ಜಮ್ಮು ಮತ್ತು ಕಾಶ್ಮೀರ ನಿವಾಸಿಗಳ ವಿಶೇಷಾಧಿಕಾರ ಕಲಂ 35ಎ ಎಂದರೇನು?
Recommended Video

ದೇಶದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳ ಅಧಿಕಾರ ವ್ಯಾಖ್ಯೆ, ಜವಾಬ್ದಾರಿಯನ್ನು ತಿಳಿಸುವುದೇ ಸಂವಿಧಾನ. ರಾಜ್ಯ ಸರ್ಕಾರ ಹಾಗು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರ ಪರಮಾವಧಿ ಸೇರಿದಂತೆ ಸಂವಿಧಾನ ತಿದ್ದುಪಡಿ ಮೂಲಕ ಅನುಚ್ಛೇದಗಳನ್ನು ಸೇರಿಸಬಹುದಾಗಿದೆ. ಪ್ರಸ್ತುತ ಕಣಿವೆ ರಾಜ್ಯ ಜಮ್ಮ ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ, ವಿಶೇಷ ಅಧಿಕಾರಿ ಕಲಂ 35ಎ ಜಾರಿಯಲ್ಲಿದೆ.
ಕಲಂ 35-ಎ ಸಂವಿಧಾನದಲ್ಲಿ ರಾಷ್ಟ್ರಪತಿಗಳ ಆಳ್ವಿಕೆಯ ನಿಯಮದಂತೆ ಸೇರಿ ಹೋಗಿದೆ. ಈ ಕಲಂ ಅನ್ವಯ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಲ್ಲಿನ ಖಾಯಂ ನಿವಾಸಿಗಳಿಗೆ ಕೆಲವು ಹಕ್ಕು, ವಿಶೇಷ ಸವಲತ್ತುಗಳು ಸಿಗಲಿವೆ.
ಕಣಿವೆ ರಾಜ್ಯದಲ್ಲಿ ಸರ್ಕಾರಿ ನೇಮಕಾತಿ, ಸ್ಥಿರಾಸ್ತಿ ಖರೀದಿ, ಸರ್ಕಾರಿ ಯೋಜನೆಗಳ ಸೌಲಭ್ಯ, ಸಾರ್ವಜನಿಕ ಕಲ್ಯಾಣಭಿವೃದ್ಧಿ ಯೋಜನೆಗೆ ಲಾಭ ಖಾಯಂ ಆಗಿ ನೆಲೆಸಿರುವವರಿಗೆ ಸಿಕ್ಕಿತು. ಹೊರ ರಾಜ್ಯದಿಂದ ಬಂದು ನೆಲೆಸಿದವರಿಗೆ ಈ ಲಾಭ ಸಿಗುತ್ತಿರಲಿಲ್ಲ.

ಕಣಿವೆ ರಾಜ್ಯದಲ್ಲಿನ ಮಹಿಳೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ಹೊಂದಿಲ್ಲದ ಪುರುಷನನ್ನು ವಿವಾಹವಾದರೆ ದಂಪತಿಯ ಮಕ್ಕಳಿಗೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ಸಿಗುವುದಿಲ್ಲ. ಮಹಿಳೆಯ ಹೆಸರಿನಲ್ಲಿ ಆಸ್ತಿ ಇದ್ದರೆ ಅದನ್ನು ಮಕ್ಕಳಿಗೆ ನೀಡಲು ಬರುವುದಿಲ್ಲ. ಕಣಿವೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೂರಾರು ಜನರು ತಲೆಮಾರುಗಳಿಂದ ವಾಸವಾಗಿದ್ದಾರೆ. ಕಲಂ 35-ಎ ನಿಂದಾಗಿ ಅವರ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತಿದೆ ಎಂಬುದು ಆರೋಪವಾಗಿದೆ.

ವಿವಾಹ, ಆಸ್ತಿ ಖರೀದಿ, ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ವಿಚಾರದಲ್ಲಿ ತಾರತಮ್ಯವಿದೆ. ಆದ್ದರಿಂದ, ಕಲಂ 35-ಎ ಸಿಂಧುತ್ವ ಪ್ರಶ್ನಿಸಿ, ಕಲಂ 35-ಎ ಅನ್ವಯ ಕಣಿವೆ ರಾಜ್ಯದಲ್ಲಿನ ಕೆಲವು ಜನರಿಗೆ ಆ ಹಕ್ಕುಗಳು ಸಿಗುತ್ತಿಲ್ಲ ಎಂದು ಆರೋಪಿಸಿದ ಸುಪ್ರೀಂಕೋರ್ಟಿನಲ್ಲಿ ಸಾರ್ವಜಿನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಪ್ರಕರಣದ ವಿಚಾರಣೆ ಹಲವು ವರ್ಷಗಳಿಂದ ನಡೆಯುತ್ತಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications