ವಯೋವೃದ್ಧರು ಆಹಾರ ಸೇವಿಸುವ ಮುನ್ನ ಯೋಚಿಸಿ!
ವಯಸ್ಸಾದವರು ಆಹಾರವನ್ನು ಸೇವಿಸುವಾಗ ಬಾಯಿ ರುಚಿಗೆ ಆದ್ಯತೆ ನೀಡದೆ ಆರೋಗ್ಯದ ದೃಷ್ಠಿಯಿಂದ ದೇಹಕ್ಕೆ ಹೊಂದುವಂತಹ ಆಹಾರವನ್ನು ಸೇವಿಸುವುದು ಅತಿ ಮುಖ್ಯವಾಗಿದೆ. ನಾವೆಲ್ಲರೂ ಆರೋಗ್ಯವಂತರಾಗಿರಬೇಕೆಂದು ಬಯಸುತ್ತೇವೆ. ಹೀಗಿರುವಾಗ ವಯಸ್ಸಿಗೆ ತಕ್ಕಂತೆ ಆಹಾರ ಕ್ರಮಗಳಲ್ಲಿ ಒಂದಷ್ಟು ಮಾರ್ಪಾಡುಗಳನ್ನು ಮಾಡಿಕೊಳ್ಳದಿದ್ದರೆ ಆರೋಗ್ಯದ ಸಮಸ್ಯೆಗಳು ತಪ್ಪಿದಲ್ಲ.
ಕೆಲವೊಂದು ತಿನಿಸು ನಮಗೆ ಇಷ್ಟವಾದರೂ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಕೇವಲ ಬಾಯಿ ಚಪಲಕ್ಕೆ ಸಿಕ್ಕಿದನೆಲ್ಲ ತಿಂದು ಆರೋಗ್ಯದ ಸಮಸ್ಯೆಯನ್ನು ಎಳೆದುಕೊಳ್ಳುವುದಕ್ಕಿಂತ ನಮ್ಮ ದೇಹಕ್ಕೆ ಸರಿ ಹೊಂದುವ ಆಹಾರವನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಒಳ್ಳೆಯದಾಗಿದೆ.
ಈಗೀಗ ನಾವು ತಿನ್ನುವ ಆಹಾರಗಳು ನಾಲಿಗೆ ಚಪ್ಪರಿಸಿ ತಿನ್ನುವಂತಹ ರುಚಿಯನ್ನು ಹೊಂದಿರುತ್ತವೆಯಾದರೂ ಅವು ಆರೋಗ್ಯಕ್ಕೆ ಹೊಂದುವುದಿಲ್ಲ. ಹೀಗಾಗಿ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ವಯಸ್ಸಾದವರಂತು ತಮ್ಮ ವಯಸ್ಸಿಗೆ ತಕ್ಕಂತೆ ಜೀರ್ಣ ಶಕ್ತಿಯಿರುವಂತಹ ಆಹಾರವನ್ನು ಸೇವಿಸುವುದು ಒಳಿತು.
ಕಾರಣ ವಯಸ್ಸಾದಂತೆಲ್ಲ ಹಸಿವು ಮತ್ತು ಜೀರ್ಣಶಕ್ತಿ ಕಡಿಮೆಯಾಗುವುದರಿಂದ ಪ್ರೊಟೀನ್, ಕೊಬ್ಬು, ಖನಿಜಾಂಶ ಹಾಗೂ ಜೀವಸತ್ವಗಳುಳ್ಳ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಈ ಆಹಾರದ ಪ್ರಮಾಣವು ದಿನಕ್ಕೆ 300 ರಿಂದ 330 ಗ್ರಾಂ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ. ವಯಸ್ಸಾದವರು ತಮ್ಮ ಜೀವಿತದ ಕೊನೆಯ ಕಾಲವನ್ನು ಆರೋಗ್ಯವಾಗಿ ಕಳೆಯಬೇಕಾದರೆ ನಿತ್ಯದ ಆಹಾರ ಕ್ರಮದಲ್ಲಿ ಏನೇನು ಅಳವಡಿಸಿಕೊಳ್ಳಬೇಕು ಮತ್ತು ಎಂತಹ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ವೈದ್ಯರು ಒಂದಷ್ಟು ಸಲಹೆಗಳನ್ನು ನೀಡುತ್ತಾರೆ.

ಆಹಾರ ಪದಾರ್ಥಗಳ ಸೇವನೆ
ಅದರಂತೆ ನಡೆದುಕೊಂಡದ್ದೇ ಆದರೆ ಆರೋಗ್ಯಯುತ ಜೀವನ ನಡೆಸಲು ಸಾಧ್ಯವಾಗುವುದರಲ್ಲಿ ಎರಡು ಮಾತಿಲ್ಲ. ಸಾಮಾನ್ಯವಾಗಿ ದಿನಕ್ಕೆ ಮೂರು ಬಾರಿ ಊಟ ಮಾಡುತ್ತೇವೆ. ಆದರೆ ವಯಸ್ಸಾದವರು ಕಡಿಮೆ ಪ್ರಮಾಣದಲ್ಲಿ ಹಲವು ಬಾರಿ ಊಟ ಮಾಡುವುದು ಒಳ್ಳೆಯದು. ಆಹಾರದಲ್ಲಿ ಅಕ್ಕಿ, ರಾಗಿ, ಗೋಧಿ, ಜೋಳ ಮೊದಲಾದ ಧಾನ್ಯಗಳ ಬಳಕೆ ಒಳ್ಳೆಯದು. ನಿತ್ಯ ಉಪಯೋಗಿಸುವ ಆಹಾರದಲ್ಲಿ ಪ್ರೊಟೀನ್ ಯುಕ್ತ ಬೇಳೆಕಾಳುಗಳು ಇರುವಂತೆ ನೋಡಿಕೊಳ್ಳಬೇಕು. ಇವುಗಳನ್ನು ಕನಿಷ್ಟ 60 ಗ್ರಾಂನಷ್ಟಾದರೂ ಸೇವಿಸಬೇಕು. ಇದರೊಂದಿಗೆ ದಿನಕ್ಕೆ ಕನಿಷ್ಟ 2 ರಿಂದ 3 ಲೋಟದಷ್ಟು ಹಾಲು ಅಥವಾ ಮೊಸರು ಸೇವಿಸಬೇಕು. ಕೇವಲ ಬಾಯಿ ಚಪಲಕ್ಕೆ ಸಿಕ್ಕಿದನೆಲ್ಲ ತಿಂದು ಆರೋಗ್ಯ ಸಮಸ್ಯೆ ತಂದುದಕೊಳ್ಳಬೇಡಿ.

ಪೌಷ್ಠಿಕಾಂಶಯುಕ್ತ ಆಹಾರ
ಮೊಳಕೆ ಕಾಳುಗಳು, ಮೊಟ್ಟೆಯ ಬಿಳಿಭಾಗ, ಮೀನು, ಜತೆಗೆ ಸೊಪ್ಪು ಸೇರಿದಂತೆ ಗೆಡ್ಡೆಗೆಣಸು ತರಕಾರಿ ಸೇವಿಸುವುದು ಅಗತ್ಯ. ಮಲವಿಸರ್ಜನೆ ಸಲೀಸಾಗಿ ನಡೆಯಲು ಅನುಕೂಲವಾಗುವಂತೆ ನಾರಿನ ಅಂಶವಿರುವ ಹಣ್ಣು, ತರಕಾರಿ, ಉಂಡೆಕಾಳುಗಳನ್ನು ಆಹಾರದಲ್ಲಿ ಸೇರಿಸಬೇಕು. ನಾರಿನ ಅಂಶವು ರಕ್ತದ ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೊಡ್ಡ ಕರುಳಿನ ಕ್ಯಾನ್ಸರನ್ನು ತಡೆಗಟ್ಟುವ ಗುಣವನ್ನು ಹೊಂದಿದೆ. ಇನ್ನು ಹಲ್ಲುಗಳು ಇಲ್ಲದಿದ್ದಲ್ಲಿ ಮೆದುವಾದ ಮತ್ತು ಚೆನ್ನಾಗಿ ಬೆಂದಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಜತೆಗೆ ಸುಲಭವಾಗಿ ಜೀರ್ಣವಾಗುವಂತಹ ಆಹಾರಪದಾರ್ಥಗಳಿಗೆ ಆದ್ಯತೆ ನೀಡಬೇಕಾಗುತ್ತದೆ.

ಕ್ಯಾಲ್ಸಿಯಂ ಯುಕ್ತ ಆಹಾರ
ವಯಸ್ಸಾದಂತೆ ಮೂಳೆಗಳ ಸವೆತ ಮತ್ತು ದೌರ್ಬಲ್ಯ ಕಾಣಿಸಿಕೊಳ್ಳುತ್ತದೆ. ಇದು ಕ್ಯಾಲ್ಸಿಯಂನಿಂದ ಆಗುವ ತೊಂದರೆಯಾಗಿದ್ದು, ಕ್ಯಾಲ್ಸಿಯಂ ಅಂಶ ಹೆಚ್ಚಾಗಲು ಹಾಲಿನ ಉತ್ಪನ್ನ, ರಾಗಿ, ಮೀನು, ಸೊಪ್ಪುಗಳನ್ನು ಸೇವಿಸುವುದು ಉತ್ತಮ. ನಿಯಮಿತ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದ್ರವ ಆಹಾರಗಳನ್ನು ಸೇವಿಸಬೇಕು. ಇನ್ನು ಆರೋಗ್ಯದ ದೃಷ್ಠಿಯಿಂದ ಕೆಲವೊಂದು ಆಹಾರ ಪದಾರ್ಥದ ಸೇವನೆ ಕಡಿಮೆ ಮಾಡುವುದು, ಇನ್ನು ಕೆಲವೊಂದನ್ನು ವರ್ಜಿಸುವುದು ಕೂಡ ಅನಿವಾರ್ಯ. ಕೊಬ್ಬು, ಎಣ್ಣೆ ಮತ್ತು ಸಕ್ಕರೆ ಸೇವನೆ ಕಡಿಮೆ ಮಾಡಬೇಕು ಕಾರಣ ಇವುಗಳಿಂದ ಅಜೀರ್ಣ ಸಮಸ್ಯೆ ಉದ್ಭವಿಸುವ ಸಾಧ್ಯತೆ ಹೆಚ್ಚ್ಚಿರುತ್ತದೆ.

ಉಪ್ಪಿನ ಬಳಕೆ ಕಡಿಮೆ
ನಾರಿನ ಅಂಶವಿಲ್ಲದ ಸಂಸ್ಕರಿಸಿದ ಆಹಾರ ಪದಾರ್ಥ, ಮೈದಾದಿಂದ ತಯಾರಿಸಿದ ಬ್ರೆಡ್, ಬನ್, ನೂಡಲ್ಸ್, ನಾನ್ ಮುಂತಾದ ಆಹಾರಗಳನ್ನು ಸೇವಿಸಬೇಡಿ. ಮಸಾಲೆ ಪದಾರ್ಥಗಳನ್ನು ಕಡಿಮೆ ಮಾಡಿ, ಮದ್ಯಪಾನ, ಧೂಮಪಾನವನ್ನು ತ್ಯಜಿಸಿ, ಕೊಲೆಸ್ಟ್ರಾಲ್ ಹೆಚ್ಚಿಸುವ ಬೆಣ್ಣೆ, ತುಪ್ಪ, ವನಸ್ಪತಿ, ಬಜ್ಜಿ, ಬೋಂಡ, ಪೂರಿ, ಹಪ್ಪಳ ಮೊದಲಾದ ಎಣ್ಣೆಯಲ್ಲಿ ಕರಿದ ಪದಾರ್ಥಗಳ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ. ಅತಿಯಾದ ಕಾಫಿ, ಟೀ ಸೇವನೆ ಒಳ್ಳೆಯದಲ್ಲ. ಆಹಾರ ಸೇವನೆಯಲ್ಲಿ ಉಪ್ಪಿನ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡಿ.
ಕಡಿಮೆ ಆಹಾರ ಹೆಚ್ಚು ಬಾರಿ ಸೇವಿಸಿ; ಅನಗತ್ಯ ಉಪವಾಸ ಮಾಡುವುದನ್ನು ಬಿಟ್ಟು ಬಿಡಿ. ಜೀರ್ಣಶಕ್ತಿ ಉಂಟಾಗಲು ಕಡಿಮೆ ಆಹಾರವನ್ನು ಹೆಚ್ಚು ಬಾರಿ ತಿನ್ನುವುದನ್ನು ರೂಢಿಸಿಕೊಳ್ಳಿ ಇವುಗಳನ್ನೆಲ್ಲ ತಮ್ಮ ನಿತ್ಯದ ಜೀವನದಲ್ಲಿ ರೂಢಿಸಿಕೊಂಡರೆ ವಯಸ್ಸಾದವರು ಆಹಾರದಿಂದ ಉಂಟಾಗುವ ಸಮಸ್ಯೆಯಿಂದ ದೂರವಾಗಿ ನೆಮ್ಮದಿ ಮತ್ತು ಆರೋಗ್ಯಯುತ ಸಂಧ್ಯಾಕಾಲವನ್ನು ಕಳೆಯಲು ಸಾಧ್ಯವಾಗುತ್ತದೆ.
-
ಚಾಣಕ್ಯ ನೀತಿ: ಜೀವನದ ದಿಕ್ಕನ್ನೇ ಬದಲಿಸಬಲ್ಲ 4 ಪ್ರಮುಖ ಜೀವನ ಪಾಠಗಳು! -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications