ಜಮ್ಮು ಮತ್ತು ಕಾಶ್ಮೀರ ನಿವಾಸಿಗಳ ವಿಶೇಷಾಧಿಕಾರ ಕಲಂ 35ಎ ಎಂದರೇನು?
Recommended Video

ದೇಶದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳ ಅಧಿಕಾರ ವ್ಯಾಖ್ಯೆ, ಜವಾಬ್ದಾರಿಯನ್ನು ತಿಳಿಸುವುದೇ ಸಂವಿಧಾನ. ರಾಜ್ಯ ಸರ್ಕಾರ ಹಾಗು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರ ಪರಮಾವಧಿ ಸೇರಿದಂತೆ ಸಂವಿಧಾನ ತಿದ್ದುಪಡಿ ಮೂಲಕ ಅನುಚ್ಛೇದಗಳನ್ನು ಸೇರಿಸಬಹುದಾಗಿದೆ. ಪ್ರಸ್ತುತ ಕಣಿವೆ ರಾಜ್ಯ ಜಮ್ಮ ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ, ವಿಶೇಷ ಅಧಿಕಾರಿ ಕಲಂ 35ಎ ಜಾರಿಯಲ್ಲಿದೆ.
ಕಲಂ 35-ಎ ಸಂವಿಧಾನದಲ್ಲಿ ರಾಷ್ಟ್ರಪತಿಗಳ ಆಳ್ವಿಕೆಯ ನಿಯಮದಂತೆ ಸೇರಿ ಹೋಗಿದೆ. ಈ ಕಲಂ ಅನ್ವಯ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಲ್ಲಿನ ಖಾಯಂ ನಿವಾಸಿಗಳಿಗೆ ಕೆಲವು ಹಕ್ಕು, ವಿಶೇಷ ಸವಲತ್ತುಗಳು ಸಿಗಲಿವೆ.
ಕಣಿವೆ ರಾಜ್ಯದಲ್ಲಿ ಸರ್ಕಾರಿ ನೇಮಕಾತಿ, ಸ್ಥಿರಾಸ್ತಿ ಖರೀದಿ, ಸರ್ಕಾರಿ ಯೋಜನೆಗಳ ಸೌಲಭ್ಯ, ಸಾರ್ವಜನಿಕ ಕಲ್ಯಾಣಭಿವೃದ್ಧಿ ಯೋಜನೆಗೆ ಲಾಭ ಖಾಯಂ ಆಗಿ ನೆಲೆಸಿರುವವರಿಗೆ ಸಿಕ್ಕಿತು. ಹೊರ ರಾಜ್ಯದಿಂದ ಬಂದು ನೆಲೆಸಿದವರಿಗೆ ಈ ಲಾಭ ಸಿಗುತ್ತಿರಲಿಲ್ಲ.

ಕಣಿವೆ ರಾಜ್ಯದಲ್ಲಿನ ಮಹಿಳೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ಹೊಂದಿಲ್ಲದ ಪುರುಷನನ್ನು ವಿವಾಹವಾದರೆ ದಂಪತಿಯ ಮಕ್ಕಳಿಗೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ಸಿಗುವುದಿಲ್ಲ. ಮಹಿಳೆಯ ಹೆಸರಿನಲ್ಲಿ ಆಸ್ತಿ ಇದ್ದರೆ ಅದನ್ನು ಮಕ್ಕಳಿಗೆ ನೀಡಲು ಬರುವುದಿಲ್ಲ. ಕಣಿವೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೂರಾರು ಜನರು ತಲೆಮಾರುಗಳಿಂದ ವಾಸವಾಗಿದ್ದಾರೆ. ಕಲಂ 35-ಎ ನಿಂದಾಗಿ ಅವರ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತಿದೆ ಎಂಬುದು ಆರೋಪವಾಗಿದೆ.

ವಿವಾಹ, ಆಸ್ತಿ ಖರೀದಿ, ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ವಿಚಾರದಲ್ಲಿ ತಾರತಮ್ಯವಿದೆ. ಆದ್ದರಿಂದ, ಕಲಂ 35-ಎ ಸಿಂಧುತ್ವ ಪ್ರಶ್ನಿಸಿ, ಕಲಂ 35-ಎ ಅನ್ವಯ ಕಣಿವೆ ರಾಜ್ಯದಲ್ಲಿನ ಕೆಲವು ಜನರಿಗೆ ಆ ಹಕ್ಕುಗಳು ಸಿಗುತ್ತಿಲ್ಲ ಎಂದು ಆರೋಪಿಸಿದ ಸುಪ್ರೀಂಕೋರ್ಟಿನಲ್ಲಿ ಸಾರ್ವಜಿನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಪ್ರಕರಣದ ವಿಚಾರಣೆ ಹಲವು ವರ್ಷಗಳಿಂದ ನಡೆಯುತ್ತಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications