BJP Ruled States : 4 ರಾಜ್ಯಗಳ ಗೆಲುವಿನ ನಂತರ ಬಿಜೆಪಿ ಆಡಳಿತವಿರುವ ರಾಜ್ಯಗಳು ಎಷ್ಟು?
ಲಕ್ನೋ, ಮಾರ್ಚ್ 11: ಕಾಂಗ್ರೆಸ್ ಮುಕ್ತ ಭಾರತ ಕನಸು ಹೊತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೆಜ್ಜೆ ಗುರುತನ್ನು ಇನ್ನಷ್ಟು ಹೆಚ್ಚಿಸಿಕೊಂಡಿದೆ. ಕಳೆದ ಎರಡು ತಿಂಗಳುಗಳ ಕಾಲ ನಡೆದ ಐದು ರಾಜ್ಯಗಳ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ಮಿಕ್ಕ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗಳಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದೆ.
2019ರಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿತ್ತು. 2014ರಿಂದ ಇಲ್ಲಿ ತನಕ ಭಾರತದ ಶೇ 71ಕ್ಕೂ ಅಧಿಕ ಭಾಗದಲ್ಲಿ ಕೇಸರಿ ಪತಾಕೆ ಹಾರಿಸಿದ್ದ ಬಿಜೆಪಿ ಈಗ ಶೇ 40ಕ್ಕೆ ಕುಸಿದಿತ್ತು. ಆದರೆ, ನಂತರ ಗೆಲುವಿನ ಹಳಿಗೆ ಮರಳಿದ ಮೋದಿ- ಅಮಿತ್ ಶಾ ಜೋಡಿ ಈಗ ಐದು ರಾಜ್ಯಗಳಲ್ಲಿ ನಾಲ್ಕು ರಾಜ್ಯಗಳನ್ನು ಗೆದ್ದು ಬೀಗಿದೆ. ಇಂದಿರಾಗಾಂಧಿಯ ನಂತರ ಮೋದಿ ಅವರೇ ಅತಿ ಹೆಚ್ಚು ರಾಜ್ಯಗಳಲ್ಲಿ ಆಡಳಿತವಿರುವ ಪಕ್ಷದ ಪ್ರಧಾನಿ ಎನಿಸಿಕೊಂಡಿದ್ದಾರೆ.
2014ಕ್ಕೂ ಮುನ್ನ ಬಿಜೆಪಿ 7 ರಾಜ್ಯ 2014ರಲ್ಲಿ ಬಿಜೆಪಿ 7 ರಾಜ್ಯ, ಕಾಂಗ್ರೆಸ್ 13 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಗೋವಾ ಹಾಗೂ ಅರುಣಾಚಲಪ್ರದೇಶ ಪ್ರಮುಖವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 2016ರಲ್ಲಿ 15, 2017ರಲ್ಲಿ 19, 2018ರಲ್ಲಿ ಬಿಜೆಪಿ ಒಟ್ಟು 21ರಾಜ್ಯಕ್ಕೆ ತನ್ನ ಆಡಳಿತವನ್ನು ವಿಸ್ತರಿಸಿತು. ಕಾಂಗ್ರೆಸ್ 3 ರಾಜ್ಯಕ್ಕೆ ಸೀಮಿತವಾಯಿತು.

ಈಶಾನ್ಯ ರಾಜ್ಯಗಳಲ್ಲೂ ಕೇಸರಿ ಪತಾಕೆ 2018ರಲ್ಲಿ ಈಶಾನ್ಯ ರಾಜ್ಯಗಳಲ್ಲೂ ಕೇಸರಿ ಪತಾಕೆ ಹಾರಿಸಿದ ಬಿಜೆಪಿಗೆ ಪಂಚರಾಜ್ಯಗಳ ಚುನಾವಣೆ ಹೊಡೆತ ನೀಡಿತು. 2018ರಲ್ಲಿ ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ, ನಾಗಾಲ್ಯಾಂಡ್ ನಲ್ಲಿ ಎನ್ಡಿಪಿಪಿ, ಕರ್ನಾಟಕದಲ್ಲಿ ಅಲ್ಪಾವಧಿ ಸರ್ಕಾರ, ಮಿಜೋರಾಂನಲ್ಲಿ ಎಂಎನ್ ಎಫ್ ಅಧಿಕಾರಕ್ಕೆ ಬಂದರೆ, ಛತ್ತೀಸ್ ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕಾಂಗ್ರೆಸ್ ಹಾಗೂ ತೆಲಂಗಾಣದಲ್ಲಿ ತೆಲಂಗಾಣಾ ರಾಷ್ಟ್ರ ಸಮಿತಿ ಅಧಿಕಾರಕ್ಕೆ ಬಂದಿವೆ.

2019ರಲ್ಲಿ ಬಿಜೆಪಿಗೆ ಮಿಶ್ರಫಲ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರು. ಕರ್ನಾಟಕದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನ ನಂತರ ಯಡಿಯೂರಪ್ಪ ಮತ್ತೆ ಅಧಿಕಾರ ಹಿಡಿದರು. ಆದರೆ, ಈಗ ಆರೆಸ್ಸೆಸ್ ಕೇಂದ್ರ ಕಚೇರಿ ಹೊಂದಿರುವ ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ಸಿಪಿ ನಡುವಿನ ತಂತ್ರಗಾರಿಕೆ ಮುಂದೆ ಬಿಜೆಪಿ ಹಿಂದೆ ಬಿದ್ದು ಅಧಿಕಾರ ಸಿಕ್ಕರೂ ಉಳಿಸಿಕೊಳ್ಳಲಾಗದೆ ವಿಪಕ್ಷ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ. ಸದ್ಯ ಭಾರತ ಭೂಪಟದಲ್ಲಿ ಕೇಸರಿ ಪತಾಕೆ ಶೇ 40 ಭಾಗ ಮಾತ್ರ ತುಂಬಿತ್ತು.

ಈಗ ರಾಜಸ್ಥಾನ ಸೇರಿದಂತೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ 5 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಪಂಜಾಬ್ ಗೆದ್ದು ಎಎಪಿ 2 ರಾಜ್ಯಗಳಲ್ಲಿ ತನ್ನ ಅಧಿಕಾರ ಹೊಂದಿದೆ. ಬಿಜೆಪಿ ಹಾಗೂ ಬಿಜೆಪಿ ಮೈತ್ರಿಕೂಟ 18 ರಾಜ್ಯಗಳಲ್ಲಿ ತನ್ನ ಅಧಿಕಾರ ಸ್ಥಾಪಿಸಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾನ್ಯತೆ ಪಡೆದುಕೊಂಡರೂ ರಾಷ್ಟ್ರಪತಿಗಳ ಆಡಳಿತ ಹೊಂದಿದ್ದು, ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿದೆ. (ಮಾಹಿತಿ ಕೃಪೆ: ವಿಕಿಪೀಡಿಯಾ)
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications