Lata Mangeshkar Birthday- ಲತಾ ಮಂಗೇಶ್ಕರ್ ಗೌರವಾರ್ಥ ಅಯೋಧ್ಯೆಯಲ್ಲಿ 40 ಅಡಿ ಬೃಹತ್ ವೀಣೆ ಸ್ಥಾಪನೆ
ನವದೆಹಲಿ, ಸೆ. 28: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ 94ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅವರ ಗೌರವಾರ್ಥವಾಗಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ 40 ಅಡಿ ಎತ್ತರದ ವೀಣೆಯ ಉದ್ಘಾಟನೆ ಮಾಡಲಾಗುತ್ತಿದೆ.
ಅಯೋಧ್ಯೆಯ ಪ್ರಮುಖ ವೃತ್ತವೊಂದಕ್ಕೆ ಲತಾ ಮಂಗೇಶ್ಕರ್ ಹೆಸರಿಡಲಾಗಿದೆ. ಅಲ್ಲಿಯೇ ಈ ಬೃಹತ್ ವೀಣೆಯ ಆಕೃತಿಯನ್ನು ನಿರ್ಮಿಸಲಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವೀಣೆಯ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಸೇರಿದಂತೆ ಹಲವು ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಉದ್ಘಾಟನಾ ಕಾರ್ಯಕ್ರಮದ ವರ್ಚುವಲ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಗಳು ಈ ಸಂದರ್ಭದಲ್ಲಿ ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

"ಲತಾ ದೀದಿ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. ಅವರ ಬಗ್ಗೆ ನೆನಪು ಬಹಳ ಇದೆ. ಹಲವು ಬಾರಿ ನಡೆದ ಸಂವಾದದಲ್ಲಿ ಬಹಳ ಅಕ್ಕರೆ ತೋರಿದ್ದಾರೆ. ಇವತ್ತು ಅಯೋಧ್ಯೆಯಲ್ಲಿ ವೃತ್ತವೊಂದಕ್ಕೆ ಅವರ ಹೆಸರು ಇಡಲಾಗುತ್ತಿರುವುದು ಕಂಡು ಸಂತೋಷವಾಯಿತು. ಭಾರತದ ಅತ್ಯಂತ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ನಿಲ್ಲುವ ಅವರಿಗೆ ಸಿಗಬೇಕಿರುವ ಗೌರವ ಅದು" ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟ್ನಲ್ಲಿ ಬರೆದಿದ್ದಾರೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications