹೆಗಳು ಇಲ್ಲಿವೆ.

ಸಬ್ಸಿಡಿಗೆ ಬೇಕು ಆಧಾರ್
ಅಧಾರ್ ಕಾರ್ಡ್ ಸದ್ಯ ಹೆಚ್ಚು ಉಪಯೋಗ ಆಗುತ್ತಿರುವುದು ಸರಕಾರಿ ಪ್ರಾಯೋಜನೆಯ ಯೋಜನೆಗಳ ಅನುಷ್ಠಾನದಲ್ಲಿ. ಸರಕಾರದ ಸಬ್ಸಿಡಿ ಸ್ಕೀಮ್ನಲ್ಲಿ ವಂಚನೆಯನ್ನು, ಡೂಪ್ಲಿಕೇಟ್ ಎಂಟ್ರಿಗಳನ್ನು ತಡೆಯಲು ಆಧಾರ್ ಬಹಳ ಮಹತ್ವ ಪಾತ್ರ ವಹಿಸುತ್ತದೆ. ಹೀಗಾಗಿ, ನೀವು ಯಾವ ಬ್ಯಾಂಕಿನ ಖಾತೆಗೆ ಸರಕಾರದ ಸಬ್ಸಿಡಿ ಹಣ ಬರಬೇಕೆಂದುಕೊಂಡಿದ್ದೀರೋ ಆ ಬ್ಯಾಂಕಿನ ಖಾತೆ ನಿಮ್ಮ ಆಧಾರ್ ನಂಬರ್ ಜೋಡಿಸುವುದು ಕಡ್ಡಾಯ. ಅಂದರೆ ಜನಧನ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಕೊಡುವುದು ಕಾನೂನಿನ ಅಗತ್ಯವಾಗಿರುತ್ತದೆ.
ಅದು ಬಿಟ್ಟರೆ ಬೇರೆ ಬೇರೆ ಸಾಮಾನ್ಯ ಬ್ಯಾಂಕ್ ಅಕೌಂಟ್ಗಳಿಗೆ ನೀವು ಆಧಾರ್ ನಂಬರ್ ಕೊಡಲೇಬೇಕೆಂದಿಲ್ಲ. ನಿಮ್ಮಲ್ಲಿ ಬೇರೆ ಗುರುತು ದಾಖಲೆಗಳಿದ್ದರೆ, ಉದಾಹರಣೆಗೆ ವೋಟರ್ ಐಡಿ, ಪಾಸ್ಪೋರ್ಟ್ ಇತ್ಯಾದಿ ಇದ್ದರೆ ಅದನ್ನು ಕೊಡಬಹುದು.

ಮಾಸ್ಕ್ಡ್ ಆಧಾರ್
ನಿಮಗೆ ಆಧಾರ್ ಬಿಟ್ಟರೆ ಬೇರೆ ಗುರುತು ದಾಖಲೆಗಳು ಇಲ್ಲದ ಪಕ್ಷದಲ್ಲಿ ಮಾಸ್ಕ್ಡ್ ಆಧಾರ್ ಮತ್ತು ವರ್ಚುವಲ್ ಐಡಿಯನ್ನು ಸೃಷ್ಟಿಸಿ ಸಲ್ಲಿಸಬಹುದಾಗಿದೆ.
ಮಾಸ್ಕ್ಡ್ ಆಧಾರ್ (Masked Aadhaar) ಎಂದರೆ ಕೆಲ ಮಾಹಿತಿಯನ್ನು ಮಸುಕು ಮಾಡಿ ನೀಡಲಾಗುವ ಕಾರ್ಡ್. ಮಾಮೂಲಿಯ ಆಧಾರ್ ಕಾರ್ಡ್ನಲ್ಲಿ ಪೂರ್ಣ 12 ಅಂಕಿಗಳು ಗೋಚರವಾಗಿರುತ್ತವೆ. ಆದರೆ, ಮಾಸ್ಕ್ಡ್ ಆಧಾರ್ ಕಾರ್ಡ್ನಲ್ಲಿ ಕೊನೆಯ ನಾಲ್ಕಂಕಿಗಳು ಮಾತ್ರ ಕಾಣುತ್ತವೆ. ಉಳಿದ ಅಂಕಿಗಳನ್ನು ಮಸುಕು ಮಾಡಲಾಗಿರುತ್ತದೆ.
ನೀವು ಮೈ ಆಧಾರ್ ವೆಬ್ಸೈಟ್ https://myaadhaar.uidai.gov.in ಗೆ ಹೋಗಿ ಆನ್ಲೈನ್ನಲ್ಲೇ ಮಾಸ್ಕ್ಡ್ ಆಧಾರ್ ಕಾರ್ಡ್ ಪಡೆಯಬಹುದು.

ವರ್ಚುಯಲ್ ಐಡಿ
ಮಾಸ್ಕ್ಡ್ ಆಧಾರ್ನಂತೆ ವರ್ಚುವಲ್ ಐಡಿಯನ್ನೂ (Virtual ID) ಆಧಾರ್ ನಂಬರ್ನಂತೆ ಬಳಸಬಹುದು. ಇದನ್ನೂ ನೀವು ಮೈ ಆಧಾರ್ ವೆಬ್ಸೈಟ್ನಲ್ಲಿ ಪಡೆಯಬಹುದು. ಈ ತಾಣದ ಹೋಂ ಪೇಜ್ನಲ್ಲೇ ವಿಐಡಿ ಜನರೇಟರ್ ಕಾಣುತ್ತದೆ. ಅದನ್ನು ಕ್ಲಿಕ್ ಮಾಡಿದರೆ ನಿಮಗೆ ಮುಂದಿನ ಮಾರ್ಗದರ್ಶನ ಸಿಗುತ್ತದೆ. ಅಥವಾ 1947 ನಂಬರ್ಗೆ ನೀವು ಜಿವಿಐಡಿ ಸ್ಪೇಸ್ ಮತ್ತು ನಿಮ್ಮ ಆಧಾರ್ ನಂಬರ್ನ ಕೊನೆಯ ನಾಲ್ಕು ಅಂಕಿಗಳನ್ನು ಟೈಪ್ ಮಾಡಿ ಮೆಸೇಜ್ ಕಳುಹಿಸಬಹುದು. ಉದಾಹರಣೆಗೆ "GVID 6789" ಎಂದು ಟೈಪ್ ಮಾಡಿ 1947 ನಂಬರ್ಗೆ ಎಸ್ಸೆಮ್ಮೆಸ್ ಕಳುಹಿಸಬಹುದು. ಇಲ್ಲಿ 6789 ನಿಮ್ಮ ಆಧಾರ್ ನಂಬರ್ನ ಕೊನೆಯ ನಾಲ್ಕು ಅಂಕಿಗಳಾಗಿರುತ್ತವೆ. ಆಗ ನಿಮಗೆ ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ 16 ಅಂಕಿಗಳ ವರ್ಚುಯಲ್ ಐಡಿ ನಂಬರ್ ಸಿಗುತ್ತದೆ. ಇದು ತಾತ್ಕಾಲಿಕ ಐಡಿಯಾದರೂ ನಿಮ್ಮ ಮೂಲ ಆಧಾರ್ ನಂಬರ್ ಬದಲು ಇದನ್ನೇ ಅಧಿಕೃತ ದಾಖಲೆಯಾಗಿ ನೀಡಬಹುದು.

ಆಧಾರ್ ದುರ್ಬಳಕೆ ಆಗಲ್ಲ ಎನ್ನುತ್ತೆ ಯುಐಡಿಎಐ
ಆಧಾರ್ ಕಾರ್ಡ್ ಹಾಗೂ ಅದರಲ್ಲಿರುವ ಎಲ್ಲಾ ಮಾಹಿತಿ ಸಂಪೂರ್ಣ ಸುರಕ್ಷಿತ. ಇದರಲ್ಲಿರುವ ಆಧಾರ್ ನಂಬರ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಯುಐಡಿಎಐ ಹೇಳುತ್ತದೆ. ಆಧಾರ್ ಕಾರ್ಡ್ನಲ್ಲಿ ಸೂಕ್ಷ್ಮ ಸಂಗತಿ ಇರುವುದು ಫಿಂಗರ್ ಪ್ರಿಂಟ್ನಂತಹ ಬಯೋಮೆಟ್ರಿಕ್ ದತ್ತಾಂಶ.
ಕೆಲವೇ ನಿರ್ದಿಷ್ಟ ಸಂಸ್ಥೆಗಳಿಗೆ ಆಧಾರ್ ಕಾರ್ಡ್ ಸರ್ವರ್ನ ಪ್ರವೇಶ ಅವಕಾಶ ಕೊಡಲಾಗಿದೆ. ಸ್ವಲ್ಪವೂ ದುರ್ಬಳಕೆ ಆಗದ ರೀತಿಯಲ್ಲಿ ಭದ್ರತಾ ಎಳೆಗಳು ಆಧಾರ್ಗೆ ಸುರಕ್ಷತೆ ಒದಗಿಸಿವೆ ಎನ್ನಲಾಗಿದೆ.
ಇಲ್ಲಿ ಆಧಾರ್ ಜೊತೆ ಜೋಡಿಸಲಾಗಿರುವ ಮೊಬೈಲ್ ನಂಬರ್ ಬಹಳ ಮುಖ್ಯ. ಆಧಾರ್ ಕಾರ್ಡ್ನಲ್ಲಿ ಏನೇ ಬದಲಾವಣೆ ಮಾಡಬೇಕೆಂದರೂ ಮೊಬೈಲ್ ನಂಬರ್ಗೆ ಬರುವ ಒಟಿಪಿ ಸಂದೇಶದ ಮೂಲಕವೇ ಆಗುವುದು.
ಆಧಾರ್ ಸಂಸ್ಥೆ ಹೇಳುವ ಪ್ರಕಾರ ದಿನವೂ ಮೂರು ಕೋಟಿಯಷ್ಟು ಆಧಾರ್ ವೆರಿಫಿಕೇಶನ್ಗಳು ನಡೆಯುತ್ತೆ. ಆದರೆ, ಒಮ್ಮೆಯೂ ಕೂಡ ದುರ್ಬಳಕೆ ಆದ ಬಗ್ಗೆ ದೂರು ಬಂದಿಲ್ಲವಂತೆ.
(ಒನ್ಇಂಡಿಯಾ ಸುದ್ದಿ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications